ಹ್ಯಾಮಿಲ್ಟನ್ ನಲ್ಲೇ ಸರಣಿ ವಶಕ್ಕೆ ಕೊಹ್ಲಿ ಪಡೆಯ ಯೋಜನೆ; ಕಿವೀಸ್ ತಂಡದಲ್ಲಿ ಒಂದು ಬದಲಾವಣೆ
Team Udayavani, Jan 29, 2020, 12:02 PM IST
ಹ್ಯಾಮಿಲ್ಟನ್: ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ವಿರಾಟ್ ಪಡೆ ಮೂರನೇ ಪಂದ್ಯಕ್ಕೆ ಸಜ್ಜಾಗಿದೆ. ಹ್ಯಾಮಿಲ್ಟನ್ ನ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡುವ ಸಿದ್ದತೆಯಲ್ಲಿದೆ ಟೀಂ ಇಂಡಿಯಾ.
ಸೆಡಾನ್ ಪಾರ್ಕ್ ನಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ಕೈಗೊಂಡಿದೆ.
ಕಿವೀಸ್ ತಂಡ ಈ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಿಕೊಂಡಿದ್ದು, ಬ್ಲೇರ್ ಟಿಕ್ನರ್ ಬದಲು ಸ್ಕಾಟ್ ಕುಗ್ಲಿಜನ್ ಗೆ ಅವಕಾಶ ನೀಡಲಾಗಿದೆ.
ಕಳೆದೆರಡು ಪಂದ್ಯಗಳಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕೆ. ಎಲ್. ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಮೇಲೆ ತಂಡ ಹೆಚ್ಚಿನ ನಂಬಿಕೆ ಇರಿಸಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿ ಶಾಸ್ತ್ರಿ ಅವರು ರಾಹುಲ್-ಅಯ್ಯರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ “ಹಿಟ್ಮ್ಯಾನ್’ ಖ್ಯಾತಿಯ ರೋಹಿತ್ ಶರ್ಮ ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ.
ಹೇಗಿದೆ ಸೆಡ್ಡಾನ್ ಪಾರ್ಕ್ ಪಿಚ್;
“ಸೆಡ್ಡನ್ ಪಾರ್ಕ್’ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು ಬೃಹತ್ ಮೊತ್ತ ದಾಖಲಾಗುವ ಸಾಧ್ಯತೆಯಿದೆ. ಕಳೆದ 5 ಟಿ20 ಪಂದ್ಯಗಳಲ್ಲಿ ಇಲ್ಲಿ ಇನ್ನೂರರ ಸಮೀಪ ರನ್ ದಾಖಲಾಗಿದೆ. ಇನ್ನು ಮೊದಲು ಬ್ಯಾಟ್ ಮಾಡಿದ ತಂಡವೇ ಹೆಚ್ಚು ಪಂದ್ಯಗಳನ್ನು ಗೆದ್ದಿರುವುದು ವಿಶೇಷ.
ಭಾರತ: ರೋಹಿತ್ ಶರ್ಮ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಐಯ್ಯರ್, ಮನೀಷ್ ಪಾಂಡೆ, ಶಿವಂ ದುಬೆ, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಯಜುವೇಂದ್ರ ಚಹಲ್, ಜಸ್ ಪ್ರೀತ್ ಬುಮ್ರಾ.
ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೊ, ಕೇನ್ ವಿಲಿಯಮ್ಸನ್ (ನಾಯಕ), ಕಾಲಿನ್ ಡಿ ಗ್ರ್ಯಾಂಡ್ಹೋಮ್, ರಾಸ್ ಟೇಲರ್, ಟಿಮ್ ಸೀಫರ್ಟ್, ಮಿಚೆಲ್ ಸ್ಯಾಂಟ್ನರ್, ಸ್ಕಾಟ್ ಕುಗ್ಲಿಜನ್, ಟಿಮ್ ಸೌಥಿ, ಐಶ್ ಸೋಧಿ, ಹಾಮಿಶ್ ಬೆನೆಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ