ಆರ್‌ಸಿಬಿ-ಮುಂಬೈ: ಸೋತವರ ಸೆಣಸಾಟ

ತವರಿನಂಗಳದಲ್ಲಿ ಗೆದ್ದು ಬಂದೀತೇ ಕೊಹ್ಲಿ ಪಡೆ? ;ಮುಂಬೈಗೆ ಮಾಲಿಂಗ, ಬುಮ್ರಾ ಬಲ

Team Udayavani, Mar 28, 2019, 6:00 AM IST

ERCCb

ಬೆಂಗಳೂರು: ಐಪಿಎಲ್‌ನ ನತದೃಷ್ಟ ತಂಡ ರಾಯಲ್‌ ಚಾಲೆಂಜರ್ ಬೆಂಗಳೂರು ಗುರುವಾರ ತವರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ 3 ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ಆಡಲಿಳಿಯಲಿದೆ. ಇದು ಪ್ರಸಕ್ತ ಋತುವಿನಲ್ಲಿ ಎರಡೂ ತಂಡಗಳಿಗೆ ಎರಡನೇ ಪಂದ್ಯ. ಇತ್ತಂಡಗಳು ಆರಂಭಿಕ ಪಂದ್ಯದಲ್ಲಿ ಸೋಲನುಭವಿಸಿವೆ. ಹೀಗಾಗಿ ಒಂದು ತಂಡಕ್ಕೆ ಇಲ್ಲಿ ಗೆಲುವಿನ ಖಾತೆ ತೆರೆಯುವ ಅವಕಾಶವಿದೆ. ಇದು ಯಾರಿಗೆ ಎಂಬುದು ಕುತೂಹಲದ ಸಂಗತಿ.

12ನೇ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಕೊಹ್ಲಿ ತಂಡ ಚೆನ್ನೈಯಲ್ಲಿ ಧೋನಿ ಪಡೆ ವಿರುದ್ಧ ಜುಜುಬಿ 70 ರನ್ನಿಗೆ ಕುಸಿದು ಹೀನಾಯ ಸೋಲನುಭವಿಸಿತ್ತು. ಇನ್ನೊಂದೆಡೆ ತವರಿನ “ವಾಂಖೇಡೆ ಸ್ಟೇಡಿಯಂ’ನಲ್ಲೇ ಮುಂಬೈ ತಂಡ ರಿಷಬ್‌ ಪಂತ್‌ ನೀಡಿದ ಪಂಥಾಹ್ವಾನ ಸ್ವೀಕರಿಸಲು ವಿಫ‌ಲವಾಗಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಶರಣಾಗಿತ್ತು. ಎರಡೂ ತಂಡಗಳ ನಾಯಕರಾದ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮ ಆರಂಭಿಕ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ್ದರು. ಇವರಿಬ್ಬರು ಸಿಡಿಯುವು ದನ್ನು ಅಭಿಮಾನಿಗಳು ಕಾಯುತ್ತಿದ್ದಾರೆ. ತಂಡದ ಜಯದಲ್ಲಿ ಇವರ ಸ್ಫೋಟಕ ಬ್ಯಾಟಿಂಗ್‌ ನಿರ್ಣಾಯಕ ಪಾತ್ರ ವಹಿಸುವುದೇ ಇದಕ್ಕೆ ಕಾರಣ.

ಲಸಿತ ಮಾಲಿಂಗ ಆಗಮನ
ಮುಂಬೈ ತಂಡ ಎರಡು ಕಾರಣಗಳಿಂದಾಗಿ ತುಂಬು ಆತ್ಮವಿಶ್ವಾಸದಲ್ಲಿದೆ. ಒಂದು, ಶ್ರೀಲಂಕಾದ ಪ್ರಧಾನ ವೇಗಿ ಲಸಿತ ಮಾಲಿಂಗ ಈ ಪಂದ್ಯಕ್ಕೆ ಲಭ್ಯವಾಗುತ್ತಿರುವುದು. ಎರಡು, ಮೊದಲ ಪಂದ್ಯದ ವೇಳೆ ಭುಜದ ನೋವಿಗೊಳಗಾಗಿದ್ದ ಜಸ್‌ಪ್ರೀತ್‌ ಬುಮ್ರಾ ಸಂಪೂರ್ಣವಾಗಿ ಗುಣಮುಖವಾಗಿರುವುದು. ಹೀಗಾಗಿ ಮುಂಬೈ ವೇಗದ ಬೌಲಿಂಗ್‌ ವಿಭಾಗ ಹೆಚ್ಚು ಬಲಿಷ್ಠವಾಗಿ ಕಾಣುತ್ತಿದೆ. ಚಿನ್ನಸ್ವಾಮಿ ಟ್ರ್ಯಾಕ್‌ ಸೀಮ್‌ ಬೌಲಿಂಗಿಗೆ ನೆರವು ನೀಡಿದ್ದೇ ಆದರೆ ಆರ್‌ಸಿಬಿಗೆ ಇದು ಭಾರೀ ಸವಾಲಾಗಿ ಕಾಡಬಹುದು. ತೃತೀಯ ವೇಗಿ ಮಿಚೆಲ್‌ ಮೆಕ್ಲೆನಗನ್‌ ಕೂಡ ಲಯದಲ್ಲಿದ್ದಾರೆ.

ಲಸಿತ ಮಾಲಿಂಗ ಮೊದಲ 6 ಪಂದ್ಯ ಗಳಿಂದ ಹೊರಗುಳಿಯುವುದಾಗಿ ಸುದ್ದಿಯಾ ಗಿತ್ತು. ಆದರೆ ದೇಶಿ ಏಕದಿನ ಕ್ರಿಕೆಟ್‌ “ಸೂಪರ್‌ ಪ್ರೊವಿನ್ಶಿಯಲ್‌’ ಸರಣಿ ಯಲ್ಲಿ ಆಡಬೇಕಿದ್ದ ಮಾಲಿಂಗ ಅವರಿಗೆ ಶ್ರೀಲಂಕಾ ಕ್ರಿಕೆಟ್‌ ಮಂಡಳಿ ವಿನಾಯಿತಿ ನೀಡಿದ್ದು, ಮಂಗಳವಾರವೇ ಬಿಡುಗಡೆ ಮಾಡಿದೆ. ಈ ಸರಣಿ ಎ. 4ರಿಂದ 11ರ ತನಕ ನಡೆಯಲಿದೆ.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ 37ರ ಅನುಭವಿ ಯುವರಾಜ್‌ ಸಿಂಗ್‌ ಗತಕಾಲದ ಬ್ಯಾಟಿಂಗ್‌ ವೈಭವವನ್ನು ಪ್ರದರ್ಶಿಸಿ ಸುದ್ದಿಯಾಗಿದ್ದರು. ಅವರ “ಕ್ಲಾಸಿಕ್‌ ಹಾಫ್ ಸೆಂಚುರಿ’ ಮುಂಬೈ ಸರದಿಯ ಆಕರ್ಷಣೆಯಾಗಿತ್ತು. ಯುವಿ ಆರ್‌ಸಿಬಿ ವಿರುದ್ಧವೂ ಅಪಾಯಕಾರಿಯಾಗಿ ಪರಿಣಮಿಸಬಹುದು. ಪಾಂಡ್ಯ ಬ್ರದರ್ಗೂ ಅನ್ವಯಿಸುವ ಮಾತಿದು.

ಸ್ಫೋಟಕ ಬ್ಯಾಟಿಂಗ್‌ ಸರದಿ
ಆರ್‌ಸಿಬಿ ಸ್ಫೋಟಕ ಬ್ಯಾಟಿಂಗ್‌ ಸರದಿಯನ್ನು ಹೊಂದಿರುವ ತಂಡ. ಕೊಹ್ಲಿ, ಎಬಿಡಿ, ಹೆಟ್‌ಮೈರ್‌ ಅವರ ಸಾಮರ್ಥ್ಯವನ್ನು ಪ್ರತ್ಯೇಕವಾಗಿ ಬಣ್ಣಿಸಬೇಕಿಲ್ಲ. ಪಾರ್ಥಿವ್‌ ಪಟೇಲ್‌, ಮೊಯಿನ್‌ ಅಲಿ ಕೂಡ ಬೀಸು ಹೊಡೆತಗಳಿಗೆ ಮುಂದಾಗುವವರೇ. ಆದರೆ ಇವರೆಲ್ಲರೂ ಸಾಮೂಹಿಕ ವೈಫ‌ಲ್ಯ ಅನುಭವಿಸಬಲ್ಲರು ಎಂಬುದಕ್ಕೆ ಚೆನ್ನೈ ಎದುರಿನ ಪಂದ್ಯ ಸಾಕ್ಷಿಯಾಗಿದೆ. ಇದು ತವರಲ್ಲೂ ಪುನರಾವರ್ತನೆ ಆಗಬಾರದು. ಇವರಲ್ಲಿ ಒಬ್ಬರು ಸಿಡಿದರೂ ತಂಡ ಬೃಹತ್‌ ಮೊತ್ತ ಪೇರಿಸುವುದರಲ್ಲಿ ಅನುಮಾನವಿಲ್ಲ. ಆರ್‌ಸಿಬಿ ಬೌಲಿಂಗ್‌ ವಿಭಾಗ ಲೆಗ್‌ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ ಅವರನ್ನು ಹೆಚ್ಚು ನೆಚ್ಚಿಕೊಂಡಿದೆ. ಉಮೇಶ್‌ ಯಾದವ್‌, ನವದೀಪ್‌ ಸೈನಿ, ಮೊಯಿನ್‌ ಅಲಿ, ಮೊಹಮ್ಮದ್‌ ಸಿರಾಜ್‌, ಟಿಮ್‌ ಸೌಥಿ ಉಳಿದ ಪ್ರಮುಖ ಬೌಲರ್‌ಗಳು.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.