ಒಲಿಂಪಿಕ್ಸ್‌ ಅರ್ಹತೆಗೆ ಭಾರತದ ಪ್ರಯತ್ನ


Team Udayavani, Jun 6, 2019, 6:00 AM IST

TOKYA

ಭುವನೇಶ್ವರ: ಎಫ್ಐಎಚ್‌ ಸಿರೀಸ್‌ ಫೈನಲ್ಸ್‌ ಗುರುವಾರದಿಂದ ಇಲ್ಲಿ ಆರಂಭವಾಗಲಿದ್ದು, 8 ಬಾರಿಯ ಚಾಂಪಿಯನ್‌ ಭಾರತವು 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ತನ್ನ ಪ್ರಯತ್ನ ಆರಂಭಿಸಲಿದೆ.

ಏಶ್ಯ, ಯುರೋಪ್‌, ಆಫ್ರಿಕಾ ಮತ್ತು ಉತ್ತರ ಅಮೆರಿಕದ ಒಟ್ಟು 8 ತಂಡಗಳು ಈ ಕೂಟದಲ್ಲಿ ಲಭ್ಯವಿರುವ 2 ಒಲಿಂಪಿಕ್ಸ್‌ ಅರ್ಹತೆ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸುವ ಸಾಧ್ಯತೆಯಿದೆ.

ಅಗ್ರ ಶ್ರೇಯಾಂಕದ ಭಾರತವಲ್ಲದೇ “ಎ’ ಬಣದಲ್ಲಿ ಪೋಲೆಂಡ್‌, ರಶ್ಯ ಮತ್ತು ಉಜ್ಬೆಕಿಸ್ಥಾನ ತಂಡಗಳಿದ್ದರೆ “ಬಿ’ ಬಣದಲ್ಲಿ ದಕ್ಷಿಣ ಆಫ್ರಿಕಾ, ಏಶ್ಯನ್‌ ಗೇಮ್ಸ್‌ ಚಾಂಪಿಯನ್‌ ಜಪಾನ್‌, ಅಮೆರಿಕ ಮತ್ತು ಮೆಕ್ಸಿಕೊ ತಂಡಗಳಿವೆ.

ಭಾರತ ಫೇವರಿಟ್‌
ವಿಶ್ವ ರ್‍ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿರುವ ಭಾರತವೇ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡವಾಗಿದೆ. ಆಟದ ಗುಣಮಟ್ಟ, ತಂತ್ರ ಮತ್ತು ವಿಶ್ವ ಹಾಕಿಯಲ್ಲಿನ ಸ್ಥಾನಮಾನವನ್ನು ಗಮನಿಸಿದರೆ ಭಾರತವು ಉಳಿದ ತಂಡಗಳಿಗಿಂತ ಉನ್ನತ ಮಟ್ಟದಲ್ಲಿದೆ. ರ್‍ಯಾಂಕಿಂಗ್‌ ಅನ್ನು ಗಮನಿಸಿದರೆ ದಕ್ಷಿಣ ಆಫ್ರಿಕಾ ಮತ್ತು ಜಪಾನ್‌ ಮುಂದಿನೆರಡು ತೀವ್ರ ಪೈಪೋಟಿ ನೀಡಬಹುದಾದ ತಂಡಗಳಾಗಿವೆ.

ರಶ್ಯ ಮೊದಲ ಎದುರಾಳಿ
ರಶ್ಯ ತಂಡವನ್ನು ಎದುರಿಸುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ಈ ಪಂದ್ಯವನ್ನು ಭಾರತ ಭಾರೀ ಅಂತರದಿಂದ ಗೆದ್ದೀತೆಂಬ ನಿರೀಕ್ಷೆ ಇದೆ.

ಜಕಾರ್ತಾ ಏಶ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸುವ ಒಳ್ಳೆಯ ಅವಕಾಶ ಸಿಕ್ಕಿತ್ತು. ಆದರೆ ಸೆಮಿಫೈನಲ್‌ನಲ್ಲಿ ಮಲೇಶ್ಯಕ್ಕೆ ಶರಣಾದ ಕಾರಣ ಸಾಧ್ಯವಾಗಲಿಲ್ಲ. ಈ ವರ್ಷದ ಅಜ್ಲಾನ್‌ ಶಾ ಕಪ್‌ನಲ್ಲೂ ಭಾರತ ಪ್ರಶಸ್ತಿ ಗೆಲ್ಲಲು ವಿಫ‌ಲವಾಯಿತು. ಫೈನಲ್‌ನಲ್ಲಿ ಅದು ದಕ್ಷಿಣ ಕೊರಿಯಕ್ಕೆ ಶರಣಾಗಿತ್ತು.

ಕೋಚ್‌ಗೆ ಮೊದಲ ಪರೀಕ್ಷೆ
ಎಫ್ಐಎಚ್‌ ಸೀರೀಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ಭಾರತದ ಮೊದಲ ಹೆಜ್ಜೆ. ಮಾತ್ರವಲ್ಲದೇ ಇದು ತಂಡದ ನೂತನ ಕೋಚ್‌ ಆಸ್ಟ್ರೇಲಿ ಯದ ಗ್ರಹಾಂ ರೀಡ್‌ ಅವರಿಗೆ ಮೊದಲ ಪರೀಕ್ಷೆಯೂ ಆಗಲಿದೆ. ಆಸ್ಟ್ರೇಲಿಯನ್‌ ತಂಡದ ಮಾಜಿ ಕೋಚ್‌ ಆಗಿದ್ದ ರೀಡ್‌ ಅವರು ಆಟಗಾರರ ಫಾರ್ಮ್ಗೆ ಹೆಚ್ಚಿನ ಮಹತ್ವ ನೀಡಿದ್ದಾರೆ.

ರೂಪಿಂದರ್‌ ಪಾಲ್‌ ಸಿಂಗ್‌ ಅವರನ್ನು ತಂಡ ಕೈಬಿಟ್ಟಿದೆ. ಅವರ ಬದಲು ಕೋಚ್‌ ಹರ್ಮನ್‌ಪ್ರೀತ್‌ ಸಿಂಗ್‌, ವರುಣ್‌ ಕುಮಾರ್‌ ಮತ್ತು ಅಮಿತ್‌ ರೋಹಿದಾಸ್‌ ಅವರ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.