ಹೃತಿಕ್‌,ಪ್ರಭು,ತಮನ್ನಾಗುಂಗು; ಮಿಕಾ ಸಾಂಗು


Team Udayavani, Apr 8, 2018, 6:00 AM IST

PTI4_7_2018_000175B.jpg

ಮುಂಬಯಿ: ಶನಿವಾರ ಸಂಜೆ ಮುಂಬಯಿಯ ವಾಂಖೇಡೆ ಮೈದಾನದಲ್ಲಿ ಸಂಗೀತ, ನೃತ್ಯಗಳ ಸಂಭ್ರಮ. ಇದಕ್ಕೆ ಕಾರಣವೇನೆಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಇದು ಐಪಿಎಲ್‌ 11ರ ಉದ್ಘಾಟನಾ ಸಮಾರಂಭ. 

ಪ್ರಭುದೇವ್‌, ಹೃತಿಕ್‌ ರೋಷನ್‌, ತಮನ್ನಾ ಭಾಟಿಯಾ, ಜಾಕ್ವೆಲಿನ್‌ ಫೆರ್ನಾಂಡಿಸ್‌, ವರುಣ್‌ ಧವನ್‌ ನೃತ್ಯ, ಮಿಕಾ ಸಿಂಗ್‌ ಗಾಯನದಲ್ಲಿ ಕ್ರಿಕೆಟ್‌ ಅಭಿಮಾನಿಗಳು ತೇಲಿ ಹೋದರು. ವೇದಿಕೆ ಮೇಲೆ ಮೊದಲು ಕಾಣಿಸಿಕೊಂಡಿದ್ದು ವರುಣ್‌ ಧವನ್‌. ಅವರದ್ದೇ ಸಿನಿಮಾದ ಕೆಲವು ಗೀತೆಗಳಿಗೆ ಹೆಜ್ಜೆ ಹಾಕಿದರು. ಪ್ರೇಕ್ಷಕರು ಇದರ ಗುಂಗಿನಲ್ಲಿ ಇದ್ದಾಗಲೇ ಭಾರತದ ಮೈಕಲ್‌ ಜಾಕ್ಸನ್‌ ಎನಿಸಿಕೊಂಡಿರುವ ಪ್ರಭುದೇವ್‌ ವೇದಿಕೆ ಮೇಲೇರಿ ಕಾಲು ಕುಣಿಸಿದರು. ಕಡೆಗೆ ಇಬ್ಬರೂ ಒಟ್ಟಿಗೆ ಕುಣಿದು ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದರು.

ಆಗ ಬಂದವರು ತಮನ್ನಾ ಭಾಟಿಯಾ. ತಮಿಳು, ತೆಲುಗು ಚಿತ್ರರಂಗದ ಹೆಸರಾಂತ ನಾಯಕಿಯಾಗಿರುವ ಆಕೆ ನೃತ್ಯದಲ್ಲೂ ಎತ್ತಿದ ಕೈ. ಅವರು “ಬಾಜಿರಾವ್‌ ಮಸ್ತಾನಿ’ ಸೇರಿ ಇನ್ನೊಂದಷ್ಟು ಹಾಡುಗಳಿಗೆ ಬಳ್ಳಿಯಂತೆ ಬಳುಕಿ ವೇದಿಕೆಯಿಳಿದರು. ಮುಂದೆ ಬಂದಿದ್ದು ಜಾಕ್ವೆಲಿನ್‌ ಫೆರ್ನಾಂಡಿಸ್‌.

ಅಂತಿಮವಾಗಿ ಎಲ್ಲರೂ ಬಹುಹೊತ್ತಿನಿಂದ ಕಾತುರರಾಗಿ ಕಾಯುತ್ತಿದ್ದ ಹೃತಿಕ್‌ ರೋಷನ್‌ ಕಾಣಿಸಿಕೊಂಡರು. ಇವರೂ ತಮ್ಮದೇ ಸಿನಿಮಾದ ಕೆಲ ಹಾಡು ಸೇರಿ ಇನ್ನೊಂದಷ್ಟು ಗೀತೆಗಳಿಗೆ ಕಾಲುಗಳನ್ನು ಕುಣಿದಾಡಿಸಿದರು. ಈ ಅಬ್ಬರದಲ್ಲಿ ಪ್ರೇಕ್ಷಕರು ಸೇರಿಕೊಂಡರು. ಮೈದಾನದಲ್ಲಿ ಕುಳಿತಿದ್ದ ಪ್ರೇಕ್ಷಕರೂ ಈ ಗೀತೆಗಳಿಗೆ ನೃತ್ಯ ಮಾಡಿದ್ದು ವಿಶೇಷ. ಇದಕ್ಕೆ ಕಾರಣ ತಮಗೆ ನೀಡಿದ್ದ ಆಸನದಲ್ಲಿ ಇಕ್ಕಟ್ಟಿನ ನಡುವೆಯೇ ಅವರೂ ಉದ್ಘಾಟನಾ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ನರ್ತಕರಿಗೆ ಭರ್ಜರಿ ಹಣ
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಾಲಿವುಡ್‌ ನಟ, ನಟಿಯರು ಭರ್ಜರಿ ಹಣ ಪಡೆದಿದ್ದಾರೆಂದು ಹೇಳಲಾಗಿದೆ. ಕೇವಲ 10 ನಿಮಿಷದ ಕಾರ್ಯಕ್ರಮಕ್ಕಾಗಿ ತಮನ್ನಾ ಭಾಟಿಯಾ 50 ಲಕ್ಷ ರೂ. ಪಡೆದಿದ್ದಾರೆ. ಕೊನೆಯವರಾಗಿ ಕಾಣಿಸಿಕೊಂಡ ಹೃತಿಕ್‌ ರೋಷನ್‌ 7 ಕೋಟಿ ರೂ. ಪಡೆದಿದ್ದಾರೆಂದು ಹೇಳಲಾಗಿದೆ. ಪ್ರಭುದೇವ್‌ಗೆ ಕೂಡ ಭಾರೀ ಮೊತ್ತ ನೀಡಲಾಗಿದೆಯೆಂದು ಹೇಳಲಾಗಿದ್ದರೂ ಎಷ್ಟು ಮೊತ್ತವೆನ್ನುವುದು ಇನ್ನೂ ಖಚಿತವಾಗಿಲ್ಲ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.