ಎಂಥಹ ಅಭಿಮಾನಿಗಳು ಇರ್ತಾರೆ ನೋಡಿ! ಮುಂಬೈ ಅಭಿಮಾನಿಯ ಧೋನಿ ಪ್ರೀತಿ

ವೈರಲ್ ಆಯಿತು ಧೋನಿ ಅಭಿಮಾನಿಯ ವಿಡಿಯೋ

Team Udayavani, Apr 4, 2019, 4:18 PM IST

fan

ಮುಂಬೈ: ಐಪಿಎಲ್ ಶುರುವಾದ ಮೇಲೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಸಮಸ್ಯೆ ಶುರುವಾಗಿದೆ. ತಮ್ಮ ನೆಚ್ಚಿನ ಆಟಗಾರರು ಬೇರೆ ಬೇರೆ ತಂಡದಲ್ಲಿ ಇರುವುದರಿಂದ ಯಾವ ತಂಡವನ್ನು ಸಪೋರ್ಟ್ ಮಾಡಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ. ಅಂತಹದೇ ಒಂದು ತಮಾಷೆ ಘಟನೆ ಬುಧವಾರ ಚೆನ್ನೈ- ಮುಂಬೈ ನಡುವಣ ಪಂದ್ಯದಲ್ಲಿ ನಡೆದಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಬುಧವಾರ ಮುಂಬೈ ನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿತ್ತು. ಕ್ರೀಡಾಂಗಣ ಕಿಕ್ಕಿರಿದು ನೆರೆದಿತ್ತು. ಸಹಜವಾಗೆ ತವರು ತಂಡ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಹೆಚ್ಚೇ ಇದ್ದರು. ಅವರ ನಡುವೆ ಒಬ್ಬ ಇದ್ದ ಧೋನಿ ಭಕ್ತ. ಇವನೀಗ ತನ್ನ ಅಭಿಮಾನದಿಂದಲೇ ದೇಶದಲ್ಲಿ ಮನೆಮಾತಾಗಿದ್ದಾನೆ.

ಬುಧವಾರದ ಪಂದ್ಯ ನೋಡಲು ಬಂದಿದ್ದ ಆ ಅಭಿಮಾನಿ ಮುಂಬೈ ನಿವಾಸಿ ಇರಬೇಕು. ಹಾಗಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಬೆಂಬಲಿಸುತ್ತಿದ್ದ. ಮ್ಯಾಚ್ ನೋಡಲು ಬರುವಾಗ ಮುಂಬೈ ಇಂಡಿಯನ್ಸ್ ಜೆರ್ಸಿ ಹಾಕಿಕೊಂಡೇ ಬಂದಿದ್ದ. ಆದರೆ ಕುತೂಹಲದ ವಿಷಯವೇನೆಂದರೆ ಆತ ಮಹೇಂದ್ರ ಸಿಂಗ್ ಧೋನಿ ಅಭಿಮಾನಿ ಕೂಡಾ. ಆದರೆ ಧೋನಿ ಆಡುತ್ತಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ. ಅದೂ ಮುಂಬೈ ವಿರುದ್ಧ. ಈ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಯಾವ ತಂಡವನ್ನು ಸಪೋರ್ಟ್ ಮಾಡಬೇಕೆಂಬ ಧರ್ಮಸಂಕಟಕ್ಕೆ ಒಳಗಾದ ಆತ ಒಂದು ಉತ್ತಮ ಉಪಾಯ ಮಾಡಿದ್ದ.

ಮೊದಲೇ ಹೇಳಿದಂತೆ ಆತ ಮುಂಬೈ ಇಂಡಿಯನ್ಸ್ ತಂಡದ ಜೆರ್ಸಿಯನ್ನು ಹಾಕಿಕೊಂಡು ಬಂದಿದ್ದ. ಮುಂಬೈ ತಂಡಕ್ಕೆ ಬೆಂಬಲ ಮಾಡುತ್ತಿದ್ದ. ಆದರೆ ಯಾವಾಗ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಗೆ ಇಳಿದರೋ ಆಗ ತಾನು ಮೊದಲೇ ತಂದಿದ್ದ ಧೋನಿ ಹೆಸರಿನ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿಯನ್ನು ಮುಂಬೈ ಜೆರ್ಸಿಯ ಮೇಲೆಯೇ ಹಾಕಿ ಧೋನಿಗೆ ಬೆಂಬಲ ಸೂಚಿಸಿದರು. ಆದರೆ ಧೋನಿ ಔಟಾದ ನಂತರ ಧೋನಿ ಹೆಸರಿನ ಜೆರ್ಸಿಯನ್ನು ತೆಗೆದು ಮತ್ತೆ ಮುಂಬೈ ತಂಡಕ್ಕೆ ಬೆಂಬಲ ಕೊಟ್ಟರು. ಸದ್ಯ ಈ ಅಭಿಮಾನಿ ಮಹಾಶಯನ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.