ನಿಖತ್‌ ಜರೀನ್‌ಗೆ ಕೆಸಿಆರ್‌ ಅಭಿನಂದನೆ: ವಿಶ್ವ ವನಿತಾ ಬಾಕ್ಸಿಂಗ್‌ನಲ್ಲಿ ಸ್ವರ್ಣ ಸಾಧನೆ


Team Udayavani, May 20, 2022, 10:57 PM IST

ನಿಖತ್‌ ಜರೀನ್‌ಗೆ ಕೆಸಿಆರ್‌ ಅಭಿನಂದನೆ: ವಿಶ್ವ ವನಿತಾ ಬಾಕ್ಸಿಂಗ್‌ನಲ್ಲಿ ಸ್ವರ್ಣ ಸಾಧನೆ

ಹೈದರಾಬಾದ್‌: ವಿಶ್ವ ವನಿತಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ನಿಖತ್‌ ಜರೀನ್‌ ಅವರ ಸಾಧನೆಗೆ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ತಾಂಬುಲ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಜರೀನ್‌ ಅಂತಾರಾಷ್ಟ್ರೀಯ ಕ್ರೀಡಾ ವೇದಿಕೆ ಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ. ನಿಜಾಮಾಬಾದ್‌ ಜಿಲ್ಲೆಯ ನಿಖತ್‌ ಅವರ ಈ ಸಾಧನೆಗೆ ಸರಕಾರ ಅಭಿನಂದನೆ ಸಲ್ಲಿಸು ತ್ತಿದೆ ಎಂದು ಸಿಎಂ ಕಚೇರಿಯ ಪ್ರಕಟನೆ ತಿಳಿಸಿದೆ.

ರಾಜ್ಯ ಸರಕಾರದ ಪ್ರೋತ್ಸಾಹ ದಿಂದ ನಿಖತ್‌ ಇದೀಗ ಬಾಕ್ಸಿಂಗ್‌ನಲ್ಲಿ ವಿಶ್ವ ಚಾಂಪಿಯನ್‌ ಆಗಿರುವುದು ಹೆಮ್ಮೆಯ ಕ್ಷಣವಾಗಿದೆ ಎಂದು ಚಂದ್ರಶೇಖರ್‌ ರಾವ್‌ ತಿಳಿಸಿದ್ದಾರೆ.

ಐದನೇ ವನಿತಾ ಬಾಕ್ಸರ್‌
52 ಕೆ.ಜಿ. ವಿಭಾಗದ ಫ್ಲೈವೇಟ್‌ ವಿಭಾಗದಲ್ಲಿ ಸ್ಪರ್ಧಿಸಿದ 25ರ ಹರೆಯದ ನಿಖತ್‌ ಜರೀನ್‌ ಅವರು ಥಾಯ್ಲೆಂಡಿನ ಜಿಟ್‌ಪಾಂಗ್‌ ಜುಟಮಾಸ್‌ ಅವರನ್ನು 5-0 ಅಂತರದಿಂದ ಉರುಳಿಸಿ ಚಿನ್ನ ಜಯಿಸಿದ್ದರು. ಇದರೊಂದಿಗೆ ಸ್ವರ್ಣ ಸಾಧನೆಗೈದ ಭಾರತದ ಐದನೇ ವನಿತಾ ಬಾಕ್ಸರ್‌ ಎಂಬ ಗೌರವಕ್ಕೆ ಪಾತ್ರರಾದರು. ಈ ಹಿಂದೆ ದಾಖಲೆ 6 ಬಾರಿಯ ವಿಶ್ವ ಚಾಂಪಿಯನ್‌ ಮೇರಿ ಕೋಮ್‌ (2002, 2005, 2006, 2008, 2010 ಮತ್ತು 2018), ಸರಿತಾ ದೇವಿ (2006), ಜೆನ್ನಿ ಆರ್‌.ಎಲ್‌. (2006) ಮತ್ತು ಲೇಖಾ ಕೆ.ಸಿ. (2006) ವಿಶ್ವ ಚಾಂಪಿಯನ್‌ ಸಾಧನೆ ಮಾಡಿದ್ದರು.

ಮೇರಿ ಕೋಮ್‌ ಅವರ 2018ರ ವಿಶ್ವ ಚಾಂಪಿಯನ್‌ ಸಾಧನೆಯ ಬಳಿಕ ಇದು ಭಾರತಕ್ಕೆ ಒಲಿದ ಮೊದಲ ಚಿನ್ನದ ಪದಕ ಮತ್ತು ವಿಶ್ವ ಚಾಂಪಿಯನ್‌ ಸಾಧನೆಯಾಗಿದೆ. ಈ ಸಾಧನೆಗೈದ ನಿಖತ್‌ ಈ ಹಿಂದೆ ಜೂನಿಯರ್‌ “ಯೂತ್‌ ವರ್ಲ್ಡ್’ ಚಾಂಪಿಯ್‌ ಕೂಡ ಆಗಿದ್ದರು.

 

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.