ಸಿಂಧು,ಸೈನಾ, ಶ್ರೀಕಾಂತ್ಗೆ ಮತ್ತೂಂದು ಸವಾಲು
Team Udayavani, Jan 22, 2019, 12:30 AM IST
ಜಕಾರ್ತಾ: ಡಿಸೆಂಬರ್ ವೇಳೆ “ವಿಶ್ವ ಟೂರ್ ಫೈನಲ್ಸ್’ ಚಾಂಪಿಯನ್ಶಿಪ್ನೊಂದಿಗೆ ಪ್ರಶಸ್ತಿ ಬರಗಾಲವನ್ನು ನೀಗಿಸಿಕೊಂಡ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಮಂಗಳವಾರ ಆರಂಭವಾಗಲಿರುವ “ಇಂಡೋನೇಶ್ಯ ಮಾಸ್ಟರ್’ ಟೂರ್ನಿಯ ಮೂಲಕ ನೂತನ ವರ್ಷದ ಅಭಿಯಾನ ಆರಂಭಿಸಲಿದ್ದಾರೆ.
ಮಂಗಳವಾರ ಇಂಡೋನೇಶ್ಯ ಮಾಸ್ಟರ್ ಕೂಟ ಅರ್ಹತಾ ಸುತ್ತಿನೊಂದಿಗೆ ಆರಂಭವಾಗಲಿದೆ. ಸಿಂಧು ಅವರೊಂದಿಗೆ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಮಲೇಶ್ಯ ಮಾಸ್ಟರ್ ಸೆಮಿಫೈನಲ್ ಪ್ರವೇಶಿಸಿದ್ದ ಸೈನಾ ನೆಹ್ವಾಲ್ ಹಾಗೂ ಕ್ವಾರ್ಟರ್ ಫೈನಲ್ನಲ್ಲಿ ಮುಗ್ಗರಿಸಿದ್ದ ಕೆ. ಶ್ರೀಕಾಂತ್ ಸ್ಪರ್ಧಿಸಲಿದ್ದಾರೆ.
ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ನಲ್ಲಿ ಭಾಗವಹಿಸಿದ ಬಳಿಕ ಮಲೇಶ್ಯ ಮಾಸ್ಟರ್ ಕೂಟವನ್ನು ಕೈಬಿಟ್ಟಿದ್ದ ಸಿಂಧು ಬುಧವಾರದ ಮೊದಲ ಪಂದ್ಯದಲ್ಲಿ ಮಾಜಿ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಚೀನದ ಲೀ ಕ್ಸುರುಯಿ ಅವರನ್ನು ಎದುರಿಸಲಿದ್ದಾರೆ. ಸೈನಾ ನೆಹ್ವಾಲ್ ಆರಂಭಿಕ ಪಂದ್ಯದಲ್ಲಿ ಅರ್ಹತಾ ಆಟಗಾರ್ತಿ ವಿರುದ್ಧ ಆಡಲಿದ್ದಾರೆ.
ಶ್ರೀಕಾಂತ್-ಡ್ಯಾರೆನ್ ಮುಖಾಮುಖೀ
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಶ್ರೀಕಾಂತ್ ಮಲೇಶ್ಯಾದ ಲ್ಯೂಡ್ಯಾರೆನ್ ಅವರನ್ನು ಎದುರಿಸಲಿದ್ದಾರೆ. ಉಳಿದಂತೆ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸಮೀರ್ ವರ್ಮ, ಬಿ. ಸಾಯಿ ಪ್ರಣೀತ್ ಹಾಗೂ ಎಚ್.ಎಸ್. ಪ್ರಣಯ್ ಕೂಡ ಈ ಕೂಟದಲ್ಲಿದ್ದಾರೆ.
ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಹಾಗೂ ಮನು ಅತ್ರಿ-ಬಿ. ಸುಮೀತ್ ರೆಡ್ಡಿ ಜೋಡಿ ಸೆಣಸಲಿದೆ. ವನಿತಾ ಡಬಲ್ಸ್ನಲ್ಲಿ ಅಶ್ವಿನಿ ಪೊನ್ನಪ್ಪ-ಎನ್. ಸಿಕ್ಕಿ ರೆಡ್ಡಿ ಮತ್ತು ಮಿಶ್ರ ಡಬಲ್ಸ್ನಲ್ಲಿ ಪ್ರಣವ್ ಜೆರ್ರಿ ಚೋಪ್ರಾ-ಎನ್. ಸಿಕ್ಕಿ ರೆಡ್ಡಿ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ