
ಐಪಿಎಲ್ ಗೂ ಮೊದಲು ಆರ್ಸಿಬಿಗೆ ಗಾಯದ ಚಿಂತೆ
Team Udayavani, Mar 27, 2023, 7:55 AM IST

ಬೆಂಗಳೂರು: ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ. ತಂಡಗಳೆಲ್ಲ ಹುರಿಗೊಳ್ಳಬೇಕಾದ ಈ ಹೊತ್ತಿನಲ್ಲಿ ಆಟಗಾರರು ಗಾಯದ ಸಮಸ್ಯೆಯಿಂದಲೇ ಸುದ್ದಿಯಾಗುತ್ತಿದ್ದಾರೆ. ಇದಕ್ಕೆ ಆರ್ಸಿಬಿ ಕೂಡ ಹೊರತಲ್ಲ.
ತಂಡದ ಅಗ್ರ ಕ್ರಮಾಂಕದ ಬಿಗ್ ಹಿಟ್ಟಿಂಗ್ ಬ್ಯಾಟರ್ ರಜತ್ ಪಾಟೀದಾರ್ ಗಾಯಾ ಳಾಗಿದ್ದು, ಇವರ ಸೇವೆ ಕೂಟದ ಮೊದಲರ್ಧ ಲಭಿಸುವುದು ಕಷ್ಟ ಎನ್ನಲಾಗಿದೆ.
ಹಾಗೆಯೇ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್ವುಡ್ ಕೂಡ ಗಾಯದಿಂದ ಚೇತರಿಸಿಕೊಂಡಿಲ್ಲ. ಇವರು ಐಪಿಎಲ್ನಲ್ಲಿ ಆಡುವುದೇ ಅನು ಮಾನ ಎಂಬ ಸ್ಥಿತಿಯಲ್ಲಿದ್ದಾರೆ.
29 ವರ್ಷದ ರಜತ್ ಪಾಟೀದಾರ್ ಕಳೆದ ಸೀಸನ್ನಲ್ಲಿ ಉತ್ತಮ ನಿರ್ವಹಣೆ ತೋರಿದ ಕ್ರಿಕೆಟಿಗ. ಸದ್ಯ ಅವರು ಬೆಂಗಳೂರಿನ ಎನ್ಸಿಎಯಲ್ಲಿ ಪುನಶ್ಚೇತನ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಚೇತರಿಕೆಗೆ ಎಷ್ಟು ಸಮಯ ಬೇಕೆಂಬುದು ತಿಳಿದಿಲ್ಲ.
ಪಾಟೀದಾರ್ ಕಳೆದ ವರ್ಷದ ಮೆಗಾ ಹರಾಜಿನಲ್ಲಿ ಮಾರಾಟಗೊಂಡಿ ರಲಿಲ್ಲ. ಆದರೆ ವಿಕೆಟ್ ಕೀಪರ್ ಲವ್ನಿತ್ ಸಿಸೋಡಿಯಾ ಗಾಯಾಳಾದ ಕಾರಣ ಬದಲಿ ಆಟಗಾರನಾಗಿ ಆರ್ಸಿಬಿ ಕ್ಯಾಂಪ್ ಸೇರಿದ್ದರು. ಕೂಟದ ಚರಿತ್ರೆಯಲ್ಲಿ ಅತೀ ವೇಗದ ಶತಕ ಬಾರಿಸಿದ ಭಾರತೀಯನೆಂಬ ಹಿರಿಮೆ ಪಾಟೀದಾರ್ ಆವರದಾಗಿತ್ತು.
ಜೋಶ್ ಹೇಝಲ್ವುಡ್ ಅವರನ್ನು ಕಳೆದ ಮೆಗಾ ಹರಾಜಿನಲ್ಲಿ 7.75 ಕೋಟಿ ರೂ.ಗೆ ಖರೀದಿಸಲಾಗಿತ್ತು. ಆದರೆ ಅವರಿನ್ನೂ ಸ್ನಾಯುರಜ್ಜು ಸೆಳೆತದಿಂದ ಬಳಲುತಿದ್ದು, ಕೂಟದಲ್ಲಿ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ಇನ್ನೂ ಖಾತ್ರಿಯಾಗಿಲ್ಲ. ಇವರಿಬ್ಬರೂ ಗೈರಾದರೆ ಅದು ಆರ್ಸಿಬಿಗೆ ಬಲವಾದ ಹಿನ್ನಡೆಯಾಗುವುದರಲ್ಲಿ ಅನುಮಾನವಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

French Open 2023: ಜೆಬ್ಯುರ್-ಹದಾದ್ ಮಯಾ ಮುಖಾಮುಖಿ

WTC Final;ಹೇಗಿದ್ದೀತು ಓವಲ್ ಟ್ರ್ಯಾಕ್? ಟೆಸ್ಟ್ ಫೈನಲ್ ಗೂ ಮುನ್ನ ಒಂದು ಕುತೂಹಲ

Singapore Open Super 750; ಸಿಂಗಾಪುರದಲ್ಲಿ ಮಿಂಚಬೇಕಿದೆ ಸಿಂಧು

Bangladesh ಟೆಸ್ಟ್ ತಂಡದ ನೂತನ ನಾಯಕರಾಗಿ ಲಿಟನ್ ದಾಸ್ ನೇಮಕ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು