ಗಾಲ್ಫ್ ಆಡುವಾಗ ಗಾಯಗೊಂಡ ಜಾನಿ ಬೇರಿಸ್ಟೋ ಟಿ20 ವಿಶ್ವಕಪ್ ನಿಂದಲೂ ಔಟ್!
Team Udayavani, Sep 3, 2022, 2:51 PM IST
ಲಂಡನ್: ಮುಂದಿನ ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಸಿದ್ದತೆ ನಡೆಸುತ್ತಿರುವ ಇಂಗ್ಲೆಂಡ್ ಗೆ ಆಘಾತ ಎದುರಾಗಿದೆ. ಪ್ರಮುಖ ಆಟಗಾರ ಜಾನಿ ಬೇರಿಸ್ಟೋ ಅವರು ಗಾಯಗೊಂಡಿದ್ದು, ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ.
ಟಿ20 ವಿಶ್ವಕಪ್ ಗೆ ಶುಕ್ರವಾರ ಇಂಗ್ಲೆಂಡ್ ತಂಡ ಪ್ರಕಟಿಸಿತ್ತು. ಇದರಲ್ಲಿ ಜಾನಿ ಬೇರಿಸ್ಟೋ ಅವರ ಹೆಸರು ಪ್ರಕಟ ಮಾಡಲಾಗಿತ್ತು. ಕೂಟದಲ್ಲಿ ಅವರು ನಾಯಕ ಜೋಸ್ ಬಟ್ಲರ್ ಜತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಬೇರಿಸ್ಟೋ ಗಾಯಗೊಂಡಿದ್ದಾರೆ.
ಲೀಡ್ಸ್ ನಲ್ಲಿ ಗಾಲ್ಫ್ ಆಡುತ್ತಿರುವ ವೇಳೆ ಬೇರಿಸ್ಟೋ ಗಾಯಗೊಂಡಿದ್ದಾರೆ. ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಖಚಿತ ಪಡಿಸಿದೆ. ಬೇರಿಸ್ಟೋ ಮುಂದಿನ ವಾರ ತಜ್ಞ ವೈದ್ಯರನ್ನು ಸಂಪರ್ಕಿಸಲಿದ್ದಾರೆ ಎಂದು ಹೇಳಿದೆ.
ಜಾನಿ ಬೇರಿಸ್ಟೋ ಅವರು ಈ ಸಂಪೂರ್ಣ ಬೇಸಿಗೆ ಋತುವಿನಿಂದ ಹೊರ ಬಿದ್ದಿದ್ದಾರೆ. ಹೀಗಾಗಿ ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿ ಮತ್ತು ಟಿ20 ವಿಶ್ವಕಪ್ ನ ಅವಕಾಶ ತಪ್ಪಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕದ್ರಿ ಮಾರುಕಟ್ಟೆ 3ತಿಂಗಳೊಳಗೆ ಪೂರ್ಣ ಸಾಧ್ಯತೆ: ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ನಿರ್ಧಾರ
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೇರಿಸ್ಟೋ ಬದಲಿಗೆ ಬೆನ್ ಡಕೆಟ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಟಿ20 ವಿಶ್ವಕಪ್ ಗೆ ಇದುವರೆಗೆ ಬದಲಿ ಆಟಗಾರ ಆಯ್ಕೆ ಮಾಡಿಲ್ಲ.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್ ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್ ಮತ್ತು ಮಾರ್ಕ್ ವುಡ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ