ಚಿನ್ನಸ್ವಾಮಿಯಲ್ಲಿ ಅಂಪಾಯರ್‌ ಲಾಂಗ್‌ ಪುಂಡಾಟ!


Team Udayavani, May 8, 2019, 6:24 AM IST

chinnaswamy

ಬೆಂಗಳೂರು: ಕ್ರಿಕೆಟಿಗರು ಅಶಿಸ್ತು ಪ್ರದರ್ಶಿಸುವುದು ಮಾಮೂಲಿ ಸುದ್ದಿ. ಅಂಪಾಯರ್‌ಗಳು ಅಶಿಸ್ತು ಪ್ರದರ್ಶಿಸುವುದನ್ನು ಕೇಳಿದ್ದೀರಾ? ಅದೂ ಸಿಟ್ಟಿನಲ್ಲಿ ಬಾಗಿಲು ಒಡೆದು ಹಾಕುವುದು? ಶನಿವಾರ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು-ಸನ್‌ರೈಸರ್ಸ್‌ ಹೈದರಾಬಾದ್‌ ನಡುವಿನ ಪಂದ್ಯದಲ್ಲಿ ಇಂತಹ ದೊಂದು ಘಟನೆ ಸಂಭವಿಸಿದೆ. ಅಂಪಾಯರ್‌ ನೈಜೆಲ್‌ ಲಾಂಗ್‌ ತಪ್ಪಾಗಿ ನೋಬಾಲ್‌ ತೀರ್ಪು ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಬೆಂಗಳೂರು ನಾಯಕ ಕೊಹ್ಲಿ, ಲಾಂಗ್‌ ಜತೆಗೆ ವಾಗ್ವಾದ ನಡೆಸಿದ್ದರು. ಇದೇ ಸಿಟ್ಟಿನಲ್ಲಿದ್ದ ಲಾಂಗ್‌ ಪಂದ್ಯ ಮುಗಿದ ಮೇಲೆ, ಅಂಪಾಯರ್‌ ಕೊಠಡಿಯ ಬಾಗಿಲಿಗೇ ಒದ್ದು ಒಡೆದು ಹಾಕಿದ್ದಾರೆ!

ಒಟ್ಟಾರೆ ನಡೆದಿದ್ದೇನು?
ಹೈದರಾಬಾದ್‌ ಇನ್ನಿಂಗ್ಸ್‌ ವೇಳೆ ಬೆಂಗಳೂರು ವೇಗಿ ಉಮೇಶ್‌ ಯಾದವ್‌ ಬೌಲಿಂಗ್‌ ಮಾಡುತ್ತಿದ್ದರು. ಆಗ ಇಂಗ್ಲೆಂಡ್‌ ಅಂಪಾಯರ್‌ ನೈಜೆಲ್‌ ಲಾಂಗ್‌ ನೋಬಾಲ್‌ ತೀರ್ಪು ನೀಡಿದರು. ಟಿವಿ ಪರಿಶೀಲನೆಯಲ್ಲಿ ಅದು ನೋಬಾಲ್‌ ಅಲ್ಲ ಎಂದು ಕಂಡು ಬಂದಿದೆ. ಇದರಿಂದ ಸಿಟ್ಟಾದ ಬೆಂಗಳೂರು ನಾಯಕ ಕೊಹ್ಲಿ, ಅಂಪಾಯರ್‌ ಜತೆಗೆ ಜೋರಾಗಿ ಮಾತಿನ ಚಕಮಕಿ ನಡೆಸಿದ್ದರು. ಆ ಸಿಟ್ಟನ್ನು ಪಂದ್ಯ ಮುಗಿದ ಮೇಲೆ ಚಿನ್ನಸ್ವಾಮಿ ಮೈದಾನದಲ್ಲಿದ್ದ ಅಂಪಾಯರ್‌ ಕೊಠಡಿಯ ಬಾಗಿಲಿಗೆ ಒದ್ದು ತೀರಿಸಿಕೊಂಡಿದ್ದಾರೆ.

ಕೆಎಸ್‌ಸಿಎ ಆಗ್ರಹ
ಘಟನೆಯ ಅನಂತರ ಕೆಎಸ್‌ಸಿಎ ಸಿಬಂದಿ ಜತೆಗೂ ಬಿರುಸಿನ ವಾಗ್ವಾದ ನಡೆಸಿದ ಲಾಂಗ್‌, 5,000 ರೂ. ದಂಡ ತೆತ್ತಿದ್ದಾರೆ. ಈ ವಿಷಯವನ್ನು ರೆಫ್ರಿ ಗಮನಕ್ಕೆ ತಂದಿರುವ ಕೆಎಸ್‌ಸಿಎ ಕಾರ್ಯದರ್ಶಿ ಸುಧಾಕರ್‌ ರಾವ್‌, ಅಶಿಸ್ತು ತೋರಿದ ಆಟಗಾರರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾದರೆ, ಅಂಪಾಯರ್‌ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಬಿಸಿಸಿಐ ಕಠಿನ ಕ್ರಮ?
ಲಾಂಗ್‌ ಅಶಿಸ್ತು ಪ್ರದರ್ಶಿಸಿರುವುದರಿಂದ ಅವರನ್ನು ಅಂತಿಮ ಪಂದ್ಯದಿಂದ ತೀರ್ಪುಗಾರರ ಪಟ್ಟಿಯಿಂದ ಹೊರಹಾಕುವ ಚಿಂತನೆಯಲ್ಲಿ ಬಿಸಿಸಿಐಯಿದೆ. ಇನ್ನೊಂದು ಕಡೆ ಒಂದೇ ಒಂದು ಘಟನೆಯಿಟ್ಟುಕೊಂಡು ಇಷ್ಟು ಕಠಿನ ಕ್ರಮ ತೆಗೆದು ಕೊಳ್ಳಬೇಕೆ ಎಂಬ ಗೊಂದಲವೂ ಇದೆ.

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.