ಮುಂಬೈ ನೆರವಿಗೆ ಯಾದವ್‌, ಪಾಂಡ್ಯ


Team Udayavani, Apr 4, 2019, 6:00 AM IST

c-11

ಮುಂಬಯಿ: ತವರಿನ “ವಾಂಖೇಡೆ ಸ್ಟೇಡಿಯಂ’ನಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ ಮುಂಬೈ ಇಂಡಿಯನ್ಸ್‌, ಬುಧವಾರದ ಐಪಿಎಲ್‌ ಹಣಾಹಣಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 5 ವಿಕೆಟಿಗೆ 170 ರನ್‌ ಗಳಿಸಿ ಸವಾಲೊಡ್ಡಿದೆ.

ಸೂರ್ಯಕುಮಾರ್‌ ಯಾದವ್‌ ಮತ್ತು ಕೃಣಾಲ್‌ ಪಾಂಡ್ಯ ಅವರ ಜವಾಬ್ದಾರಿಯುತ ಆಟ ಮುಂಬೈ ನೆರವಿಗೆ ಬಂತು. ಯಾದವ್‌ 43 ಎಸೆತಗಳಿಂದ ಸರ್ವಾಧಿಕ 59 ರನ್‌ ಬಾರಿಸಿದರು. ಇದರಲ್ಲಿ 8 ಬೌಂಡರಿ, ಒಂದು ಸಿಕ್ಸರ್‌ ಸೇರಿತ್ತು. ಕೃಣಾಲ್‌ 32 ಎಸೆತ ಎದುರಿಸಿ 42 ರನ್‌ ಹೊಡೆದರು. ಸಿಡಿಸಿದ್ದು 5 ಬೌಂಡರಿ ಹಾಗೂ ಒಂದು ಸಿಕ್ಸರ್‌.

ಡೆತ್‌ ಓವರ್‌ಗಳಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ಕೈರನ್‌ ಪೊಲಾರ್ಡ್‌ ಸಿಡಿದು ನಿಂತಿದ್ದರಿಂದ ಮುಂಬೈ ಮೊತ್ತ 170ಕ್ಕೆ ಏರಿತು. ಇವರಿಬ್ಬರು ಸೇರಿಕೊಂಡು ಕೊನೆಯ 2 ಓವರ್‌ಗಳಲ್ಲಿ 45 ರನ್‌ ಸೂರೆಗೈದರು. ಹಾರ್ದಿಕ್‌ 8 ಎಸೆತಗಳಿಂದ 25 ರನ್‌ (1 ಬೌಂಡರಿ, 3 ಸಿಕ್ಸರ್‌) ಮತ್ತು ಪೊಲಾರ್ಡ್‌ 7 ಎಸೆತ ಎದುರಿಸಿ 17 ರನ್‌ ಬಾರಿಸಿದರು (2 ಸಿಕ್ಸರ್‌). ಬ್ರಾವೊ ಪಾಲಾದ ಅಂತಿಮ ಓವರಿನಲ್ಲಿ 29 ರನ್‌ ಸೋರಿ ಹೋಯಿತು!

ಕ್ವಿಂಟನ್‌ ಡಿ ಕಾಕ್‌ (4) ಮತ್ತು ನಾಯಕ ರೋಹಿತ್‌ ಶರ್ಮ (13) ಅವರಿಂದ ಮುಂಬೈ ನಿಧಾನ ಗತಿಯ ಆರಂಭ ಪಡೆಯಿತು. ಇಬ್ಬರೂ ಕುಂಟುತ್ತ ಆಡಿದ ಪರಿಣಾಮ 8ನೇ ಓವರ್‌ ಆರಂಭಕ್ಕೆ 2 ವಿಕೆಟಿಗೆ ಕೇವಲ 45 ರನ್‌ ಮಾಡಿತು. 9ನೇ ಓವರಿನಲ್ಲಿ 50 ರನ್‌ ಆದಾಗ ಯುವರಾಜ್‌ ಸಿಂಗ್‌ (4) ವಿಕೆಟ್‌ ಬಿತ್ತು.

ಈ ಹಂತದಲ್ಲಿ ಜತೆಗೂಡಿದ ಸೂರ್ಯಕುಮಾರ್‌ ಯಾದವ್‌ ಮತ್ತು ಆಲ್‌ರೌಂಡರ್‌ ಕೃಣಾಲ್‌ ಪಾಂಡ್ಯ ಚೆನ್ನೈ ದಾಳಿಯನ್ನು ಎಚ್ಚರಿಕೆಯಿಂದ ನಿಭಾಯಿಸತೊಡಗಿದರು. ಮುಂಬೈ ಸರದಿಯನ್ನೂ ಬೆಳೆಸತೊಡಗಿದರು. ಸ್ಕೋರ್‌ 112ರ ತನಕ ಏರಿತು. ಆಗ ಕೃಣಾಲ್‌ ವಿಕೆಟ್‌ ಹಾರಿಸಿದ ಮೋಹಿತ್‌ ಶರ್ಮ ಚೆನ್ನೈಗೆ ದೊಡ್ಡ ಬ್ರೇಕ್‌ ಒದಗಿಸಿದರು. ಚೆನ್ನೈ ಪರ ಶಾದೂìಲ್‌ ಠಾಕೂರ್‌ ಹೊರತುಪಡಿಸಿ ಉಳಿದವರೆಲ್ಲ ತಲಾ ಒಂದೊಂದು ವಿಕೆಟ್‌ ಕಿತ್ತರು.

ಸ್ಕೋರ್‌ಪಟ್ಟಿ
ಮುಂಬೈ ಇಂಡಿಯನ್ಸ್‌
ಕ್ವಿಂಟನ್‌ ಡಿ ಕಾಕ್‌ ಸಿ ಜಾಧವ್‌ ಬಿ ಚಹರ್‌ 4
ರೋಹಿತ್‌ ಶರ್ಮ ಸಿ ಧೋನಿ ಬಿ ಜಡೇಜ 13
ಸೂರ್ಯಕುಮಾರ್‌ ಯಾದವ್‌ ಸಿ ಜಡೇಜ ಬಿ ಬ್ರಾವೊ 59
ಯುವರಾಜ್‌ ಸಿಂಗ್‌ ಸಿ ರಾಯುಡು ಬಿ ತಾಹಿರ್‌ 4
ಕೃಣಾಲ್‌ ಪಾಂಡ್ಯ ಸಿ ಜಡೇಜ ಬಿ ಮೋಹಿತ್‌ 42
ಹಾರ್ದಿಕ್‌ ಪಾಂಡ್ಯ ಔಟಾಗದೆ 25
ಕೈರನ್‌ ಪೊಲಾರ್ಡ್‌ ಔಟಾಗದೆ 17

ಇತರ 6
ಒಟ್ಟು (20 ಓವರ್‌ಗಳಲ್ಲಿ 5 ವಿಕೆಟಿಗೆ) 170
ವಿಕೆಟ್‌ ಪತನ: 1-8, 2-45, 3-50, 4-112, 5-125.

ಬೌಲಿಂಗ್‌:
ದೀಪಕ್‌ ಚಹರ್‌ 3-0-21-1
ಶಾರ್ದುಲ್‌ ಠಾಕೂರ್‌ 4-0-37-0
ಮೋಹಿತ್‌ ಶರ್ಮ 3-0-27-1
ಇಮ್ರಾನ್‌ ತಾಹಿರ್‌ 4-0-25-1
ರವೀಂದ್ರ ಜಡೇಜ 2-0-10-1
ಡ್ವೇನ್‌ ಬ್ರಾವೊ 4-0-49-1

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.