ರಾಜಸ್ಥಾನ ರಾಯಲ್ಸ್‌ ಗೆ ಕಿಂಗ್ಸ್‌ ಸವಾಲು


Team Udayavani, Apr 11, 2019, 6:30 AM IST

rajastan

ಜೈಪುರ: ಮಂಗಳವಾರದ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಭರ್ಜರಿ 7ವಿಕೆಟ್‌ಗಳ ಗೆಲುವು ಸಾಧಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಜೈಪುರಕ್ಕೆ ಬಂದಿಳಿದಿದ್ದು. ಗುರುವಾರ ಜೈಪುರ ಅಂಗಳದಲ್ಲಿ ರಾಜಸ್ಥಾನದ ವಿರುದ್ಧ ಆಡಲಿಳಿಯಲಿದೆ. ರಾಜಸ್ಥಾನ ವಿರುದ್ಧ ಮೊದಲ ಪಂದ್ಯವನ್ನು ಸುಲಭವಾಗಿ ಗೆದ್ದಿರುವ ಚೆನ್ನೈ 2ನೇ ಪಂದ್ಯದಲ್ಲೂ ರಾಜಸ್ಥಾನ ಮೇಲೆ ಸವಾರಿ ಮಾಡುವ ಸಿದ್ಧತೆಯಲ್ಲಿದೆ.

ಮಾ.31ರ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್‌ 8 ರನ್‌ಗಳ ಸೋಲನುಭವಿಸಿತ್ತು. ಈ ಸೋಲಿನ ಸೇಡು ತೀರಿಸಿಕೊಳ್ಳಲು ರಹಾನೆ ಪಡೆ ಕಾತುರದಿಂದ ಕಾಯುತ್ತಿದೆ. ಆಡಿದ 5 ಪಂದ್ಯದಲ್ಲಿ ಕೇವಲ ಒಂದು ಪಂದ್ಯವನ್ನಷ್ಟೆ ಗೆದ್ದಿರುವ ರಾಜಸ್ಥಾನ್‌ಗೆ ಉಳಿದಿರುವ ಪಂದ್ಯ ಗಳನ್ನು ಜಯಿಸುವುದು ಅನಿರ್ವಾಯ. ಈ ಪಂದ್ಯದಲ್ಲಿಯೂ ಸೋತರೆ ಪ್ಲೇಆಫ್ ಕನಸು ಮರೀಚಿಕೆಯಾಗಿಯೇ ಉಳಿಯುತ್ತದೆ. ಚೆನ್ನೈ ತಂಡವನ್ನು ಸೋಲಿಸಿ ಗೆಲು ವಿನ ಟ್ರ್ಯಾಕ್‌ ಏರುವ ತಯಾರಿ ಮಾಡಿಕೊಳ್ಳುತ್ತಿದೆ. ಚೆನ್ನೈ- ರಾಜಸ್ಥಾನ್‌ ಐಪಿಎಲ್‌ನಲ್ಲಿ ಕಳೆದ ಪಂದ್ಯ ಸೇರಿದಂತೆ 21 ಬಾರಿ ಮುಖಾಮುಖೀ ಯಾಗಿವೆ.

ಇದರಲ್ಲಿ ಚೆನ್ನೈ 13ರಲ್ಲಿ ಜಯಿಸಿದ್ದರೆ ರಾಜಸ್ಥಾನ್‌ 8ರಲ್ಲಿ ಗೆದ್ದಿದೆ.

ಚೆನ್ನೈ ಬಲಿಷ್ಠ ತಂಡ
ಪ್ರತೀ ಸೀಸನ್‌ನಲ್ಲೂ ಬಲಿಷ್ಠ ತಂಡವೆನಿಸಿ ಕೊಂಡಿರುವ ಚೆನ್ನೈ ಈ ಬಾರಿಯೂ ಆಡಿದ 6 ಪಂದ್ಯಗಳಲ್ಲಿ ಐದನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಹಿರಿಯರನ್ನೇ ಹೆಚ್ಚಾಗಿ ಹೊಂದಿರುವ ಈ ತಂಡದಲ್ಲಿ ಅನುಭವಕ್ಕೇನೂ ಕೊರತೆ ಇಲ್ಲ. ತಂಡದ ಆಟಗಾರರು ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕಡಿಮೆ ರನ್‌ ಗಳಿಸಿದರೂ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಬಲಿಷ್ಠ ಬೌಲಿಂಗ್‌ ಪಡೆ ಒಂದೆಡೆಯಾದರೆ ಬ್ಯಾಟಿಂಗ್‌ನಲ್ಲಿ ಕುಸಿತ ಕಂಡರೆ ನಾಯಕನ ಜವಾಬ್ದಾರಿಯುತ ಆಟ ಇವೆಲ್ಲ ಚೆನ್ನೈ ತಂಡದ ಪ್ಲಸ್‌ ಪಾಯಿಂಟ್‌. ಮೊದಲ ಪಂದ್ಯದಲ್ಲಿ ರಾಜಸ್ಥಾನ್‌ ವಿರುದ್ಧ ಆರಂಭಿಕ ಆಘಾತ ಎದುರಿಸಿದ ಚೆನ್ನೈಗೆ ಆಸರೆಯಾಗಿದ್ದು ನಾಯಕ ಧೋನಿ. 75 ರನ್‌ ಗಳಿಸಿ ಅವರು ತಂಡದ ಮೊತ್ತವನ್ನು 175ಕ್ಕೆ ತಲುಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದನ್ನು ಮರೆಯುವಂತಿಲ್ಲ. ಇಮ್ರಾನ್‌ ತಾಹಿರ್‌, ಹರ್ಭಜನ್‌ಸಿಂಗ್‌, ರವೀಂದ್ರ ಜಡೇಜಾ ಸ್ಪಿನ್‌ ದಾಳಿಗೆ ಎದುರಾಳಿ ಬ್ಯಾಟ್ಸ್‌ ಮನ್‌ಗಳು ರನ್‌ ಗಳಿಸಲು ಪರದಾಡುವ ಸ್ಥಿತಿ ಎದುರಾಗಿದೆ. ಇದಕ್ಕೆ ಮಂಗಳವಾರ ಕೆಕೆಆರ್‌ವಿರುದ್ಧದ ಆಟವೇ ಸಾಕ್ಷಿ.

ರಾಜಸ್ಥಾನ್‌ ಕೈ ಹಿಡಿಯದ ಲಕ್‌
ಬಲಿಷ್ಠ ಆಟಗಾರರನ್ನೇ ಹೊಂದಿದ ರಾಜಸ್ಥಾನ್‌ಗೆ ಅದೃಷ್ಟದ ಬಾಗಿಲು ಇನ್ನೂ ತೆರೆದಿಲ್ಲ. ಸುಲಭವಾಗಿ ಗೆಲ್ಲುವ ಪಂದ್ಯಗಳನ್ನೆಲ್ಲ ಕೊನೆಯ ಹಂತದಲ್ಲಿ ಕೈಚೆಲ್ಲುತ್ತಿರುವುದು ರಾಜಸ್ಥಾನ್‌ ತಂಡಕ್ಕೆ ಹಿನ್ನಡೆಯಾಗಿದೆ. ಆರಂಭದ 2 ಪಂದ್ಯಗಳಲ್ಲಿ ಮಿಂಚಿದ ಸಂಜು ಸ್ಯಾಮ್ಸನ್‌ ಮತ್ತು ಜೋಸ್‌ ಬಟ್ಲರ್‌ ಬ್ಯಾಟ್‌ ಅನಂತರದ ಪಂದ್ಯಗಳಲ್ಲಿ ಸದ್ದು ಮಾಡದಿರುವುದು ಸಮಸ್ಯೆಯಾದರೆ, ಸ್ಟೀವನ್‌ ಸ್ಮಿತ್‌ ಪಾರ್ಮ್ಗೆ ಮರಳಿರುವುದು ತಂಡಕ್ಕೆ ಕೊಂಚ ಚೇತರಿಕೆಯಾಗಿದೆ.

ಚೆನ್ನೈ ವಿರುದ್ಧ ಆಸ್ಟ್ರೇಲಿಯದ ಬಿಗ್‌ ಹಿಟ್ಟರ್‌ ಆಶrನ್‌ ಟರ್ನರ್‌ ಕಣಕಿಳಿಯುವ ಸಾಧ್ಯತೆ ಇದೆ. ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ , ಬಟ್ಲರ್‌, ಸ್ಮಿತ್‌ ನಿರೀಕ್ಷಿತ ಪ್ರದರ್ಶನ ನೀಡಿದರೆ ರಾಜಸ್ಥಾನ್‌ ದೊಡ್ಡ ಮೊತ್ತ ಕಲೆಹಾಕುವಲ್ಲಿ ಅನುಮಾನವಿಲ್ಲ. ಬೌಲಿಂಗ್‌ನಲ್ಲಿ ಕನ್ನಡಿಗರಾದ ಕೃಷ್ಣಪ್ಪ ಗೌತಮ್‌, ಶ್ರೇಯಸ್‌ ಗೋಪಾಲ್‌ ಉತ್ತಮ ಲಯದಲ್ಲಿದ್ದಾರೆ. ಇವರಿಗೆ ವೇಗಿಗಳಾದ ಜಯ್‌ದೇವ್‌ ಉನಾದ್ಕತ್‌, ಧವಳ್‌ ಕುಲಕರ್ಣಿ ಸಾಥ್‌ ನೀಡಿದರೆ ರಾಜಸ್ಥಾನ್‌ಗೆ ಗೆಲುವು ಒಲಿಯುವುದು ಕಷ್ಟವೇನಲ್ಲ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.