ಮಂಕಿಗೇಟ್, ಕುಡಿತದ ಚಟ.. ವಿವಾದಗಳಿಂದಲೇ ಸುದ್ದಿಯಾಗಿದ್ದ ವರ್ಣರಂಜಿತ ಕ್ರಿಕೆಟರ್ ಸೈಮಂಡ್ಸ್


Team Udayavani, May 15, 2022, 2:25 PM IST

controversy of symonds

ವಿಶ್ವ ಕ್ರಿಕೆಟ್ ಕಂಡ ಅತ್ಯುತ್ತಮ ಆಲ್ ರೌಂಡರ್ ಗಳಲ್ಲಿ ಒಬ್ಬರಾದ ಕಾಂಗರೂ ನಾಡಿನ ಆ್ಯಂಡ್ರ್ಯೂ ಸೈಮಂಡ್ಸ್ ಇಂದು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್, ಆಫ್ ಸ್ಪಿನ್ ಮತ್ತು ಮಧ್ಯಮ ವೇಗದ ಬೌಲಿಂಗ್ ಎರಡೂ ಮಾಡುತ್ತಿದ್ದ ಸೈಮಂಡ್ಸ್ 1998 ರಿಂದ 2009ರವರೆಗೆ ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡಿದ್ದಾರೆ.

ಕಾಂಗರೂ ನಾಡಿನ ಪರವಾಗಿ ಸೈಮಂಡ್ಸ್, 26 ಟೆಸ್ಟ್, 198 ಏಕದಿನ ಮತ್ತು 14 ಟಿ20 ಪಂದ್ಯಗಳನ್ನಾಡಿದ್ದಾರೆ. 2008ರಿಂದ 2011ರವರೆಗೆ ಐಪಿಎಲ್ ನಲ್ಲಿ ಆಡಿರುವ ಸೈಮಂಡ್ಸ್ 39 ಪಂದ್ಯಗಳನ್ನಾಡಿದ್ದಾರೆ. ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಪರ ಸೈಮಂಡ್ಸ್ ಆಡಿದ್ದರು.

ಭಿನ್ನ ಶೈಲಿಯ ಕೇಶ ಶೈಲಿ, ಮೈದಾನದಲ್ಲಿ ಸದಾ ಅಗ್ರೆಸಿವ್ ಆಟ, ಸ್ಲೆಡ್ಜಿಂಗ್ ನಿಂದಲೇ ಸೈಮಂಡ್ಸ್ ಗಮನ ಸೆಳೆಯುತ್ತಿದ್ದರು. ಬಲಿಷ್ಠ ದೇಹಕಾಯದ ಸೈಮಂಡ್ಸ್ ಆಟಕ್ಕಿಂತ ಹೆಚ್ಚಾಗಿ ನೆನಪಾಗುವುದು ವಿವಾದಗಳಿಂದ ಎನ್ನುವುದು ಅಷ್ಟೇ ಸತ್ಯ.

ಸೈಮಂಡ್ಸ್ ವಿವಾದಗಳು

ಮಂಕಿಗೇಟ್: ಇದು ಕ್ರಿಕೆಟ್ ಜಗತ್ತು ಎಂದೂ ಮರೆಯದ ವಿವಾದ. 2008 ರ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಈ ಮಂಕಿಗೇಟ್ ಘಟನೆ ಸಂಭವಿಸಿತ್ತು. ಸಿಡ್ನಿಯಲ್ಲಿ ನಡೆದ ಟೆಸ್ಟ್‌ನಲ್ಲಿ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ತನ್ನನ್ನು “ಮಂಕಿ” ಎಂದು ಕರೆದಿದ್ದಾರೆ ಎಂದು ಸೈಮಂಡ್ಸ್ ಆರೋಪಿಸಿದ್ದರು. ಇದು ವಿಶ್ವ ಕ್ರಿಕೆಟ್‌ನಲ್ಲಿ ದೊಡ್ಡ ವಿವಾದವಾಗಿ ಹರ್ಭಜನ್ ಒಂದು ಟೆಸ್ಟ್‌ಗೆ ನಿಷೇಧವನ್ನು ಎದುರಿಸಲು ಕಾರಣವಾಯಿತು.

ತಂಡದ ಸದಸ್ಯನ ಜೊತೆ ಗಲಾಟೆ: ತಂಡದ ಸಹ ಸದಸ್ಯ ಮೈಕಲ್ ಕ್ಲಾರ್ಕ್ ಜೊತೆಗೆ ಸೈಮಂಡ್ಸ್ ಕಿರಿಕ್ ಮಾಡಿಕೊಂಡಿದ್ದರು. ತಂಡದ ಉಪ ನಾಯಕ ಸ್ಥಾನಕ್ಕೆ ಮೈಕಲ್ ಕ್ಲಾರ್ಕ್ ಆಯ್ಕೆಯಾದಾಗ ಇವರಿಬ್ಬರ ನಡುವೆ ಮನಸ್ಥಾಪ ಉಂಟಾಗಿತ್ತು.

ಇದನ್ನೂ ಓದಿ:ಆಸೀಸ್ ಗೆ ಮತ್ತೊಂದು ಆಘಾತ; ಮಾಜಿ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತಕ್ಕೆ ಬಲಿ

2008 ರಲ್ಲಿ ಡಾರ್ವಿನ್‌ ನಲ್ಲಿ ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಸಭೆಯಲ್ಲಿ ಪಾಲ್ಗೊಳ್ಳುವ ಬದಲು ಸೈಮಂಡ್ಸ್ ಫಿಶಿಂಗ್ ಮಾಡಲು ಹೋಗಿದ್ದರು. ಇದರಿಂದ ಅವರನ್ನು ಸರಣಿಯಿಂದ ಮನೆಗೆ ಕಳುಹಿಸಲಾಗಿತ್ತು. ವರ್ಷಗಳ ನಂತರ, ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡುತ್ತಾ ಈ ಘಟನೆಯನ್ನು ಮೆಲುಕು ಹಾಕಿದ್ದ ಸೈಮಂಡ್ಸ್, ಐಪಿಎಲ್ ನಲ್ಲಿ ಪಡೆದ ದೊಡ್ಡ ಮಟ್ಟದ ಹಣವು ಅವರ ಬದಲಾದ ಸಂಬಂಧದ ಹಿಂದೆ ಕಾರಣವಾಗಿರಬಹುದು ಎಂದು ಬಹಿರಂಗಪಡಿಸಿದರು. ಆ ವರ್ಷ ಸೈಮಂಡ್ಸ್ ಡೆಕ್ಕನ್ ಚಾರ್ಜರ್ಸ್‌ ತಂಡಕ್ಕೆ 5.40 ಕೋಟಿ ರೂ. ಗೆ ಮಾರಾಟವಾಗಿದ್ದರು.

ಮದ್ಯ ಸೇವನೆ: 2005ರಲ್ಲಿ ಕಾರ್ಡಿಫ್‌ನಲ್ಲಿ ಬಾಂಗ್ಲಾದೇಶದ ವಿರುದ್ಧದ ತ್ರಿಕೋನ ಸರಣಿಯ ಪಂದ್ಯಕ್ಕೆ ಮುನ್ನ ಸೈಮಂಡ್ಸ್‌ರನ್ನು ಆಸ್ಟ್ರೇಲಿಯನ್ ತಂಡದಿಂದ ಕೈಬಿಡಲಾಯಿತು. ಹಿಂದಿನ ಸಂಜೆ ಅವರು ಮದ್ಯ ಸೇವಿಸಿದ್ದರಿಂದ ಈ ನಿರ್ಧಾರಕ್ಕೆ ಬರಲಾಯಿತು.

ವಿಶ್ವಕಪ್ ನಿಂದ ಔಟ್: 2009ರ ಜೂನ್ ನಲ್ಲಿ, ಆಂಡ್ರ್ಯೂ ಸೈಮಂಡ್ಸ್ ಅವರು ಆಸ್ಟ್ರೇಲಿಯನ್ ತಂಡದಲ್ಲಿದ್ದಾಗ ಶಿಸ್ತಿನ ಮೂರನೇ ಪ್ರಮುಖ ಉಲ್ಲಂಘನೆಯ ನಂತರ ಟ್ವೆಂಟಿ20 ವಿಶ್ವಕಪ್‌ನಿಂದ ಮನೆಗೆ ಕಳುಹಿಸಲಾಗಿತ್ತು.

ಅವರ ಈ ಮನಸ್ಥಿತಿಯೇ ಬೃಹತ್ ಕ್ರಿಕೆಟ್ ಪ್ರತಿಭೆಯನ್ನು ದುರ್ಬಲಗೊಳಿಸಿತು ಎಂದೇ ಹೇಳಬಹುದು. ಸೈಮಂಡ್ಸ್ ಕ್ರಿಕೆಟ್ ಜಗತ್ತಿನಲ್ಲಿ ಅವರ ವೃತ್ತಿಜೀವನದ ಸಮಯದಲ್ಲಿ ಹಲವಾರು ವಿವಾದಗಳನ್ನು ಹೊಂದಿದ್ದರೂ, ಅವರ ಹೆಸರು ವಿಶ್ವದ ಶ್ರೇಷ್ಠ ಆಲ್-ರೌಂಡರ್‌ಗಳಲ್ಲಿ ಒಂದಾಗಿದೆ.

ಆಂಡ್ರ್ಯೂ ಸೈಮಂಡ್ಸ್ ಆಸ್ಟ್ರೇಲಿಯಾ ಪರ 26 ಟೆಸ್ಟ್, 198 ಏಕದಿನ ಮತ್ತು 14 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ 1462 ರನ್, ಟೆಸ್ಟ್‌ನಲ್ಲಿ 5088 ಮತ್ತು ಟಿ20ಯಲ್ಲಿ 337 ರನ್ ಗಳಿಸಿದ್ದಾರೆ. ಆಂಡ್ರ್ಯೂ ಸೈಮಂಡ್ಸ್ 39 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.