ಭಾರತಕ್ಕೆ ಟೆಸ್ಟ್‌ ಸರಣಿ ಗೆಲುವಿನ ಉಜ್ವಲ ಅವಕಾಶ: ಇಂಜಿನಿಯರ್‌


Team Udayavani, Nov 29, 2018, 6:40 AM IST

farokh-engineer-ss.jpg

ಮುಂಬಯಿ: ಈ ಬಾರಿ ಆಸ್ಟ್ರೇಲಿಯದಲ್ಲಿ ಟೆಸ್ಟ್‌ ಸರಣಿ ಗೆಲ್ಲುವ ಉಜ್ವಲ ಅವಕಾಶವೊಂದು ಭಾರತದ ಮುಂದಿದೆ ಎಂಬುದಾಗಿ ಮಾಜಿ ವಿಕೆಟ್‌ ಕೀಪರ್‌ ಫಾರೂಖ್‌ ಇಂಜಿನಿಯರ್‌ ಹೇಳಿದ್ದಾರೆ. ಪ್ರಮುಖ ಆಟಗಾರರಾದ ಸ್ಟೀವ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಅವರ ಅನುಪಸ್ಥಿತಿಯೇ ಇದಕ್ಕೆ ಕಾರಣ ಎಂಬುದು ಅವರ ಅಭಿಪ್ರಾಯ.

“ಆಸ್ಟ್ರೇಲಿಯ ತಂಡದಲ್ಲಿ 2 ದೊಡ್ಡ ಹೆಸರುಗಳು ಕಾಣೆಯಾಗಿವೆ, ಸ್ಮಿತ್‌ ಮತ್ತು ವಾರ್ನರ್‌. ಪ್ರಮುಖ ಆಟಗಾರರ ಗೈರು ಎನ್ನುವುದು ಒಂದು ತಂಡವನ್ನು ಯಾವತ್ತೂ ದುರ್ಬಲಗೊಳಿಸುತ್ತದೆ. ಹೀಗಾಗಿ ಆಸ್ಟ್ರೇಲಿಯದಲ್ಲಿ ಸರಣಿ ಗೆಲ್ಲಲು ಭಾರತಕ್ಕೆ ಇದಕ್ಕಿಂತ ಉತ್ತಮ ಅವಕಾಶ ಸಿಗದು’ ಎಂದು ಇಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದರು.

“ಭಾರತವೀಗ ಉತ್ತಮ ಪ್ರದರ್ಶನ ನೀಡುತ್ತಿದೆ. ನಾವು ವಿರಾಟ್‌ ಕೊಹ್ಲಿ ರೂಪದಲ್ಲಿ ಗ್ರೇಟ್‌ ಕ್ಯಾಪ್ಟನ್‌ನನ್ನು ಹೊಂದಿದ್ದೇವೆ. ಉತ್ತಮ ಆಲ್‌ರೌಂಡ್‌ ಹಾಗೂ ಸಮತೋಲಿತ ತಂಡ ನಮ್ಮದಾಗಿದೆ. ಉತ್ತಮ ದರ್ಜೆಯ ಪೇಸ್‌ ಹಾಗೂ ಸ್ಪಿನ್‌ ಬೌಲರ್‌ಗಳನ್ನು ನಮ್ಮಲಿದ್ದಾರೆ. ಇವೆಲ್ಲದರ ಲಾಭವನ್ನೆತ್ತಿದರೆ ಆಸ್ಟ್ರೇಲಿಯವನ್ನು ಅವರದೇ ಅಂಗಳದಲ್ಲಿ ಮಣಿಸಲು ಸಾಧ್ಯವಿದೆ’ ಎಂದರು.

ಪಾರ್ಥಿವ್‌ ಮೊದಲ ಆಯ್ಕೆ
ತಂಡದಲ್ಲಿರುವ ಇಬ್ಬರು ವಿಕೆಟ್‌ ಕೀಪರ್‌ಗಳ ಕುರಿತು ಪ್ರತಿಕ್ರಿಯಿಸಿದ ಮಾಜಿ ಸ್ಟಂಪರ್‌, “35ರ ಪ್ರಾಯದವರಾದರೂ ಪಾರ್ಥಿವ್‌ ಪಟೇಲ್‌ ಟೆಸ್ಟ್‌ ತಂಡದ ಮೊದಲ ಆಯ್ಕೆಯಾಗಬೇಕು. ರಿಷಬ್‌ ಪಂತ್‌ ಅವರನ್ನು ಸೀಮಿತ ಓವರ್‌ಗಳ ಪಂದ್ಯಗಳಿಗೆ ಮೀಸಲಿಡಬೇಕು. ಪಂತ್‌ ಚೆಂಡಿನ ಮೇಲೆ ಕಣ್ಣಿಡುವ ಮೊದಲೇ ರಿವರ್ ಸ್ವೀಪ್‌ಗೆ ಮುಂದಾಗಿ ವಿಕೆಟ್‌ ಕೈಚೆಲ್ಲುತ್ತಿದ್ದಾರೆ’ ಎಂದರು.

“ದುರದೃಷ್ಟವಶಾತ್‌ ನಾವಿಂದು ಬ್ಯಾಟ್ಸ್‌ಮನ್‌-ಕೀಪರ್‌ಗಳನ್ನು ಕಾಣುತ್ತಿದ್ದೇವೆಯೇ ಹೊರತು ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ಗಳನ್ನಲ್ಲ. ನನ್ನ ಕಾಲದಲ್ಲಿ, ನೀವು ಮೊದಲು ಪರಿಪೂರ್ಣ ವಿಕೆಟ್‌ ಕೀಪರ್‌ ಆಗಬೇಕಿತ್ತು. ಈಗ ಪರಿಸ್ಥಿತಿ ಉಲ್ಟಾ ಆಗಿದೆ. ನೀವು ದೊಡ್ಡ ಸ್ಕೋರ್‌ ಗಳಿಸಿಯೂ ವಿಕೆಟ್‌ ಹಿಂದುಗಡೆ ಕ್ಯಾಚ್‌ಗಳನ್ನು ಕೈಚೆಲ್ಲಿದರೆ ಅದರಿಂದ ತಂಡಕ್ಕೆ ಭಾರೀ ನಷ್ಟ ಖಚಿತ. ಹೀಗಾಗಿ ನೀವು ಮೊದಲು ವಿಕೆಟ್‌ ಕೀಪರ್‌ ಆಗಬೇಕು’ ಎಂಬ ಸಲಹೆ ನೀಡಿದರು.

ಈಗಿನ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್‌.ಕೆ. ಪ್ರಸಾದ್‌ ಅವರ ಕಾರ್ಯವೈಖರಿ ಬಗ್ಗೆ ಅಪಸ್ವರವೆತ್ತಿದ ಇಂಜಿನಿಯರ್‌, ದಿಲೀಪ್‌ ವೆಂಗಸರ್ಕಾರ್‌ ಅವರಂಥವರು ಈ ಹುದ್ದೆಗೆ ಮರಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.