19ನೇ ಟೆಸ್ಟ್‌ನತ್ತ ಭಾರತದ ಅಜೇಯ ಓಟ


Team Udayavani, Feb 8, 2017, 3:45 AM IST

07-SPORTS-3.jpg

ಹೈದರಾಬಾದ್‌: ಇತ್ತೀಚೆಗಷ್ಟೇ ಪ್ರವಾಸಿ ಇಂಗ್ಲೆಂಡಿಗೆ ಎಲ್ಲ ಮೂರು ಪ್ರಕಾರಗಳ ಕ್ರಿಕೆಟ್‌ನಲ್ಲೂ ಸರಣಿ ಸೋಲುಣಿಸಿದ ಭಾರತ, ಗುರುವಾರದಿಂದ ಹೈದರಾಬಾದ್‌ನಲ್ಲಿ ಆರಂಭ ವಾಗಲಿರುವ ಏಕೈಕ ಟೆಸ್ಟ್‌ ಪಂದ್ಯದಲ್ಲೂ ತನ್ನ ಪಾರಮ್ಯ ಸಾಧಿಸಲು ಮುಂದಾಗಲಿದೆ. 

ಸಾಮಾನ್ಯ ತಂಡವಾಗಿರುವ ಬಾಂಗ್ಲಾ ದೇಶವನ್ನು ಯಾವ ರೀತಿಯಲ್ಲೂ ಕಡೆಗಣಿಸ ಬಾರದೆಂಬುದು  ನಿಜವಾದರೂ  ಟೀಮ್‌ ಇಂಡಿಯಾದ ತಾಕತ್ತಿನ ಮುಂದೆ ಈ ಮಾತಿಗೆ ಅಷ್ಟೊಂದು ಬೆಲೆ ಸಿಗಲಿಕ್ಕಿಲ್ಲ ಎಂದೇ ಭಾವಿಸಲಾಗಿದೆ. ಹೀಗಾಗಿ ಟೀಮ್‌ ಇಂಡಿಯಾ ತನ್ನ ಅಜೇಯ ಟೆಸ್ಟ್‌ ಓಟವನ್ನು 19 ಪಂದ್ಯಗಳಿಗೆ ವಿಸ್ತರಿಸುವುದರಲ್ಲಿ ಅನುಮಾನವಿಲ್ಲ. ಆಗ ಇದೊಂದು ನೂತನ ದಾಖಲೆಯಾಗಲಿದೆ.

ಕಳೆದ 18 ತಿಂಗಳ ಅವಧಿಯಲ್ಲಿ ಶ್ರೀಲಂಕಾ, ದಕ್ಷಿಣ ಆಫ್ರಿಕಾ, ವೆಸ್ಟ್‌ ಇಂಡೀಸ್‌, ನ್ಯೂಜಿ ಲ್ಯಾಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧ ಸರಣಿ ಗೆದ್ದಿರುವ ಭಾರತ, ಸತತ 18 ಟೆಸ್‌ಗಳಲ್ಲಿ ಸೋಲಿನ ಮುಖವನ್ನೇ ಕಂಡಿಲ್ಲ. 2015ರ ಶ್ರೀಲಂಕಾ ಪ್ರವಾಸದ ವೇಳೆ ಗಾಲೆಯಲ್ಲಿ ಸೋತ ಬಳಿಕ ಭಾರತವನ್ನು ಮಣಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಆದರೆ ಗಾಲೆ ಸೋಲಿನ ಹೊರತಾಗಿಯೂ ಭಾರತ 2-1 ಅಂತರದಿಂದ ಸರಣಿ ಗೆದ್ದು ಪರಾಕ್ರಮ ಮೆರೆಯಿತು. 

ಭಾರತ ಟೆಸ್ಟ್‌ ಕ್ರಿಕೆಟಿನ ನಂ.1 ತಂಡ. ಬಾಂಗ್ಲಾ ದೇಶ 9ನೇ ಸ್ಥಾನದಲ್ಲಿದೆ. ಅಂಗಳಕ್ಕಿಳಿದ ಬಳಿಕ ರ್‍ಯಾಂಕಿಂಗ್‌ ಅಂತರ ನಗಣ್ಯವಾದರೂ ಕೊಹ್ಲಿ ಪಡೆಯನ್ನು ಕಟ್ಟಿಹಾಕುವುದು ಮಾತ್ರ ಬಾಂಗ್ಲಾಕ್ಕೆ ಭಾರೀ ಸವಾಲಾಗಿ ಪರಿಣಮಿಸುವುದು ಖಚಿತ. ಒಂದು ರೀತಿಯಲ್ಲಿ ಹೇಳುವುದಾದರೆ, ಈ ಏಕೈಕ ಟೆಸ್ಟ್‌ ಪಂದ್ಯ ಮುಂಬರುವ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್‌ ಸರಣಿಗಾಗಿ ಭಾರತಕ್ಕೊಂದು ಅಭ್ಯಾಸ!

ಐತಿಹಾಸಿಕ ಪಂದ್ಯವೇನಲ್ಲ: ರಹೀಂ
ಬಾಂಗ್ಲಾದೇಶ ತಂಡ ಭಾರತದಲ್ಲಿ ಮೊದಲ ಸಲ ಟೆಸ್ಟ್‌ ಆಡಲಿಳಿಯುವ ಕ್ಷಣಗಣನೆಯಲ್ಲಿದೆ. ಅಂದಮಾತ್ರಕ್ಕೆ ಇದೇನೂ ಐತಿಹಾಸಿಕ ಪಂದ್ಯವೆಂದು ತನಗೆ ಅನಿಸುತ್ತಿಲ್ಲ ಎಂದಿದ್ದಾರೆ ಬಾಂಗ್ಲಾ ನಾಯಕ ಮುಶ್ಫಿಕರ್‌ ರಹೀಂ.

“ಇದೇನೂ ಐತಿಹಾಸಿಕ ಟೆಸ್ಟ್‌ ಎಂದು ಅನಿಸುವುದಿಲ್ಲ. ನನ್ನ ಮಟ್ಟಿಗೆ ಹೇಳುವುದಾರದೆ ಇದು ಕೇವಲ ಇನ್ನೊಂದು ಟೆಸ್ಟ್‌, ಅಷ್ಟೇ…’ ಎಂದು ರಹೀಂ ಹೇಳಿದರು. ಹಾಗೆಯೇ ಟೆಸ್ಟ್‌ ಮಾನ್ಯತೆ ಪಡೆದು 17 ವರ್ಷಗಳಷ್ಟು ಬಳಿಕ ಭಾರತದಲ್ಲಿ ಮೊದಲ ಸಲ ಟೆಸ್ಟ್‌ ಆಡುತ್ತಿರುವುದೂ ದೊಡ್ಡ ವಿಷಯವಲ್ಲ ಎಂಬ ರೀತಿಯಲ್ಲಿ ಪ್ರತಿಕ್ರಿಯಿಸಿದರು. 

“ಇದು ಭಾರತದಲ್ಲಿ ನಾವು ಆಡುತ್ತಿರುವ ಮೊದಲ ಟೆಸ್ಟ್‌. ಇಲ್ಲಿ, ನಮಗೆ ಟೆಸ್ಟ್‌ ಮಾನ್ಯತೆ ಲಭಿಸಿ ಎಷ್ಟು ವರ್ಷಗಳಾದವು ಎಂಬುದು ಮುಖ್ಯವಲ್ಲ. ಈ ಕುರಿತೂ ನಾವು ಚಿಂತಿಸುತ್ತಿಲ್ಲ…’ ಎಂದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.