ಮುಂಬೈ vs ಆರ್ ಸಿಬಿ ಬಲಾಢ್ಯರ ಕಾದಾಟ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ


Team Udayavani, Oct 28, 2020, 7:00 PM IST

.0.0.

ಅಬುಧಾಬಿ : ಐಪಿಎಲ್ ನ 48 ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ದುಕೊಂಡಿದೆ.

ಆರ್ ಸಿಬಿ ಹಾಗೂ ಮುಂಬೈ ಎರಡು ತಂಡಗಳು ಈ ಬಾರಿಯ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು. ಇಂದಿನ ಪಂದ್ಯ ಜಿದ್ದಾಜಿದ್ದಿಯ ಹೋರಾಟದೊಂದಿಗೆ ಸಾಗುವ ನಿರೀಕ್ಷೆಯಿದೆ. ಎರಡು ತಂಡಗಳಿಗೂ ಪ್ಲೇ ಆಫ್ ಬಾಗಿಲು ಸುಗಮವಾಗಿದ್ದು, ಅಧಿಕೃತವಾಗಿ ಒಂದು ಗೆಲುವಿನ ದೂರದಲ್ಲಿದೆ.

ಸೇಡು ತೀರಿಸೀತೇ ಮುಂಬೈ?
ಆರ್‌ಸಿಬಿ ಮತ್ತು ಮುಂಬೈ 7 ಜಯದೊಂದಿಗೆ 14 ಅಂಕ ಹೊಂದಿವೆ. ಈ ಋತುವಿನ ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ ಸೂಪರ್‌ ಓವರ್‌ನಲ್ಲಿ ಗೆಲುವು ದಾಖಲಿಸಿತ್ತು. ಮುಂಬೈ ಇದಕ್ಕೆ ಸೇಡು ತೀರಿಸಿಕೊಂಡೀತೇ ಎಂಬುದೊಂದು ಪ್ರಶ್ನೆ ಹಾಗೂ ನಿರೀಕ್ಷೆ.
ಸ್ನಾಯು ಸೆಳೆತದಿಂದ ಕಳೆದೆರಡು ಪಂದ್ಯದಲ್ಲಿ ಆಡದಿದ್ದ ಮುಂಬೈ ನಾಯಕ ರೋಹಿತ್‌ ಶರ್ಮ ಈ ಪಂದ್ಯದಲ್ಲೂ ಆಡುವುದು ಅನುಮಾನ. ಹೀಗಾಗಿ ಪೊಲಾರ್ಡ್‌ ಅವರೇ ಸತತ 3ನೇ ಪಂದ್ಯದಲ್ಲಿ ಮುಂಬೈಯನ್ನು ಮುನ್ನಡೆಸಬೇಕಾಗುತ್ತದೆ.

ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ ಮುಂಬೈ ಮೇಲ್ನೋಟಕ್ಕೆ ಬಲಿಷ್ಠವಾಗಿ ಗೋಚರಿಸುತ್ತಿದೆ. ಎಲ್ಲ ಕ್ರಮಾಂಕದಲ್ಲಿಯೂ ತಂಡಕ್ಕೆ ಆಸರೆಯಾಗಬಲ್ಲ ಬ್ಯಾಟ್ಸ್‌ಮನ್‌ಗಳೇ ತುಂಬಿದ್ದಾರೆ. ಕ್ವಿಂಟನ್‌ ಡಿ ಕಾಕ್‌ (374 ರನ್‌), ಇಶಾನ್‌ ಕಿಶನ್‌ (298 ರನ್‌) ತಂಡಕ್ಕೆ ಉತ್ತಮ ಆರಂಭ ನೀಡಿದರೆ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ (283 ರನ್‌), ಪಾಂಡ್ಯ ಬ್ರದರ್ಸ್‌ ಮತ್ತು ಕೈರನ್‌ ಪೊಲಾರ್ಡ್‌ (214 ನ್‌) ಸಿಡಿದು ನಿಂತು ತಂಡದ ಮೊತ್ತವನ್ನು 200ರ ಸನಿಹಕ್ಕೆ ತಲುಪಿಸುವಲ್ಲಿ ಸೈ ಎನಿಸಿಕೊಂಡಿದ್ದಾರೆ.

ಬೌಲಿಂಗ್‌ ಕೂಡ ಹೆಚ್ಚು ಘಾತಕವಾಗಿದೆ. ಯಾರ್ಕರ್‌ ಸ್ಪೆಷಲಿಸ್ಟ್‌ ಬುಮ್ರಾ, ಕಿವೀಸ್‌ ವೇಗಿ ಟ್ರೆಂಟ್‌ ಬೌಲ್ಟ್ ಮತ್ತು ಪ್ಯಾಟಿನ್ಸನ್‌ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಬಲ್ಲರಾದರೂ ರಾಜಸ್ಥಾನ್‌ ಎದುರಿನ ಕಳೆದ ಪಂದ್ಯದಲ್ಲಿ ಏನಾಯಿತೆಂಬುದು ಎಲ್ಲರಿಗೂ ತಿಳಿದೇ ಇದೆ. 196 ರನ್ನುಗಳ ಗುರಿಯನ್ನು ರಾಜಸ್ಥಾನ್‌ ಎರಡೇ ವಿಕೆಟ್‌ ನಷ್ಟದಲ್ಲಿ ಯಶಸ್ವಿಯಾಗಿ ಬೆನ್ನಟ್ಟಿತ್ತು. ಸ್ಟೋಕ್ಸ್‌ ಸೆಂಚುರಿ ಸ್ಟ್ರೋಕ್‌ ಮೂಲಕ ಮುಂಬೈಗೆ ಆಘಾತವಿಕ್ಕಿದ್ದರು.

ಆರ್‌ಸಿಬಿ ಗೆ ಕೊಹ್ಲಿ, ಎಬಿಡಿ ಬೆನ್ನೆಲುಬು  : 
ಆರ್‌ಸಿಬಿ ತಂಡಕ್ಕೆ ನಾಯಕ ವಿರಾಟ್‌ ಕೊಹ್ಲಿ (415 ರನ್‌) ಮತ್ತು ಎಬಿ ಡಿ ವಿಲಿಯರ್ (324 ರನ್‌) ಅವರೇ ಬೆನ್ನೆಲುಬಾಗಿದ್ದಾರೆ. ಆಸೀಸ್‌ ಹಿಟ್ಟರ್‌ ಆರನ್‌ ಫಿಂಚ್‌ (236 ರನ್‌) ಮತ್ತು ದೇವದತ್‌ ಪಡಿಕ್ಕಲ್‌ (343 ರನ್‌) ಹೆಚ್ಚು ಕಾಲ ಕ್ರೀಸ್‌ ಆಕ್ರಮಿಸಿಕೊಳ್ಳುವ ಅನಿವಾರ್ಯತೆ ಎಂದಿಗಿಂತ ಹೆಚ್ಚೇ ಇದೆ. ತಂಡದ ಕೆಳ ಹಂತದ ಬ್ಯಾಟಿಂಗ್‌ ನಂಬಲರ್ಹವಲ್ಲ. ಆರ್‌ಸಿಬಿ ಬೌಲಿಂಗ್‌ ಈ ಬಾರಿ ಹೆಚ್ಚು ಘಾತಕವಾಗಿ ಮೂಡಿಬಂದಿದೆ. ಮಾರಿಸ್‌, ಸಿರಾಜ್‌, ಉದಾನ, ಚಹಲ್‌ ಉತ್ತಮ ಲಯದಲ್ಲಿದ್ದಾರೆ. ಆದರೆ ಕಳೆದ ಪಂದ್ಯದಲ್ಲಿ ಗಾಯಾಳಾ ಸೈನಿ ಆಡುವುದು ಅನುಮಾನ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ( ಪ್ಲೇಯಿಂಗ್ ಇಲೆವೆನ್): ದೇವದತ್ ಪಡಿಕ್ಕಲ್, ಜೋಶ್ ಫಿಲಿಪ್ (ಕೀಪರ್), ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಗುರ್ಕೀರತ್ ಸಿಂಗ್ ಮನ್, ಶಿವಮ್ ದುಬೆ, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಡೇಲ್ ಸ್ಟೇನ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್

ಮುಂಬೈ ಇಂಡಿಯನ್ಸ್ ( ಪ್ಲೇಯಿಂಗ್  ಇಲೆವೆನ್): ಇಶಾನ್ ಕಿಶನ್, ಕ್ವಿಂಟನ್ ಡಿ ಕಾಕ್ (ಕೀಪರ್), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.