ಲಂಕಾ ತಂಡಕ್ಕೆ ಕೋವಿಡ್ ಕಾಟ: ಭಾರತ-ಶ್ರೀಲಂಕಾ ಸರಣಿ ಮುಂದೂಡಿಕೆ
Team Udayavani, Jul 10, 2021, 8:07 AM IST
ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಮತ್ತೂಂದು ಕೋವಿಡ್ ಪ್ರಕರಣ ಕಂಡು ಬಂದಿದೆ. ತಂಡದ ಅಂಕಿಸಂಖ್ಯೆ ವಿಶ್ಲೇಷಕ ಜಿ.ಟಿ. ನಿರೋಶನ್ ಅವರಿಗೆ ಕೊರೊನಾ ತಗುಲಿರುವುದಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಶುಕ್ರವಾರ ತಿಳಿಸಿದೆ. ಇದರ ಪರಿಣಾಮ ಭಾರತ-ಶ್ರೀಲಂಕಾ ನಡುವಿನ ಸೀಮಿತ ಓವರ್ಗಳ ಕ್ರಿಕೆಟ್ ಸರಣಿ ಮುಂದೂಡಿಕೆಯಾಗಿದೆ.
ಜುಲೈ 13ಕ್ಕೆ ಆರಂಭವಾಗಬೇಕಿದ್ದ ಮೊದಲ ಏಕದಿನ ಪಂದ್ಯ ಜುಲೈ 18ರಂದು ನಡೆಯಲಿದೆ. ಗುರುವಾರ ಲಂಕಾ ತಂಡದ ಬ್ಯಾಟಿಂಗ್ ಕೋಚ್, ಜಿಂಬಾಬ್ವೆಯ ಗ್ರ್ಯಾಂಟ್ ಫ್ಲವರ್ ಅವರಿಗೆ ಸೋಂಕು ದೃಢ ಪಟ್ಟಿತ್ತು. ತಂಡ ಇಂಗ್ಲೆಂಡ್ನಿಂದ ಆಗಮಿಸಿದ ಬಳಿಕ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರ ಬೆನ್ನಲ್ಲೇ ಈ ಪ್ರಕರಣ ನಡೆದಿರುವುದು ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಇಕ್ಕಟ್ಟಿಗೆ ಸಿಕ್ಕಿಸಿದೆ.
ಇದನ್ನೂ ಓದಿ:ಹರ್ಮನ್ ಬಳಗಕ್ಕೆ ವರುಣನ ಕಾಟ: ಡಿಎಲ್ ನಿಯಮದಡಿ ಗೆದ್ದ ಇಂಗ್ಲೆಂಡ್ ವನಿತೆಯರು
ಈ ನಡುವೆ ಇಂಗ್ಲೆಂಡ್ನಲ್ಲಿ ಕೊರೊನಾ ನಿಯಮಾವಳಿಯನ್ನು ಉಲ್ಲಂ ಸಿ ಸುತ್ತಾಟ ನಡೆಸಿ ನಿಷೇಧಕ್ಕೊಳಗಾಗಿರುವ ಮೂವರು ಲಂಕಾ ಕ್ರಿಕೆಟಿಗರ ವಿಚಾರಣೆಗಾಗಿ ತನಿಖಾ ತಂಡವೊಂದನ್ನು ರಚಿಸಲಾಗಿದೆ. ಜು.13ರಿಂದ ಭಾರತ- ಲಂಕಾ ನಡುವೆ 3 ಏಕದಿನ, 3 ಟಿ20 ಪಂದ್ಯಗಳನ್ನು ನಡೆಸಲು ಈ ಹಿಂದೆ ನಿರ್ಧರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ