ಆರ್‌ಸಿಬಿಗೆ ಇಂದು ಮಹತ್ವದ ಪಂದ್ಯ

ಕೊಹ್ಲಿ ಪಡೆಗೆ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರಾಳಿ

Team Udayavani, Apr 28, 2019, 9:41 AM IST

RCB

ಹೊಸದಿಲ್ಲಿ: ಸತತ ಸೋಲಿನ ಬಳಿಕ ಹ್ಯಾಟ್ರಿಕ್‌ ಗೆಲುವು ಪಡೆದು ಪ್ಲೇ ಆಫ್ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿರುವ ರಾಯಲ್‌ ಚಾಲೆಂಜರ್ ಬೆಂಗಳೂರು ರವಿವಾರ ಮಾಡು-ಮಡಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ.

ಈ ಕೋಟ್ಲಾ ಕಾಳಗದಲ್ಲಿ ಗೆದ್ದರೆ ಆರ್‌ಸಿಬಿ ಪ್ಲೇ ಆಫ್ ಕನಸು ಜೀವಂತವಾಗಿರುತ್ತದೆ. ಸೋತರೆ ಕೂಟದಿಂದ ಹೊರಬೀಳಲಿದೆ. ಹಾಗೆಯೇ ಶ್ರೇಯಸ್‌ ಅಯ್ಯರ್‌ ನೇತೃತ್ವದ ಡೆಲ್ಲಿ ಈ ಪಂದ್ಯ ಗೆದ್ದರೆ ಪ್ಲೇ ಆಫ್ಗೆ ಹತ್ತರವಾಗಲಿದೆ. ಸದ್ಯ ಡೆಲ್ಲಿ ಒಟ್ಟು 11 ಪಂದ್ಯಗಳಲ್ಲಿ 7 ಜಯ, 4 ಸೋಲಿನೊಂದಿಗೆ 3ನೇ ಸ್ಥಾನದಲ್ಲಿದೆ. ಬೆಂಗಳೂರು ಮತ್ತೆ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಡೆಲ್ಲಿ 4 ವಿಕೆಟ್‌ಗಳಿಂದ ಆರ್‌ಸಿಬಿಯನ್ನು ಮಣಿಸಿತ್ತು. ಇದಕ್ಕೀಗ ಕೊಹ್ಲಿ ಪಡೆ ಸೇಡು ತೀರಿಸಿಕೊಳ್ಳಬೇಕಿದೆ. ನಾಯಕ ವಿರಾಟ್‌ ಕೊಹ್ಲಿ ಪಾಲಿಗೆ ಇದು ತವರು ಪಂದ್ಯವಾಗಿರುವುದು ಆರ್‌ಸಿಬಿಗೆ ಲಾಭ ತಂದೀತೇ ಎಂಬುದೊಂದು ಕುತೂಹಲ.

ಆರ್‌ಸಿಬಿಗೆ ಬೌಲಿಂಗ್‌ ಬಡತನ
ಬೌಲಿಂಗ್‌ಗೆ ಹೋಲಿಸಿದರೆ ಬೆಂಗಳೂರು ಬ್ಯಾಟಿಂಗ್‌ನಲ್ಲಿ ಹೆಚ್ಚು ಬಲಿಷ್ಠ. ಕೊಹ್ಲಿ-ಪಾರ್ಥಿವ್‌ ಆರಂಭಿಕರಾಗಿ ಕ್ಲಿಕ್‌ ಆಗುತ್ತಿದ್ದಾರೆ. ಎಬಿ ಡಿ ವಿಲಿಯರ್ ಅಗ್ರ ಕ್ರಮಾಂಕದಲ್ಲಿ ಸ್ಫೋಟಿಸುತ್ತಿದ್ದಾರೆ. ಮೊಯಿನ್‌ ಅಲಿ ಆಲ್‌ರೌಂಡರ್‌ ಆಗಿ ಮಿಂಚುತ್ತಿದ್ದಾರೆ. ಸ್ಟೋಯಿನಿಸ್‌ ಕೂಡ ಸದ್ದು ಮಾಡುತ್ತಿದ್ದಾರೆ.
ಆದರೆ ಬೆಂಗಳೂರಿಗೆ ಬೌಲಿಂಗ್‌ನದ್ದೇ ದೊಡ್ಡ ಚಿಂತೆಯಾಗಿದೆ. ವೇಗಿ ಡೇಲ್‌ ಸ್ಟೇನ್‌ ಎರಡೇ ಪಂದ್ಯವಾಡಿ ಐಪಿಎಲ್‌ನಿಂದ ಹೊರಬಿದ್ದಿರುವುದು ದೊಡ್ಡ ಹೊಡೆತ. ಟೀಮ್‌ ಇಂಡಿಯಾದ ಉಮೇಶ್‌ ಯಾದವ್‌ ಮೇಲೆ ನಂಬಿಕೆ ಇಡಲಾಗದು. ನವದೀಪ್‌ ಸೈನಿ ಪರಾÌಗಿಲ್ಲ. ಚಾಹಲ್‌ ಮ್ಯಾಜಿಕ್‌ ನಡೆದರೆ ಆರ್‌ಸಿಬಿ ಮೇಲುಗೈ ಸಾಧಿಸಬಹುದು.

ಪ್ಲೇ ಆಫ್ ಸನಿಹದಲ್ಲಿ ಡೆಲ್ಲಿ
ಪ್ಲೇ ಆಫ್ ಓಟಕ್ಕಾಗಿ ತವರಿನ ಈ ಪಂದ್ಯ ಡೆಲ್ಲಿಗೆ ಅತ್ಯಂತ ಮಹತ್ವದ್ದಾಗಿದೆ. ಶಿಖರ್‌ ಧವನ್‌, ಶ್ರೇಯಸ್‌ ಅಯ್ಯರ್‌, ಪೃಥ್ವಿ ಶಾ, ರಿಷಭ್‌ ಪಂತ್‌, ಅಕ್ಷರ್‌ ಪಟೇಲ್‌ ಅವರಂತಹ ದೇಶಿ ಕ್ರಿಕೆಟ್‌ ಪ್ರತಿಭೆಗಳು ತಂಡದ ಆಸ್ತಿಯಾಗಿದ್ದಾರೆ. ಬೌಲಿಂಗ್‌ನಲ್ಲಿ ವೇಗಿ ಕಾಗಿಸೊ ರಬಾಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇಶಾಂತ್‌, ಲಮಿಚಾನೆ, ಆಲ್‌ರೌಂಡರ್‌ ಮಾರಿಸ್‌ ಕೂಡ ಲಯದಲ್ಲಿದ್ದಾರೆ.

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.