ರಸೆಲ್‌ ತಡೆಗೆ ಚೆನ್ನೈ ಬಳಿ ಅಸ್ತ್ರವಿದೆಯೇ?


Team Udayavani, Apr 9, 2019, 6:30 AM IST

Russel

ಚೆನ್ನೈ: ಐಪಿಎಲ್‌ನ ಬಿಗ್‌ ಮ್ಯಾಚ್‌ ಒಂದಕ್ಕೆ ಮಂಗಳವಾರ ರಾತ್ರಿ “ಎಂ.ಎ. ಚಿದಂಬರಂ ಸ್ಟೇಡಿಯಂ’ ಸಾಕ್ಷಿಯಾಗಲಿದೆ. ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಬಿಗ್‌ ಹಿಟ್ಟರ್‌ಗಳನ್ನು ಒಳಗೊಂಡಿರುವ ಕೋಲ್ಕತಾ ನೈಟ್‌ರೈಡರ್ ತಂಡಗಳು ಮುಖಾಮುಖೀಯಾಗಲಿವೆ.

ಈ ಪಂದ್ಯಕ್ಕೂ ಮುನ್ನ ಉದ್ಭವಿಸಿರುವ ದೊಡ್ಡ ಪ್ರಶ್ನೆಯೆಂದರೆ, “ಆ್ಯಂಡ್ರೆ ರಸೆಲ್‌ ಅವರನ್ನು ತಡೆಯಲು ಚೆನ್ನೈ ಬಳಿ ಅಸ್ತ್ರವಿದೆಯೇ?’ ಎಂಬುದು. ತಂಡ ಎಷ್ಟೇ ಕಠಿನ ಸ್ಥಿತಿಯಲ್ಲಿದ್ದರೂ ತನ್ನ ಪವರ್‌ಫ‌ುಲ್‌ ಸ್ಟ್ರೋಕ್‌ಗಳ ಮೂಲಕ ಎದುರಾಳಿ ಬೌಲರ್‌ಗಳನ್ನು ಪುಡಿಗೈದು, ಒಂದೆರಡು ಓವರ್‌ಗಳಲ್ಲೇ ಪಂದ್ಯದ ಗತಿಯನ್ನು ಬದಲಿಸಬಲ್ಲ ಸಮರ್ಥ ಆಟಗಾರನಾಗಿ ಹೊರಹೊಮ್ಮಿದ್ದಾರೆ ಆ್ಯಂಡ್ರೆ ರಸೆಲ್‌. ಈ ಐಪಿಎಲ್‌ನ ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್‌ ಎಂಬುದು ಈ ಕೆರಿಬಿಯನ್‌ ದೈತ್ಯನ ಪಾಲಿನ ಹೆಗ್ಗಳಿಕೆ. ಸದ್ಯ ರಸೆಲ್‌ ಅಬ್ಬರದ ಮುಂದೆ ಗೇಲ್‌ ಸಹಿತ ಉಳಿದೆಲ್ಲ ಬ್ಯಾಟ್ಸ್‌ಮನ್‌ಗಳೂ ಮಂಕಾಗಿದ್ದಾರೆ.
ರಸೆಲ್‌ ಕಳೆದ ಶುಕ್ರವಾರ ಬೆಂಗಳೂರಿ ನಲ್ಲೇ ಆರ್‌ಸಿಬಿಯನ್ನು ಚೆಂಡಾಡಿದ ದೃಶ್ಯಾವಳಿ ಈಗಲೂ ಕಣ್ಮುಂದೆ ಸುಳಿಯುತ್ತಿದೆ!

ಆದರೆ ರಸೆಲ್‌ ಮಾತ್ರ ಕೆಕೆಆರ್‌ನ ಬ್ಯಾಟಿಂಗ್‌ ಅಸ್ತ್ರ ವಲ್ಲ. ಅಲ್ಲಿ ಕ್ರಿಸ್‌ ಲಿನ್‌, ಸುನೀಲ್‌ ನಾರಾಯಣ್‌, ನಿತೀಶ್‌ ರಾಣಾ, ದಿನೇಶ್‌ ಕಾರ್ತಿಕ್‌ ಕೂಡ ಮುನ್ನುಗ್ಗಿ ಬೀಸುವವರೇ ಆಗಿದ್ದಾರೆ. ಹೀಗಾಗಿ ಕೆಕೆಆರ್‌ ಬ್ಯಾಟಿಂಗಿಗೆ ಹೋಲಿಸಿದರೆ ಚೆನ್ನೈ ಬ್ಯಾಟಿಂಗ್‌ “ತುಸು ಹಿಂದೆ’ ಎಂದೇ ಹೇಳಬೇಕಾಗುತ್ತದೆ. ಶೇನ್‌ ವಾಟ್ಸನ್‌, ಅಂಬಾಟಿ ರಾಯುಡು ಈ ವರೆಗೆ ಕ್ಲಿಕ್‌ ಆಗಿಲ್ಲ. ಹೀಗಾಗಿ ಡು ಪ್ಲೆಸಿಸ್‌, ರೈನಾ, ಧೋನಿ, ಜಾಧವ್‌ ಅವರನ್ನೇ ಹೆಚ್ಚು ಅವಲಂಬಿಸಬೇಕಿದೆ.

ಸ್ಪಿನ್ನರ್‌ಗಳೇ ನಿರ್ಣಾಯಕ
ಎರಡೂ ತಂಡಗಳು ಕ್ವಾಲಿಟಿ ಸ್ಪಿನ್ನರ್‌ಗಳನ್ನು ಹೊಂದಿರುವುದು ವಿಶೇಷ. ಚೆನ್ನೈ ಬಳಿ ಹರ್ಭಜನ್‌, ಜಡೇಜ, ತಾಹಿರ್‌ ಇದ್ದಾರೆ. ಸುನೀಲ್‌ ನಾರಾಯಣ್‌, ಪೀಯೂಷ್‌ ಚಾವ್ಲಾ, ಕುಲದೀಪ್‌ ಯಾದವ್‌ ಕೋಲ್ಕತಾದ ಸ್ಪಿನ್‌ ಅಸ್ತ್ರಗಳು. ಯಾರು ಸ್ಪಿನ್ನನ್ನು ಸಮರ್ಥವಾಗಿ ನಿಭಾಯಿಸುವರೋ, ಅವರಿಗೆ ಗೆಲುವಿನ ಅವಕಾಶ ಹೆಚ್ಚು.

ದೊಡ್ಡ ಸ್ಕೋರ್‌ ಸಾಧ್ಯವೇ?
ಚೆನ್ನೈ ಟ್ರ್ಯಾಕ್‌ ತುಸು ನಿಧಾನ ಗತಿಯಿಂದ ಕೂಡಿರುವುದರಿಂದ ಇಲ್ಲಿ ಈ ವರೆಗೆ ದೊಡ್ಡ ಸ್ಕೋರ್‌ ದಾಖಲಾಗಿಲ್ಲ. ಆದರೆ ಇದನ್ನು ಸುಳ್ಳು ಮಾಡುವ ಸಾಮರ್ಥ್ಯ ಕೆಕೆಆರ್‌ಗೆ ಇದೆ. ಧೋನಿ ಪಡೆ ತವರಿನಲ್ಲಿ ಆಡುತ್ತಿದೆ ಎಂಬುದಷ್ಟೇ ಪ್ಲಸ್‌ ಪಾಯಿಂಟ್‌. ತವರಿನ ಎಲ್ಲ 3 ಪಂದ್ಯಗಳಲ್ಲೂ ಚೆನ್ನೈ ಜಯ ಸಾಧಿಸಿದೆ. ಆದರೆ ಕೆಕೆಆರ್‌ ನಾಯಕ ದಿನೇಶ್‌ ಕಾರ್ತಿಕ್‌ ಪಾಲಿಗೆ ಚೆನ್ನೈ ತವರೂರು ಎಂಬುದನ್ನು ಮರೆಯುವಂತಿಲ್ಲ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.