ಕೋಲ್ಕತಾಗೆ ಪಂಜಾಬ್‌ ಸವಾಲು

ಕ್ರಿಸ್‌ ಗೇಲ್‌, ಆ್ಯಂಡ್ರೆ ರಸೆಲ್‌ ಪ್ರಮುಖ ಆಕರ್ಷಣೆ

Team Udayavani, Mar 27, 2019, 7:16 AM IST

w-23

ಕೋಲ್ಕತಾ: ಈ ಬಾರಿಯ ಐಪಿಎಲ್‌ನ ಎರಡನೇ ಪಂದ್ಯದಲ್ಲಿ ರೋಚಕತೆಗೆ ಸಾಕ್ಷಿಯಾದ “ಈಡನ್‌ ಗಾರ್ಡನ್‌’ ಬುಧವಾರ ಮತ್ತೂಂದು ಪಂದ್ಯಕ್ಕೆ ಸಜ್ಜಾಗಿದೆ. ತಮ್ಮ ಮೊದಲ ಪಂದ್ಯ ಜಯಿಸಿದ ಹುಮ್ಮಸ್ಸಿನಲ್ಲಿರುವ ಕೆಕೆಆರ್‌ ಮತ್ತು ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಇಲ್ಲಿ ಮುಖಾಮುಖೀ ಯಾಗಲಿದ್ದು ಗೆಲುವಿನ ಉತ್ಸಾಹದಲ್ಲಿವೆ.

ಶ್ರೇಷ್ಠ ನಿರ್ವಹಣೆ ನೀಡಿ ಮೊದಲ ಪಂದ್ಯ ಗೆದ್ದಿರುವ ಕೆಕೆಆರ್‌ ಮತ್ತು ಪಂಜಾಬ್‌ ಬಲಿಷ್ಠವಾಗಿ ಗೋಚರಿಸಿವೆ. ಕೆಕೆಆರ್‌ ರವಿವಾರದ ಪಂದ್ಯದಲ್ಲಿ ಸನ್‌ರೈಸರ್ ಹೈದರಾಬಾದ್‌ ತಂಡವನ್ನು 6 ವಿಕೆಟ್‌ಗಳಿಂದ ಸೋಲಿ ಸಿತ್ತು. ಆ ಪಂದ್ಯದಲ್ಲಿ ಕೆಕೆಆರ್‌ ಬೌಲಿಂಗ್‌ನಲ್ಲಿ ಹಿಡಿತ ಸಾಧಿಸಲು ವಿಫ‌ಲವಾದರೂ ನಿತೀಶ್‌ ರಾಣ ಮತ್ತು ಆ್ಯಂಡ್ರೆ ರಸೆಲ್‌ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಜಯ ಸಾಧಿಸಿತ್ತು. ಪಂಜಾಬ್‌ ತಂಡ ಜೈಪುರದಲ್ಲಿ ರಾಜಸ್ಥಾನ್‌ವನ್ನು 14 ರನ್‌ಗಳಿಂದ ಸೋಲಿಸಿತ್ತು. ಇಲ್ಲಿ ಕ್ರಿಸ್‌ ಗೇಲ್‌ ಅವರ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದ ಸಂಘಟಿತ ಪ್ರದರ್ಶನ ತಂಡದ ಕೈಹಿಡಿದಿತ್ತು. ಇದೀಗ ಎರಡನೇ ಪಂದ್ಯಕ್ಕೆ ಎರಡೂ ತಂಡಗಳು ಸಿದ್ಧವಾಗಿವೆ.

ಗೇಲ್‌, ರಸೆಲ್‌ ಪ್ರಮುಖ ಆಕರ್ಷಣೆ
ಕೆರಿಬಿಯನ್‌ ದೈತ್ಯರಾದ ಕ್ರಿಸ್‌ ಗೇಲ್‌ ಮತ್ತು ಆ್ಯಂಡ್ರೆ ರಸೆಲ್‌ ಈಗಾಗಲೇ ತಮ್ಮ ಮೊದಲ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಕೋಲ್ಕತಾ ತಂಡಕ್ಕೆ ರಸೆಲ್‌ ಆಸರೆಯಾದರೆ ಪಂಜಾಬ್‌ಗ ಗೇಲ್‌ ಬಲ. ಇವರಿಬ್ಬರೂ ಮೊದಲ ಪಂದ್ಯದಲ್ಲಿÉ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಬುಧವಾರ ರಾತ್ರಿ ನಡೆಯುವ ಆಟದಲ್ಲಿ ಇವರಿಬ್ಬರ ಆಟ ಪ್ರಮುಖ ಆಕರ್ಷಣೆ. ಹೀಗಾಗಿ ಅವರಿಬ್ಬರ ಆಟ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಕೋಲ್ಕತಾಗೆ ಬ್ಯಾಟಿಂಗ್‌ ಬಲ
ಕೋಲ್ಕತಾ ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದೆ. ನಿತೀಶ್‌ ರಾಣ, ಆ್ಯಂಡ್ರೆ ರಸೆಲ್‌, ಉತ್ತಪ್ಪ ಈಗಾಗಲೇ ತಮ್ಮ ಬಲವನ್ನು ತೋರ್ಪಡಿಸಿದ್ದಾರೆ. ಕ್ರಿಸ್‌ ಲಿನ್‌, ದಿನೇಶ್‌ ಕಾರ್ತಿಕ್‌, ಶುಬ್‌ಮನ್‌ ಗಿಲ್‌ ಮೊದಲ ಪಂದ್ಯದಲ್ಲಿ ಎಡವಿದ್ದರೂ ದ್ವಿತೀಯ ಪಂದ್ಯದಲ್ಲಿ ಸಿಡಿಯುವ ವಿಶ್ವಾಸದಲ್ಲಿದ್ದಾರೆ. ಉತ್ತಮ ಬೌಲರ್‌ಗಳಿದ್ದರೂ ಮೊದಲ ಪಂದ್ಯದಲ್ಲಿ ಆಲ್‌ರೌಂಡರ್‌ ರಸೆಲ್‌ ಹೊರತುಪಡಿಸಿ ಉಳಿದ ಬೌಲರ್‌ಗಳು ಮೋಡಿ ಮಾಡಿರಲಿಲ್ಲ. ಯಾದವ್‌, ಚಾವ್ಲಾ, ಸುನಿಲ್‌ ನಾರಾಯಣ್‌ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫ‌ಲರಾಗಿದ್ದರು.

ಇತ್ತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಪಂಜಾಬ್‌ ಬಲಿಷ್ಠವಾಗಿದೆ. ಕ್ರಿಸ್‌ ಗೇಲ್‌, ಮಾಯಾಂಕ್‌ ಅಗರ್ವಾಲ್‌, ಸಫ‌ìರಾಜ್‌ ಖಾನ್‌, ನಿಕೋಲಸ್‌ ಪೂರನ್‌ ಮತ್ತೂಮ್ಮೆ ಸಿಡಿಯಲು ಸಿದ್ಧರಾಗಿದ್ದಾರೆ. ರಾಜಸ್ಥಾನ ವಿರುದ್ಧ ಮುಗ್ಗರಿಸಿದ ಕನ್ನಡಿಗ ರಾಹುಲ್‌ ಈ ಪಂದ್ಯದ ಮೂಲಕ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಅನುಭವಿ ಬೌಲರ್‌ಗಳಾದ ಅಶ್ವಿ‌ನ್‌, ಮಹಮ್ಮದ್‌ ಶಮಿ ಜತೆಗೆ ಯುವ ಬೌಲರ್‌ಗಳಾದ ಅಂಕಿತ್‌ ರಜಪೂತ್‌, ಸ್ಯಾಮ್‌ ಕರನ್‌ ಎದುರಾಳಿಗಳನ್ನು ಕಟ್ಟಿಹಾಕುವ ಸಾಮರ್ಥ್ಯಹೊಂದಿದ್ದಾರೆ.

ಕೆಕೆಆರ್‌-ಪಂಜಾಬ್‌ ಇಲ್ಲಿಯ ವರೆಗೆ 23 ಬಾರಿ ಎದುರಾಗಿವೆ. ಇದರಲ್ಲಿ ಕೆಕೆಆರ್‌ 15 ಪಂದ್ಯ ಗೆದ್ದಿದ್ದರೆ, ಪಂಜಾಬ್‌ 8 ಪಂದ್ಯವಷ್ಟೇ ಜಯಿಸಿದೆ. ಪಂಜಾಬ್‌ ಈಡನ್‌ನಲ್ಲಿ 3 ಬಾರಿಯಷ್ಟೇ ಗೆಲುವು ಸಾಧಿಸಿದೆ. ಹೀಗಾಗಿ ಕೋಲ್ಕತಾಗೆ ತವರಿನಂಗಳದ ಆಟ ಹೆಚ್ಚು ನೆಚ್ಚಿನದ್ದಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.