IPL-2020ಯ ಮೊದಲ ಸೂಪರ್ ಓವರ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

ಸ್ಟೋಯ್ನ್ಸ್ ಬಿರುಗಾಳಿ ; ಮಯಾಂಕ್ ಮಹಾಸ್ಪೋಟ ; ಮ್ಯಾಚ್ ಟೈ!

Team Udayavani, Sep 20, 2020, 11:26 PM IST

Punjab-2

ದುಬಾಯಿ: ಅರಬ್ ನಾಡಿನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರಿಮಿಯರ್ ಲೀಗ್ ನ ಎರಡನೇ ಪಂದ್ಯ ಚುಟುಕು ಕ್ರಿಕೆಟ್ ನ ರೋಚಕತೆಗೆ ಕಿಚ್ಚು ಹಚ್ಚಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವನ್ ಪಂಜಾಬ್ ನಡುವೆ ಇಂದು ನಡೆದ ರೋಚಕ ಸೆಣೆಸಾಟದಲ್ಲಿ ಎರಡೂ ತಂಡಗಳು ಸಮಬಲದ ಹೋರಾಟ ನೀಡಿದ ಕಾರಣ ಪಂದ್ಯ ಟೈಗೊಂಡಿದೆ.

ಈ ಬಾರಿಯ IPLನ ಮೊದಲ ಸೂಪರ್ ಓವರ್ ಗೆ ಸಾಕ್ಷಿಯಾದ ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ 1 ಓವರ್ ನಲ್ಲಿ ಕೇವಲ 2 ರನ್ ಮಾಡಲಷ್ಟೇ ಶಕ್ತವಾಯಿತು.

ಕೆ.ಎ.ಲ್. ರಾಹುಲ್ 2 ರನ್ ಮಾಡಿ ಔಟಾದರೆ ಬಳಿಕ ಪೂರಣ್ ಅವರೂ ರಬಾಡಾಗೆ ಬೌಲ್ಡ್ ಆದರು. ಅಲ್ಲಿಗೆ ಕೇವಲ ಮೂರೇ ಎಸೆತಗಳಲ್ಲಿ ಸೂಪರ್ ಓವರ್ ನ ಪ್ರಥಮ ಇನ್ನಿಂಗ್ಸ್ ಮುಕ್ತಾಯಗೊಂಡಿತ್ತು.

ಇದನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಮೂರನೇ ಎಸೆತದಲ್ಲೇ ಗೆಲುವಿನ ಗುರಿ ಮುಟ್ಟಿ ಸಂಭ್ರಮಿಸಿದರು.

ಇದನ್ನೂ ಓದಿ: ಅರಬ್ ನಾಡಿನಲ್ಲಿ ಸ್ಟೊಯ್ನ್ಸ್ ಬಿರುಗಾಳಿ ; ಪಂಜಾಬ್ ಗೆಲುವಿಗೆ 158 ಗುರಿ

ಇದಕ್ಕೂ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 157 ರನ್ ಗಳ ಗುರಿಯನ್ನು ಆತ್ಮವಿಶ್ವಾಸದಿಂದಲೇ ಬೆನ್ನಟ್ಟಲಾರಂಭಿಸಿದ ಕಿಂಗ್ಸ್ ಪಂಜಾಬ್ ಮೊದಲ ವಿಕೆಟ್ ಗೆ 30 ರನ್ ಗಳನ್ನು ಕಲೆ ಹಾಕಿತು.

ಕ್ಯಾಪ್ಟನ್ ಕೆ.ಎಲ್. ರಾಹುಲ್ 21 ರನ್ ಮಾಡಿ ಔಟಾದರು. ಆದರೆ ಅರಬ್ ನಾಡಿನಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಸ್ಟೋಯ್ನ್ಸ್ ಬಿರುಗಾಳಿ ಬೀಸಿದರೆ ಎರಡನೇ ಇನ್ನಿಂಗ್ಸ್ ನಲ್ಲಿ ಮಯಾಂಕ್ ಅಗರ್ವಾಲ್ (89) ರನ್ ಮಳೆಯನ್ನೇ ಸುರಿಸಿದರು.

19.5 ಓವರ್ ತನಕ ಸಿಡಿಯುತ್ತಲೇ ಸಾಗಿದ್ದ ಮಯಾಂಕ್ ಅಗರ್ವಾಲ್ ಒಂದು ಹಂತದಲ್ಲಿ 101 ಕ್ಕೆ 6ರಲ್ಲಿ ಸಂಕಟಪಡುತ್ತಿದ್ದ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದರು.

ಆದರೆ ಕೊನೆಯಲ್ಲಿ ಅಗರ್ವಾಲ್ ಹೈಟ್ಮೇರ್ ಗೆ ಕ್ಯಾಚ್ ಕೊಟ್ಟು ಔಟಾಗುವುದರೊಂದಿಗೆ ಪಂದ್ಯದ ಚಿತ್ರಣವೇ ಬದಲಾಯಿತು. ಆಗ ಪಂಜಾಬ್ ಗೆಲುವಿಗೆ 1 ಎಸೆತದಲ್ಲಿ 1 ರನ್ನಿನ ಅವಶ್ಯಕತೆ ಇತ್ತು.

ಆದರೆ ಆ ಹಂತದಲ್ಲಿ ಕ್ರಿಸ್ ಜೋರ್ಡಾನ್ ಸ್ಟೋಯ್ನ್ಸ್ ಎಸೆತದಲ್ಲಿ ರಬಾಡಗೆ ಕ್ಯಾಚ್ ನೀಡಿ ಔಟಾಗುವುದರೊಂದಿಗೆ ಪಂದ್ಯ ರೋಚಕ ಟೈಯಲ್ಲಿ ಅಂತ್ಯಗೊಂಡಿತು.

ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಸ್ಟೋಯ್ನ್ಸ್ ಗಿಂತಲೂ ಸ್ಪೋಟಕವಾಗಿತ್ತು. ಆರಂಭಿಕನಾಗಿ ಕ್ರೀಸಿಗೆ ಬಂದ ಅಗರ್ವಾಲ್ ಇನ್ನಿಂಗ್ಸ್ ನ ಕೊನೆಯವರೆಗೆ ಆಟವಾಡಿದ್ದು ವಿಶೇಷವಾಗಿತ್ತು.

ಒಟ್ಟು 60 ಎಸೆತಗಳನ್ನು ಎದುರಿಸಿದ ಅಗರ್ವಾಲ್ 4 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಾಯದಿಂದ 89 ರನ್ ಗಳಿಸಿದರು.

ಡೆಲ್ಲಿ ಪರ ರವಿಚಂದ್ರನ್ ಅಶ್ವಿನ್, ರಬಾಡಾ ಹಾಗೂ ಸ್ಟೋಯ್ನ್ಸ್ ತಲಾ 2 ವಿಕೆಟ್ ಪಡೆದು ಮಿಂಚಿದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.