ರಹಾನೆಗೆ ಕೊಕ್‌, ಸ್ಮಿತ್‌ಗೆ ನಾಯಕತ್ವ


Team Udayavani, Apr 21, 2019, 6:00 AM IST

41

ಜೈಪುರ: ರಾಜಸ್ಥಾನ್‌ ರಾಯಲ್ಸ್ ತಂಡದ ನಾಯಕತ್ವದಲ್ಲಿ ದಿಢೀರ್‌ ಬದಲಾವಣೆ ಸಂಭವಿಸಿದೆ. ಅಜಿಂಕ್ಯ ರಹಾನೆ ಅವರನ್ನು ಕೆಳಗಿಳಿಸಿ ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಅವ ರನ್ನು ನೂತನ ನಾಯಕನನ್ನಾಗಿ ನೇಮಿ ಸಲಾಗಿದೆ. ಶನಿವಾರದ ಮುಂಬೈ ಎದುರಿನ ಪಂದ್ಯದೊಂದಿಗೆ ಈ ಬದಲಾವಣೆ ಜಾರಿಗೆ ಬಂದಿದೆ. ಈ ಬಾರಿಯ ಐಪಿಎಲ್ನಲ್ಲಿ ರಾಜ ಸ್ಥಾನ್‌ ನಿರೀಕ್ಷಿತ ಪ್ರದರ್ಶನ ನೀಡು ವಲ್ಲಿ ವಿಫ‌ಲವಾಗಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಈ ವರೆಗಿನ ಕಳಪೆ ಪ್ರದರ್ಶನದಿಂದ ಹೊರಬರುವ ನಿರೀಕ್ಷೆ ಯಲ್ಲಿ ನಾಯಕತ್ವದಲ್ಲಿ ಬದಲಾವಣೆ ಮಾಡಲಾಗಿದೆ. ಮುಂದಿನ ಎಲ್ಲ ಲೀಗ್‌ ಪಂದ್ಯಗಳಲ್ಲೂ ಸ್ಮಿತ್‌ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.

‘ಮುಂದಿನೆಲ್ಲ ಪಂದ್ಯಗಳಲ್ಲಿ ರಾಜಸ್ಥಾನ್‌ ತಂಡಕ್ಕೆ ಸ್ಮಿತ್‌ ನಾಯಕ ರಾಗಿರುತ್ತಾರೆ. ಕಳೆದ ವರ್ಷ ಅಂಜಿಕ್ಯ ರಹಾನೆ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿ ಪ್ಲೇ ಆಫ್ಗೆ ತಲುಪಿಸಿದ್ದರು. ಈ ಬಾರಿ ಮರಳಿ ಟ್ರ್ಯಾಕ್‌ ಏರಲು ಸೂಕ್ತ ಕಾರ್ಯತಂತ್ರ ರೂಪಿಸಬೇಕಾದ ಕಾರಣ ಇಂಥದೊಂದು ನಿರ್ಧಾರಕ್ಕೆ ಬರಲಾಗಿದೆ’ ಎಂಬುದು ರಾಜಸ್ಥಾನ್‌ ಫ್ರಾಂಚೈಸಿಯ ಹೇಳಿಕೆ.

ಮೇ ಒಂದರ ತನಕ ಸ್ಮಿತ್‌
ಮೇ ಒಂದರ ವರೆಗೆ ಸ್ಮಿತ್‌ ಐಪಿಎಲ್ನಲ್ಲಿ ಪಾಲ್ಗೊಳ್ಳಲಿದ್ದು, ಆಗ ತಂಡದ ಎಲ್ಲ ಲೀಗ್‌ ಪಂದ್ಯಗಳು ಮುಗಿಯಲಿವೆ. ಅಕಸ್ಮಾತ್‌ ತಂಡ ಮುಂದಿನ ಸುತ್ತು ತಲುಪಿದರೆ ಮತ್ತೆ ರಾಜಸ್ಥಾನ್‌ ನಾಯಕತ್ವ ರಹಾನೆ ಪಾಲಾಗುವ ಸಾಧ್ಯತೆ ಇದೆ.

ನಾಯಕತ್ವಕ್ಕೆ ಅಡ್ಡಿಯಾಗಿತ್ತು ನಿಷೇಧ
ಒಂದು ವರ್ಷದ ನಿಷೇಧ ಮುಗಿಸಿ ಐಪಿಎಲ್ ಮೂಲಕ ಮರಳಿ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟ ಸ್ಮಿತ್‌ ಶನಿವಾರದ ಮುಂಬೈ ವಿರುದ್ಧದ ಪಂದ್ಯದಲ್ಲಿ ಮರಳಿ ನಾಯಕತ್ವದ ಇನ್ನಿಂಗ್ಸ್‌ ಆರಂಭಿಸಿದರು. 2017ರಲ್ಲಿ ಅವರು ಪುಣೆ ತಂಡವನ್ನು ಮುನ್ನಡೆಸಿ ಫೈನಲ್ ತಲುಪಿಸಿದ್ದರು. 2018ರಲ್ಲಿ ರಾಜಸ್ಥಾನ್‌ ರಾಯಲ್ಸ್ ನಿಷೇಧ ಮುಕ್ತಗೊಂಡು ಐಪಿಎಲ್ಲ್ಗೆ ಮರಳಿದಾಗಲೂ ಸ್ಮಿತ್‌ ಅವರನ್ನೇ ನಾಯಕನನ್ನಾಗಿ ನೇಮಿಸಿತ್ತು. ಆದರೆ ಚೆಂಡು ವಿರೂಪ ಪ್ರಕರಣದಲ್ಲಿ ಒಂದು ವರ್ಷ ನಿಷೇಧಕ್ಕೊಳಗಾದ್ದರಿಂದ ಕೂಡಲೇ ಸ್ಮಿತ್‌ ಅವರನ್ನು ಕೆಳಗಿಳಿಸಿ ರಹಾನೆಗೆ ನಾಯಕತ್ವ ವಹಿಸಲಾಯಿತು. 2015ರಲ್ಲೂ ಸ್ಮಿತ್‌ ರಾಜಸ್ಥಾನ್‌ ತಂಡವನ್ನು ಮುನ್ನಡೆಸಿದ್ದರು.

ಮತ್ತೆ ರಾಜ ಸ್ಥಾನ್‌ ನಾಯಕತ್ವ ಲಭಿಸಿದ್ದಕ್ಕೆ ಖುಷಿಯಾಗಿದೆ. ತಂಡವನ್ನು ಮುಂದಿನ ಸುತ್ತಿಗೆ ಕೊಂಡೊಯ್ಯು ವುದು ನಮ್ಮ ಗುರಿ. ಇದಕ್ಕೆ ಎಲ್ಲರೂ ಸೇರಿ ಪ್ರಯತ್ನಿಸ ಬೇಕಿದೆ. -ಸ್ಟೀವನ್‌ ಸ್ಮಿತ್‌

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.