INDvsBAN; ಗಾಯಗೊಂಡ ಹಾರ್ದಿಕ್ ಪಾಂಡ್ಯ ಬಗ್ಗೆ ಮಹತ್ವದ ಮಾಹಿತಿ ನೀಡಿದ ಬಿಸಿಸಿಐ
Team Udayavani, Oct 19, 2023, 7:04 PM IST
ಪುಣೆ: ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತದ ಉಪ ನಾಯಕ ಹಾರ್ದಿಕ್ ಪಾಂಡ್ಯ ಅವರು ಗಾಯಗೊಂಡಿದ್ದಾರೆ. ಬೌಲಿಂಗ್ ಮಾಡುತ್ತಿದ್ದ ವೇಳೆ ನೋವಿಗೆ ಒಳಗಾದ ಹಾರ್ದಿಕ್ ಪಾಂಡ್ಯ ಕೂಡಲೇ ಮೈದಾನ ತೊರೆದರು.
ಪಂದ್ಯ 9ನೇ ಓವರ್ ವೇಳೆ ತನ್ನ ಮೊದಲ ಓವರ್ ಎಸೆಯಲು ಬಂದ ಹಾರ್ದಿಕ್ ಪಾಂಡ್ಯ ಅವರು ಸ್ಲಿಪ್ ಆದರು. ಲಿಟನ್ ದಾಸ್ ನೇರವಾಗಿ ಬಾರಿಸಿದ ಚೆಂಡನ್ನು ನಿಲ್ಲಿಸುವ ಪ್ರಯತ್ನದಲ್ಲಿ ಹಾರ್ದಿಕ್ ಪಾಂಡ್ಯ ಜಾರಿದರು. ಕೂಡಲೇ ಫಿಸಿಯೊ ಮೈದಾನಕ್ಕೆ ಧಾವಿಸಿದರು. ಬಳಿಕ ಹಾರ್ದಿಕ್ ಪಾಂಡ್ಯ ಮೈದಾನ ತೊರೆಯಬೇಕಾಯಿತು. ಓವರ್ ನ ಉಳಿದ ಎಸೆತಗಳನ್ನು ವಿರಾಟ್ ಕೊಹ್ಲಿ ಅವರು ಪೂರ್ಣಗೊಳಿಸಿದರು.
“ಸದ್ಯಕ್ಕೆ ಹಾರ್ದಿಕ್ ಪಾಂಡ್ಯ ಅವರ ಗಾಯವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅವರನ್ನು ಸ್ಕ್ಯಾನ್ ಗಾಗಿ ಕರೆದುಕೊಂಡು ಹೋಗಲಾಗುತ್ತಿದೆ” ಎಂದು ಬಿಸಿಸಿಐ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ. 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ತಂಜಿದ್ ಹಸನ್ 51 ರನ್, ಲಿಟನ್ ದಾಸ್ 66 ರನ್ ಗಳಿಸಿದರು. ಮೊಹಮದುಲ್ಲಾ 46 ರನ್ ಮಾಡಿದರು.
🚨 Update 🚨
Hardik Pandya’s injury is being assessed at the moment and he is being taken for scans.
Follow the match ▶️ https://t.co/GpxgVtP2fb#CWC23 | #TeamIndia | #INDvBAN | #MeninBlue pic.twitter.com/wuKl75S1Lu
— BCCI (@BCCI) October 19, 2023
ಭಾರತದ ಪರ ಬುಮ್ರಾ, ಸಿರಾಜ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಕಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ