ಟ್ರೋಫಿ ಜತೆ ಈಡನ್ಗೆ ಮರಳಲು ಪ್ರಯತ್ನ: ಶಾರೂಖ್ ಖಾನ್
Team Udayavani, May 15, 2017, 2:18 PM IST
ಕೋಲ್ಕತಾ: ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಕೋಲ್ಕತಾ ನೈಟ್ರೈಡರ್ಸ್ ತಂಡದ ಮಾಲಕ ಶಾರೂಖ್ ಖಾನ್ ಶನಿವಾರ ಈಡನ್ ಗಾರ್ಡನ್ಸ್ನಲ್ಲಿ ನಡೆದ ಕೆಕೆಆರ್ ತಂಡದ ಅಂತಿಮ ಲೀಗ್ ಪಂದ್ಯವನ್ನು ವೀಕ್ಷಿಸಲು ಬಂದಿದ್ದರು. ಆದರೆ ಮುಂಬೈ ವಿರುದ್ಧ ಬ್ಯಾಟಿಂಗ್ ಕುಸಿತಕ್ಕೆ ಒಳಗಾದ ಕೆಕೆಆರ್ ತಂಡವು 9 ರನ್ನುಗಳಿಂದ ಸೋತಿತ್ತು. ಇದರಿಂದ ಶಾರೂಖ್ ನಿರಾಸೆ ಅನುಭವಿಸಿದರು.
ಪ್ರತಿಯೊಂದು ಪಂದ್ಯದಲ್ಲಿ ಪ್ರೇಕ್ಷಕರ ಬೆಂಬಲವನ್ನು ಗಮನಿಸಿದರೆ ನಾವು ಟ್ರೋಫಿ ಜತೆ ಮತ್ತೂಮ್ಮೆ ಈಡನ್ ಗಾರ್ಡನ್ಸ್ಗೆ ಆಗಮಿಸಿ ವಿಜಯೋತ್ಸವ ಆಚರಿಸಲು ಶಕ್ತಿಮೀರಿ ಪ್ರಯತ್ನಿಸಬೇಕಾಗಿದೆ ಎಂದು ಪಂದ್ಯದ ಬಳಿಕ ಶಾರೂಖ್ ತಿಳಿಸಿದರು. ಎರಡು ಬಾರಿಯ ಚಾಂಪಿಯನ್ ಕೆಕೆಆರ್ ಕಳೆದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋತರೂ ಇದೀಗ ನಾಲ್ಕನೇ ತಂಡವಾಗಿ ಪ್ಲೇ ಆಫ್ಗೆ ತೇರ್ಗಡೆಯಾಗಿದೆ. ನಾವು ಕೆಲವೊಂದು ಪಂದ್ಯಗಳಲ್ಲಿ ತೀವ್ರ ಪೈಪೋಟಿ ನೀಡಿ ಸೋತಿದ್ದೇವೆ. ಗೆಲ್ಲುವುದು ಅಷ್ಟೊಂದು ಸುಲಭವಲ್ಲ. ಆದರೆ ಇನ್ನೀಗ ನಾವು ಸತತ ಮೂರು ಪಂದ್ಯಗಳಲ್ಲಿ ಗೆಲ್ಲಲೇಬೇಕಾಗಿದೆ (ಎಲಿಮಿನೇಟರ್, ಕ್ವಾಲಿಫೈಯರ್ 2 ಮತ್ತು ಫೈನಲ್) ಎಂದು ಶಾರೂಖ್ ಹೇಳಿದರು. ಕೆಕೆಆರ್ ತಂಡ ಮೇ 17ರಂದು ನಡೆಯುವ ಎಲಿಮಿನೇಟರ್ ಪಂದ್ಯವನ್ನಾಡಲು ಬೆಂಗಳೂರಿಗೆ ತೆರಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ