ರಾಜಸ್ಥಾನ್‌-ಮುಂಬೈ ಮತ್ತೆ ಮುಖಾಮುಖಿ


Team Udayavani, Apr 20, 2019, 6:00 AM IST

28

ಜೈಪುರ: ಗೆಲುವಿಗಾಗಿ ಪರದಾ ಡುತ್ತಿರುವ ರಾಜಸ್ಥಾನ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ ಮತ್ತೂಮ್ಮೆ ಗೆದ್ದು ಪ್ಲೇಆಫ್ ಆಸೆ ಜೀವಂತ ವಾಗಿಟ್ಟುಕೊಳ್ಳಲು ಕಾತರಿಸುತ್ತಿದೆ. ಶನಿವಾರದ ಮೊದಲ ಪಂದ್ಯದಲ್ಲಿ ರಾಜಸ್ಥಾನ್‌-ಮುಂಬೈ “ಸವಾಯ್‌ ಮನ್‌ಸಿಂಗ್‌’ ಸ್ಟೇಡಿಯಂನಲ್ಲಿ ಖಾಮುಖಿಯಾಗಲಿವೆ. ಮುಂಬೈ ವಿರುದ್ಧ ಮೊದಲ ಪಂದ್ಯದಲ್ಲಿ ಜಯಿಸಿರುವ ರಾಜಸ್ಥಾನ್‌ 2ನೇ ಗೆಲುವಿಗೆ ಕಣ್ಣಿಟ್ಟಿದೆ. ಇತ್ತ ತವರಿನಲ್ಲಿ ರಾಜಸ್ಥಾನ್‌ ವಿರುದ್ಧ ಮುಗ್ಗರಿಸಿರುವ ಮುಂಬೈ ಜೈಪುರದಲ್ಲಿ ರಾಜಸ್ಥಾನ್‌ಗೆ ಪ್ರತ್ಯುತ್ತರ ನೀಡಲು ಸಿದ್ಧವಾಗಿದೆ.

ಮುಂಬೈಯೇ ಮುಂದೆ
ಐಪಿಎಲ್‌ನಲ್ಲಿ ಎರಡೂ ತಂಡಗಳು 22 ಬಾರಿ ಮುಖಾಮುಖೀಯಾಗಿದ್ದು, ಮುಂಬೈ 11ರಲ್ಲಿ ಜಯಿಸಿದೆ. ರಾಜಸ್ಥಾನ್‌ 10ರಲ್ಲಿ ಗೆದ್ದಿದೆ. ಒಂದು ಪಂದ್ಯ ಮಾತ್ರ ಮಳೆಯಿಂದ ರದ್ದಾಗಿದೆ.

ರಾಜಸ್ಥಾನ್‌ನಲ್ಲಿಲ್ಲ ಸಂಘಟಿತ ಪ್ರದರ್ಶನ
6 ಸೋಲು, ಎರಡು ಗೆಲುವಿನಿಂದ ಅಂಕಪಟ್ಟಿಯಲ್ಲಿ ಕೊನೆಯಿಂದ 2ನೇ ಸ್ಥಾನದಲ್ಲಿರುವ ಆತಿಥೇಯ ರಾಜಸ್ಥಾನ್‌ ಮತ್ತೆ ಟ್ರ್ಯಾಕ್‌ಗೆ ಮರುಳಲು ಮುಂಬೈ ವಿರುದ್ಧದ ಪಂದ್ಯ ಗೆಲ್ಲುವುದು ಅನಿವಾರ್ಯ. ಕಳೆದ ಶನಿವಾರ ವಾಂಖೇಡೆ ಪಂದ್ಯದಲ್ಲಿ ಮುಂಬೈ ವಿರುದ್ಧ 4 ವಿಕೆಟ್‌ಗಳ ಜಯದ ಉತ್ಸಾಹ ರಾಜಸ್ಥಾನ್‌ ತಂಡದಲ್ಲಿದ್ದರೂ ತವರಿನ ಪಂದ್ಯ ಕೈಹಿಡಿಯುವುದೇ ಎಂಬುದು ನಿಗೂಢ. ತವರಿನಲ್ಲಿ 4 ಪಂದ್ಯಗಳನ್ನಾಡಿರುವ ರಾಜಸ್ಥಾನ್‌ 3 ಪಂದ್ಯಗಳಲ್ಲಿ ಮುಗ್ಗರಿಸಿದೆ. ಹೀಗಾಗಿ ತವರಿನ ಆಟ ರಾಜಸ್ಥಾನ್‌ ಪರವಾಗಿಲ್ಲ.

ರನ್‌ಗಾಗಿ ಪರದಾಟ
ಆಟಗಾರರಲ್ಲಿ ಸ್ಥಿರ ಪ್ರದರ್ಶನ ಬರದಿರು ವುದು ತಂಡಕ್ಕೆ ಮುಳುವಾಗಿ ಪರಿಣಮಿಸಿದೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಜಾಸ್‌ ಬಟ್ಲರ್‌ ಹೊರತು ಪಡಿಸಿ ಉಳಿದೆಲ್ಲ ಬ್ಯಾಟ್ಸ್‌ ಮನ್‌ಗಳು ರನ್‌ಗಳಿಗೆ ಪರದಾಡಿದ್ದರು. ಸಂಜು ಸ್ಯಾಮ್ಸನ್‌, ನಾಯಕ ಅಜಿಂಕ್ಯ ರಹಾನೆ ಒಂದು ಪಂದ್ಯದಲ್ಲಿ ಮಿಂಚಿದರೆ ಇನ್ನೊಂದು ಪಂದ್ಯದಲ್ಲಿ ಎಡವುತ್ತಿದ್ದಾರೆ. ಪಂಜಾಬ್‌ ವಿರುದ್ಧದ ಹಿಂದಿನ ಪಂದ್ಯದಲ್ಲಿ 182 ರನ್‌ ಗುರಿ ತಲುಪಲು ಹೆಣಗಾಡಿದ್ದು ಇದಕ್ಕೆ ಉತ್ತಮ ನಿದರ್ಶನ. ಬೌಲಿಂಗ್‌ನಲ್ಲೂ ಹೇಳಿಕೊಳ್ಳುವಷ್ಟು ರಾಜಸ್ಥಾನ್‌ ಬಲಿಷ್ಠವಾಗಿಲ್ಲ. ಜೋಫ‌ ಆರ್ಚರ್‌, ಶ್ರೇಯಸ್‌ ಗೋಪಾಲ್‌ ತಕ್ಕಮಟ್ಟಿಗೆ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಉಳಿದ ಬೌಲರ್‌ಗಳಿಂದ ಯಾವುದೇ ಸಾಥ್‌ ದೊರೆಯುತ್ತಿಲ್ಲ. ಈ ಎಲ್ಲ ತಪ್ಪುಗಳನ್ನು ಅರ್ಥೈಸಿಕೊಂಡು ಅಂಗಳಕ್ಕಿಳಿದರೇ ರಾಜಸ್ಥಾನಕ್ಕೆ ಗೆಲುವು ಕಷ್ಟವೇನಲ್ಲ.

ಮುಂಬೈ ಬಲಿಷ್ಠ
ಇತ್ತ ಬಿಗ್‌ ಹಿಟ್ಟರ್, ಉತ್ತಮ ಬೌಲರ್ ಮತ್ತು ಪರಿಪೂರ್ಣ ಆಲ್‌ರೌಂಡರ್‌ಗಳನ್ನು ಒಳಗೊಂಡಿರುವ ಮುಂಬೈ ತಂಡ ಬಲಿಷ್ಠವಾಗಿದೆ. 3 ಬಾರಿಯ ಚಾಂಪಿಯನ್ಸ್‌ ಗುರುವಾರದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ 40 ರನ್‌ಗಳ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಈ ಗೆಲುವಿನ ಲಯವನ್ನು ಮುಂಬೈ ಮುಂದುವರಿಸುವ ತವಕದಲ್ಲಿದೆ. ರೋಹಿತ್‌ ಶರ್ಮ, ಕ್ವಿಂಟನ್‌ ಡಿ ಕಾಕ್‌ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರೇ ಪಾಂಡ್ಯ ಸಹೋದರರಾದ ಹಾರ್ದಿಕ್‌-ಕೃಣಾಲ್‌, ಬಿಗ್‌ ಹಿಟ್ಟರ್‌ ಕೈರನ್‌ ಪೊಲಾರ್ಡ್‌ ತಂಡವನ್ನು ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೌಲಿಂಗ್‌ನಲ್ಲಿ ಬುಮ್ರಾ, ಲಸಿತ ಮಾಲಿಂಗ, ರಾಹುಲ್‌ ಚಹರ್‌ ತಂಡಕ್ಕೆ ಬಲ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.