ಆರ್‌ಸಿಬಿ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ

ಹೈದರಾಬಾದ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ

Team Udayavani, May 4, 2019, 6:00 AM IST

RCN-IPL-2019

ಬೆಂಗಳೂರು: ರಾಯಲ್‌ ಚಾಲೆಂಜರ್ ಬೆಂಗಳೂರು ತಂಡಕ್ಕೆ ಕೂಟದ ಕೊನೆಯ ಲೀಗ್‌ ಪಂದ್ಯಕ್ಕೆ ತವರಿನಲ್ಲಿ ವೇದಿಕೆ ಸಜ್ಜಾಗಿದೆ. ಶನಿವಾರದ ದ್ವಿತೀಯ ಪಂದ್ಯದಲ್ಲಿ ಆರ್‌ಸಿಬಿ-ಸನ್‌ರೈಸರ್ ಹೈದರಾಬಾದ್‌ 2ನೇ ಬಾರಿಗೆ ಮುಖಾಮುಖೀಯಾಗಲಿವೆ.

ಈಗಾಗಲೇ ಪ್ಲೇ ಆಫ್ನಿಂದ ಹೊರಬಿದ್ದಿರುವ ಆರ್‌ಸಿಬಿಗೆ ಇದು ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯ. ಹೈದರಾಬಾದ್‌ ವಿರುದ್ಧ ಮೊದಲ ಮುಖಾಮುಖೀಯಲ್ಲಿ 118 ರನ್‌ಗಳ ಹೀನಾಯ ಸೋಲನುಭವಿಸಿದ ಆರ್‌ಸಿಬಿಗೆ ಇದು ಸೇಡಿನ ಪಂದ್ಯವಾಗಿದೆ. ಆದರೆ ಅಂಕ ಪಟ್ಟಿಯಲ್ಲಿ 12 ಅಂಕದೊಂದಿಗೆ 4ನೇ ಸ್ಥಾನದಲ್ಲಿರುವ ಹೈದರಾಬಾದ್‌ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಗುರುವಾರದ ಮುಂಬೈ ವಿರುದ್ಧ ಸೂಪರ್‌ ಓವರ್‌ನಲ್ಲಿ ಸೋತ ಹೈದಾರಾಬಾದ್‌ಗೆ ಪ್ಲೇ ಆಫ್ಗೇರಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಹೈದರಾಬಾದ್‌ಗೆ ಪಾಂಡೆ ಬಲ
ವಾರ್ನರ್‌ ನಿರ್ಗಮನದ ಬಳಿಕ ತಂಡಕ್ಕೆ ಆಸರೆಯಾಗಿರುವುದು ಕನ್ನಡಿಗ ಮನೀಷ್‌ ಪಾಂಡೆ. ಕಳೆದ 2 ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತ ಬಂದಿರುವುದರಿಂದ ತಂಡ ಇವರ ಬ್ಯಾಟಿಂಗ್‌ ಮೇಲೆ ಹೆಚ್ಚಿನ ನಂಬಿಕೆ ಇರಿಸಿದೆ. ನಾಯಕ ಕೇನ್‌ ವಿಲಿಯಮ್ಸನ್‌ ಪ್ರತೀ ಪಂದ್ಯದಲ್ಲಿಯೂ ವಿಫ‌ಲರಾಗುತ್ತಿರುವುದೂ ದೊಡ್ಡ ತಲೆನೋವಾಗಿದೆ. ಮಧ್ಯಮ ಕ್ರಮಾಂಕದಲ್ಲಿ ವಿಜಯ್‌ ಶಂಕರ್‌, ಅಭಿಷೇಕ್‌ ಶರ್ಮ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ಆರಂಭಿಕ ಆಟಗಾರ ಮಾರ್ಟಿನ್‌ ಗಪ್ಟಿಲ್‌ ಸ್ಫೋಟಕ ಬ್ಯಾಟಿಂಗ್‌ ನೀಡಿದರೆ ತಂಡ ಬೃಹತ್‌ ಮೊತ್ತ ಪೇರಿಸುವಲ್ಲಿ ಯಾವುದೇ ಅನುಮಾನವಿಲ್ಲ.

ಬೌಲಿಂಗ್‌ ಬಲಿಷ್ಠ
ಹೈದರಾಬಾದ್‌ ಬೌಲಿಂಗ್‌ ಘಾತುಕವಾಗಿದೆ. ಮೊಹಮ್ಮದ್‌ ನಬಿ, ರಶೀದ್‌ ಖಾನ್‌, ಖಲೀಲ್‌ ಅಹ್ಮದ್‌, ಭುವನೇಶ್ವರ್‌ ಕುಮಾರ್‌, ಬಾಸಿಲ್‌ ಥಂಪಿ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ.

ಆರ್‌ಸಿಬಿಗೆ ಬೌಲಿಂಗ್‌ ಚಿಂತೆ
ಈ ಬಾರಿಯ ಐಪಿಎಲ್‌ನಲ್ಲಿ ತೀರಾ ಕಳಪೆ ಪ್ರದರ್ಶನದಿಂದ ಪ್ಲೇ ಆಫ್ನಿಂದ ಹೊರಬಿದ್ದಿರುವ ಆರ್‌ಸಿಬಿಗೆ ಬೌಲಿಂಗ್‌ನದ್ದೇ ಚಿಂತೆ. ಯಾವ ಬೌಲರ್‌ ಕೂಡ ಸ್ಥಿರ ಪ್ರದರ್ಶನ ನೀಡುತ್ತಿಲ್ಲ. ಉಮೇಶ್‌ ಯಾದವ್‌, ಚಾಹಲ್‌, ಸೈನಿ ಹೀಗೆ ಪ್ರತಿಯೊಬ್ಬರೂ ದುಬಾರಿಯಾಗುತ್ತಿದ್ದು ಯಾರ ಮೇಲೆಯೂ ತಂಡ ನಂಬಿಕೆ ಇಡುವ ಸ್ಥಿತಿಯಲ್ಲಿಲ್ಲ. ಬ್ಯಾಟಿಂಗ್‌ನಲ್ಲಿ ನಾಯಕ ವಿರಾಟ್‌ ಕೊಹ್ಲಿ, ಎಬಿ ಡಿ’ವಿಲಿಯರ್, ಪಾರ್ಥಿವ್‌ ಪಟೇಲ್‌ ಉತ್ತಮ ಫಾರ್ಮ್ನಲ್ಲಿದ್ದಾರೆ.

ಕೂಟದ ಕೊನೆಯ ಪಂದ್ಯವನ್ನು ಗೆದ್ದು ಅಭಿಮಾನಿಗಳಿಗೆ ಕೊಂಚ ಖುಷಿ ನೀಡುವುದು ಮತ್ತು ಕೂಟವನ್ನು ಗೆಲುವಿನೊಂದಿಗೆ ಮುಗಿಸುವ ಯೋಜನೆ ಕೊಹ್ಲಿ ಪಡೆಯದ್ದಾಗಿದೆ.

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.