ಡೆಲ್ಲಿಗೆ ಪಂಜಾಬ್‌ ಸವಾಲು


Team Udayavani, Apr 20, 2019, 6:00 AM IST

27

ಹೊಸದಿಲ್ಲಿ: ಆತಿಥೇಯ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ಎರಡನೇ ಮುಖಾಮುಖೀ ಕೋಟ್ಲಾದಲ್ಲಿ ನಡೆಯಲಿದೆ. ಶನಿವಾರದ ಎರಡನೇ ಪಂದ್ಯದಲ್ಲಿ ಇತ್ತಂಡಗಳು ಸೆಣಸಲಿವೆ. ಡೆಲ್ಲಿಗೆ ಇದು ತವರಿನ ಪಂದ್ಯ ಹಾಗೂ ಸೇಡಿನ ಪಂದ್ಯವೂ ಹೌದು. ಮೊಹಾಲಿಯಲ್ಲಿ ನಡೆದ ಮೊದಲ ಮುಖಾಮುಖೀಯಲ್ಲಿ ಡೆಲ್ಲಿ ಪಂಜಾಬ್‌ಗ ಶರಣಾಗಿತ್ತು. ಇತ್ತ ಪಂಜಾಬ್‌ ಎರಡನೇ ಪಂದ್ಯದಲ್ಲೂ ಜಾದು ಮಾಡಿ ಪಂದ್ಯ ಕಸಿದುಕೊಳ್ಳುವ ನಿರೀಕ್ಷೆಯಲ್ಲಿದೆ.

23 ಬಾರಿ ಮುಖಾಮುಖಿ
23 ಬಾರಿ ಪಂಜಾಬ್‌ ಮತ್ತು ಡೆಲ್ಲಿ ಮುಖಾಮುಖೀಯಾಗಿದೆ. 14 ಪಂದ್ಯ ಪಂಜಾಬ್‌, 9 ಪಂದ್ಯ ಡೆಲ್ಲಿ ಗೆದ್ದಿವೆ. ಈ ಲೆಕ್ಕಾಚಾರದಲ್ಲಿ ಪಂಜಾಬ್‌ಗ ಗೆಲುವಿನ ಸಾಧ್ಯತೆ ಹೆಚ್ಚಿದೆ.  ಮೊದಲ ಪಂದ್ಯದಲ್ಲಿ ಡೆಲ್ಲಿಗೆ ಅಂತಿಮ 21 ಎಸೆತಗಳಲ್ಲಿ ಕೇವಲ 23 ರನ್‌ ಬೇಕಿತ್ತು. 7 ವಿಕೆಟ್‌ ಕೈಯಲ್ಲಿತ್ತು. ಆದರೆ ಸ್ಯಾಮ್‌ ಕರನ್‌ 4 ವಿಕೆಟ್‌ ಕಿತ್ತು ಪಂದ್ಯದ ಗತಿ ಯನ್ನೇ ಬದಲಾಯಿಸಿ ಡೆಲ್ಲಿ ಯಿಂದ ಗೆಲುವನ್ನು ಕಸಿದು ಕೊಂಡಿದ್ದರು. ಈ ಸೇಡು ತೀರಿಸಲು ಡೆಲ್ಲಿ ಕಾದು ಕುಳಿತಿದೆ.

ಡೆಲ್ಲಿಗೆ ಸ್ಥಿರ ಆಟಗಾರರ ಸಮಸ್ಯೆ
ಡೆಲ್ಲಿ ತಂಡದಲ್ಲಿ ಹೆಚ್ಚಾಗಿ ಭರವಸೆ ಇಡುವಂತಹ ಆಟಗಾರರಿಲ್ಲ. ಯುವ ಆಟಗಾರರೇ ಹೆಚ್ಚಿರುವ ತಂಡದಲ್ಲಿ ಯಾರೊಬ್ಬರೂ ಸ್ಥಿರವಾಗಿ ಆಟವಾಡುತ್ತಿಲ್ಲ. ಒಂದು ಪಂದ್ಯದಲ್ಲಿ ಮಿಂಚಿದರೆ ಮತ್ತೂಂದು ಪಂದ್ಯದಲ್ಲಿ ಎಡವುತ್ತಿರುವುದು ಡೆಲ್ಲಿಗೆ ಬಹುದೊಡ್ಡ ತಲೆನೋವಾಗಿದೆ.  ಬ್ಯಾಟಿಂಗ್‌ನಲ್ಲಿ ರಿಷಬ್‌ ಪಂತ್‌, ಶಿಖರ್‌ ಧವನ್‌, ಕಾಲಿನ್‌ ಮನ್ರೊ ಔಟಾದ ಅನಂತರ ತಂಡವನ್ನು ಮೇಲಕ್ಕೆತ್ತುವ ಭರವಸೆಯ ಆಟಗಾರರು ಯಾರೂ ಇಲ್ಲ. ಇದಕ್ಕೆ ಗುರುವಾರ ನಡೆದ ಮುಂಬೈ ವಿರುದ್ಧದ ಪಂದ್ಯವೇ ಸಾಕ್ಷಿ.

ಪಂಜಾಬ್‌ಗ ಬ್ಯಾಟಿಂಗ್‌ ಬಲ
ಪ್ರತೀ ಪಂದ್ಯದಲ್ಲೂ ಮಿಂಚುತ್ತಿರುವ ಕೆ. ಎಲ್‌. ರಾಹುಲ್‌ ಮತ್ತು ಕ್ರಿಸ್‌ ಗೇಲ್‌ ಪಂಜಾಬ್‌ನ ಅಪಾಯಕಾರಿ ಆಟಗಾರರು. ಇವರನ್ನು ಹೊರತು ಪಡಿಸಿದರೆ ಮಾಯಾಂಕ್‌ ಅಗರ್ವಾಲ್‌, ಮತ್ತು ಡೇವಿಡ್‌ ಮಿಲ್ಲರ್‌ ಕೂಡ ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್‌ ನಡೆಸುತ್ತಿರುವುದೂ ತಂಡಕ್ಕೆ ಹೆಚ್ಚಿನ ಬಲ. ಪಂಜಾಬ್‌ನ ಬೌಲಿಂಗ್‌ ವಿಭಾಗ ಇನ್ನಷ್ಟು ಸುಧಾರಿಸಿಕೊಳ್ಳಬೇಕಾಗಿದೆ. ಅಶ್ವಿ‌ನ್‌ದ್ವಯರು ಹೊರತುಪಡಿಸಿದರೆ ಉಳಿದವರಿಂದ ಘಾತಕ ಸ್ಪೆಲ್‌ ಕಂಡುಬಂದಿಲ್ಲ. ಹೀಗಾಗಿ ಗೇಲ್‌, ರಾಹುಲ್‌ ಬ್ಯಾಟಿಂಗ್‌ ಮೇಲೆ ಪಂಜಾಬ್‌ ಹೆಚ್ಚು ಭರವಸೆ ಇಡಬೇಕಾಗಿದೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.