ಗೆದ್ದರೆ ಮಾತ್ರ ಮುಂದಿನ ಕನಸು

ಇಂದು ಕೊಹ್ಲಿ ಪಡೆಗೆ ಕೋಲ್ಕತ ಎದುರಾಳಿ

Team Udayavani, Apr 5, 2019, 6:00 AM IST

RCB-VS-KKR

ಬೆಂಗಳೂರು: ಸತತ ನಾಲ್ಕು ಸೋಲು ಅನುಭವಿಸಿ ಐಪಿಎಲ್‌ 12ನೇ ಆವೃತ್ತಿಯಲ್ಲಿ ಕುಂಟುತ್ತಾ ಸಾಗುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಗೆಲುವೆಂಬುದು ಗಗನ ಕುಸುಮವಾಗಿಯೇ ಉಳಿದುಬಿಟ್ಟಿದೆ. ಸತತ ಸೋಲುಗಳು ಆಟಗಾರರ ಜಂಘಾಬಲವನ್ನೇ ಕುಸಿಯುವಂತೆ ಮಾಡಿದೆ.

ಇದೆಲ್ಲದರ ನಡುವೆ ಶುಕ್ರವಾರದ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ (ಕೆಕೆಆರ್‌) ತಂಡವನ್ನು ಕೊಹ್ಲಿ ಹುಡುಗರು ಎದುರಿಸಲಿದ್ದಾರೆ. ಇಲ್ಲಾದರೂ ಆರ್‌ಸಿಬಿಗೆ ಗೆಲುವು ಸಿಗಬಹುದೆ? ಅಥವಾ ಮತ್ತೆ ಕೊಹ್ಲಿ ಪಡೆ ಸೋಲನ್ನೇ ಅಪ್ಪಿಕೊಳ್ಳಬಹುದೇ? ಈ ಎಲ್ಲ ಪ್ರಶ್ನೆಗೆ ಶುಕ್ರವಾರ ತಡರಾತ್ರಿ ಉತ್ತರ ಸಿಗಲಿದೆ.

ಪುಟಿದೇಳುತ್ತಿಲ್ಲ ಆರ್‌ಸಿಬಿ: ತಾರಾ ಬ್ಯಾಟ್ಸ್‌ಮನ್‌ಗಳಾದ ವಿರಾಟ್‌ ಕೊಹ್ಲಿ, ಎಬಿಡಿ ವಿಲಿಯರ್ ಸಮಯಕ್ಕೆ ಸರಿಯಾಗಿ ಸಿಡಿಯುತ್ತಿಲ್ಲ. ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡುತ್ತಿಲ್ಲ. ಕಾಲಿನ್‌ ಗ್ರ್ಯಾನ್‌ಹೋಮ್‌, ಶಿಮ್ರಾನ್‌ ಹೆಟ್‌ಮೈರ್‌ರಂತಹ ಖ್ಯಾತನಾಮರು ಸದ್ದಿಲ್ಲದೆ ಔಟಾಗಿ ಪೆವಿಲಿಯನ್‌ ಪರೇಡ್‌ ನಡೆಸುತ್ತಿದ್ದಾರೆ. ಬೌಲಿಂಗ್‌ನಲ್ಲಿ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೊರತುಪಡಿಸಿ ಮತ್ತೆಲ್ಲ ಬೌಲರ್‌ಗಳು ದುಬಾರಿಯಾಗುತ್ತಿದ್ದಾರೆ. ಫೀಲ್ಡಿಂಗ್‌ನಲ್ಲೂ ಆರ್‌ಸಿಬಿ ತಪ್ಪುಗಳನ್ನೇ ಎಸಗುತ್ತಿದೆ. ಒಟ್ಟಾರೆ ತನ್ನ ಬಲವನ್ನು ಕಳೆದುಕೊಂಡು ಹಲ್ಲು ಕಿತ್ತ ಹಾವಿನಂತಾಗಿದೆ.

ಒಂದೆರಡು ಪಂದ್ಯದಲ್ಲಿ ಸೋತ ಆರ್‌ಸಿಬಿ ತನ್ನ ತಪ್ಪನ್ನು ತಿದ್ದಿಕೊಳ್ಳಬಹುದು, ಮುಂದೆ ಸುಧಾರಿಸಿಕೊಳ್ಳಬಹುದು ಎಂದು ಅಭಿಮಾನಿಗಳು ತಮ್ಮಷ್ಟಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಆದರೆ ತಪ್ಪುಗಳನ್ನೇ ಮನೆಯನ್ನಾಗಿಸಿಕೊಂಡ ಆರ್‌ಸಿಬಿ ತಾನಾಡಿರುವ ನಾಲ್ಕು ಪಂದ್ಯಗಳಲ್ಲೂ ಹೀನಾಯ ಬ್ಯಾಟಿಂಗ್‌, ಬೌಲಿಂಗ್‌ ಪ್ರದರ್ಶಿಸಿ ಮುಖಭಂಗ ಅನುಭವಿಸಿದೆ. ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡವು ಧೋನಿ ನೇತೃತ್ವದ ಚೆನ್ನೈಗೆ ಶರಣಾಗಿತ್ತು. 2ನೇ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆಲುವಿನ ಸಮೀಪ ಬಂದು ಸೋತಿತ್ತು. ಆ ಬಳಿಕ ಹೈದ್ರಾಬಾದ್‌ ಹಾಗೂ ರಾಜಸ್ಥಾನ್‌ ವಿರುದ್ಧವೂ ಆರ್‌ಸಿಬಿ ತನ್ನ ಕಳಪೆ ಆಟ ಪ್ರದರ್ಶಿಸಿ ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಇದೀಗ 5ನೇ ಪಂದ್ಯಕ್ಕೆ ಸಜ್ಜಾಗಿದೆ. ಆರ್‌ಸಿಬಿ ಹಿಂದಿನ ಎಲ್ಲ ನೋವನ್ನು ಮರೆತು ತನ್ನ ಮುಂದಿನ ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸುತ್ತಾ ಹೋದರೆ ಪ್ಲೆ ಆಫ್ಗೇರುವ ಸಾಧ್ಯತೆ ಇದೆ. ಆದರೆ ಆರ್‌ಸಿಬಿ ಬ್ಯಾಟ್ಸ್‌ಮನ್‌, ಬೌಲರ್ ಮೈ ಚಳಿ ಬಿಟ್ಟು ಆಡಬೇಕು ಅಷ್ಟೆ.

ಬಲಿಷ್ಠ ಕೆಕೆಆರ್‌: ಕೆಕೆಆರ್‌ ತನ್ನ ಮೊದಲೆರಡು ಪಂದ್ಯದಲ್ಲಿ ಕ್ರಮವಾಗಿ ಹೈದ್ರಾಬಾದ್‌, ಪಂಜಾಬ್‌ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಡೆಲ್ಲಿ ವಿರುದ್ಧದ ಪಂದ್ಯ ಟೈನಲ್ಲಿ ಅಂತ್ಯಗೊಂಡಿತ್ತು. ಸೂಪರ್‌ ಓವರ್‌ನಲ್ಲಿ ಮುಕ್ತಾಯಗೊಂಡ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಜಯ ಸಾಧಿಸಿತ್ತು. ಕೇವಲ 3 ರನ್‌ನಿಂದ ಕೆಕೆಆರ್‌ ಸೋಲು ಅನುಭವಿಸಿತ್ತು. ಆ್ಯಂಡ್ರೆ ರಸೆಲ್‌, ದಿನೇಶ್‌ ಕಾರ್ತಿಕ್‌, ರಾಬಿನ್‌ ಉತ್ತಪ್ಪ, ಶುಭ್‌ಮನ್‌ ಗಿಲ್‌ರಂತಹ ಅಗ್ರ ಬ್ಯಾಟ್ಸ್‌ಮನ್‌ಗಳು ಕೆಕೆಆರ್‌ ಪರ ಮಿಂಚುವ ಸಾಮರ್ಥ್ಯ ಹೊಂದಿದ್ದಾರೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.