ಭಾರತ- ಆಸೀಸ್ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ : ಮಯಾಂಕ್ ಓಪನಿಂಗ್
Team Udayavani, Nov 27, 2020, 8:45 AM IST
ಸಿಡ್ನಿ: ಸುಮಾರು 288 ದಿನಗಳ ಬಳಿಕ ಭಾರತ ತಂಡ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಆತಿಥೇಯ ಆಸೀಸ್ ವಿರುದ್ಧ ಸಿಡ್ನಿ ಅಂಗಳದಲ್ಲಿ ಇಂದು ಮೊದಲ ಏಕದಿನ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದಆರೋನ್ ಫಿಂಚ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ಈ ಪಂದ್ಯದ ವಿಶೇಷವೆಂದರೆ ಭಾರತದ ಆಟಗಾರರು 1992ರ ಏಕದಿನ ವಿಶ್ವಕಪ್ ವೇಳೆ ಧರಿಸಿದಂತಹ “ನೇವಿ ಬ್ಲೂ’ ಬಣ್ಣದ ಜೆರ್ಸಿಯಲ್ಲಿ ಆಡಲಿಳಿಯುವುದು. ಆಸ್ಟ್ರೇಲಿಯದಲ್ಲೇ ನಡೆದ ಅಂದಿನ ವಿಶ್ವಕಪ್ನಲ್ಲಿ ಮೊದಲ ಸಲ ಬಣ್ಣದ ಉಡುಗೆಯನ್ನು ಪರಿಚಯಿಸಲಾಗಿತ್ತು. ಆದರೆ 9 ತಂಡಗಳು ಪಾಲ್ಗೊಂಡ ಅಂದಿನ ಕೂಟದಲ್ಲಿ ಭಾರತ 7ನೇ ಸ್ಥಾನಕ್ಕೆ ಕುಸಿದುದನ್ನು ಮರೆಯುವಂತಿಲ್ಲ!
ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕಳೆದ ಕಿವೀಸ್ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ಮಯಾಂಕ್ ಈ ಬಾರಿ ಉತ್ತಮ ಪ್ರದರ್ಶನ ನೀಡಿ ತಂಡದಲ್ಲಿ ಸ್ಥಾನ ಗಟ್ಟಿಗೊಳಿಸುವ ಯೋಜನೆಯಲ್ಲಿದ್ದಾರೆ.
ಭಾರತ: ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ನವದೀಪ್ ಸೈನಿ, ಯಜುವೇಂದ್ರ ಚಹಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯ: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೋಯಿನಿಸ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್ವುಡ್, ಆ್ಯಡಂ ಝಂಪ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ಭಾರೀ ಸ್ಫೋಟದ ಸದ್ದಿಗೆ ಬೆಚ್ಚಿಬಿದ್ದ ಶಿವಮೊಗ್ಗ ಜನತೆ
ನಿಗದಿಯಂತೆ ಕಾಮನ್ವೆಲ್ತ್ ಗೇಮ್ಸ್: ಸಿಡಬ್ಲ್ಯುಜಿ ಫೆಡರೇಶನ್ ವಿಶ್ವಾಸ
ಸಿಸಿಬಿ ಪೊಲೀಸರ ಕಾರ್ಯಾಚರಣೆ : 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ
ತನ್ನನ್ನು ಧೋನಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಂತ್
ಪರೀಕ್ಷೆ ಪಾಸಾಯ್ತು ಹಾಕ್-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ