ಸರಣಿ ಜಯಕ್ಕೆ ಟೀಂ ಇಂಡಿಯಾ ಯೋಜನೆ: ಟಾಸ್ ಗೆದ್ದ ಬಟ್ಲರ್, ಅಯ್ಯರ್ ಬದಲಿಗೆ ಪಂತ್
Team Udayavani, Mar 26, 2021, 1:02 PM IST
ಪುಣೆ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ ಇಂದಿನ ಪಂದ್ಯ ಗೆದ್ದು ಸರಣಿ ಜಯಿಸುವ ಯೋಜನೆ ಹಾಕಿಕೊಂಡಿದೆ. ಪುಣೆ ಅಂಗಳದಲ್ಲಿ ಟಾಸ್ ಗೆದ್ದ ಜೋಸ್ ಬಟ್ಲರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಕಳೆದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಪೆಟ್ಟು ಮಾಡಿಕೊಂಡಿದ್ದ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಬದಲಿಗೆ ಕೀಪರ್ ಬಟ್ಲರ್ ನಾಯಕತ್ವ ವಹಿಸಿಕೊಂಡಿದ್ದಾರೆ. ಮಾರ್ಗನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್, ಮತ್ತು ಮಾರ್ಕ್ ವುಡ್ ಬದಲಿಗೆ ಡೇವಿಡ್ ಮಲಾನ್ ಮತ್ತು ಲಿಯಾಮ್ ಲಿವಿಂಗ್ ಸ್ಟೋನ್, ರೀಸ್ ಟಾಪ್ಲೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಗಾಯಗೊಂಡು ಸರಣಿಯಿಂದಲೇ ಹೊರಬಿದ್ದಿರುವ ಶ್ರೇಯಸ್ ಅಯ್ಯರ್ ಬದಲಿಗೆ ರಿಷಭ್ ಪಂತ್ ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ: ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್. ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್.
ಇಂಗ್ಲೆಂಡ್: ಜಾಸನ್ ರಾಯ್, ಜಾನಿ ಬೇರ್ಸ್ಟೊ, ಡೇವಿಡ್ ಮಲಾನ್, ಜಾಸ್ ಬಟ್ಲರ್ (ನಾಯಕ), ಬೆನ್ ಸ್ಟೋಕ್ಸ್, ಲಿಯಮ್ ಲಿವಿಂಗ್ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರನ್, ಟಾಮ್ ಕರನ್, ಆದಿಲ್ ರಶೀದ್, ರೀಸ್ ಟಾಪ್ಲೆ.