ಕೆಕೆಆರ್‌ ಎಚ್ಚರಿಕೆ ಆಟ; ರಾಯಲ್ಸ್‌ಗೆ 175 ರನ್‌ ಗುರಿ


Team Udayavani, Sep 30, 2020, 9:34 PM IST

ಕೆಕೆಆರ್‌ ಎಚ್ಚರಿಕೆ ಆಟ; ರಾಯಲ್ಸ್‌ಗೆ 175 ರನ್‌ ಗುರಿ

ಅಬುಧಾಬಿ: ರಾಜಸ್ಥಾನ್‌ ರಾಯಲ್ಸ್‌ ದಾಳಿಯನ್ನು ಬಹಳ ಎಚ್ಚರಿಕೆಯಿಂದ ನಿಭಾಯಿಸಿದ ಕೋಲ್ಕತಾ ನೈಟ್‌ರೈಡರ್ ಬುಧವಾರದ ಐಪಿಎಲ್‌ ಮುಖಾಮುಖಿಯಲ್ಲಿ 6 ವಿಕೆಟಿಗೆ 174 ರನ್‌ ಪೇರಿಸಿ ಸವಾಲೊಡ್ಡಿದೆ.

ಕೋಲ್ಕತಾ ಬ್ಯಾಟಿಂಗ್‌ ಅಬ್ಬರದಿಂದೇನೂ ಕೂಡಿರಲಿಲ್ಲ. ಯಾರಿಂದಲೂ ಅರ್ಧ ಶತಕ ದಾಖಲಾಗಲಿಲ್ಲ. 47 ರನ್‌ ಮಾಡಿದ ಶುಭಮನ್‌ ಗಿಲ್‌ ಅವರದೇ ಹೆಚ್ಚಿನ ಗಳಿಕೆ. ಇಯಾನ್‌ ಮಾರ್ಗನ್‌ ಅಜೇಯ 34 ರನ್‌ ಮಾಡಿದರು.

ಜೋಫ್ರ ಆರ್ಚರ್‌ ಮೊದಲ ಓವರಿನಲ್ಲಿ ಕೇವಲ ಒಂದು ರನ್‌ ನೀಡಿ ಕಡಿವಾಣ ಹಾಕುವ ಸೂಚನೆ ನೀಡಿದರು. ಸುನೀಲ್‌ ನಾರಾಯಣ್‌ ಹಿಂದಿನ ಚಾರ್ಮ್ ತೋರುವಲ್ಲಿ ವಿಫ‌ಲರಾದರು. 5ನೇ ಓವರ್‌ನಲ್ಲಿ ಇವರ ವಿಕೆಟ್‌ ಬೀಳುವಾಗ ಕೆಕೆಆರ್‌ ಕೇವಲ 36 ರನ್‌ ಮಾಡಿತ್ತು. ನಾರಾಯಣ್‌ ಗಳಿಕೆ 14 ಎಸೆತಗಳಿಂದ 15 ರನ್‌.

ಅನಂತರ ಬಂದ ನಿತೀಶ್‌ ರಾಣಾ ಕೂಡ ಪ್ರತಾಪ ತೋರಿಸಲಿಲ್ಲ. 17 ಎಸೆತಗಳಿಂದ 22 ರನ್‌ (2 ಬೌಂಡರಿ, 1 ಸಿಕ್ಸರ್‌) ಮಾಡಿದ ಅವರನ್ನು ತೆವಾತಿಯಾ ತಮ್ಮ ಮೊದಲ ಓವರಿನಲ್ಲೇ ವಾಪಸ್‌ ಕಳುಹಿಸಿದರು. ಆದರೆ ಕಳೆದ ಪಂದ್ಯದ ಹೀರೋ ಶುಭಮನ್‌ ಗಿಲ್‌ ಇನ್ನೊಂದು ಬದಿಯಲ್ಲಿ ಕ್ರೀಸ್‌ ಆಕ್ರಮಿಸಿಕೊಂಡಿದ್ದರು.

ಗಿಲ್‌ ಆಟ 12ನೇ ಓವರ್‌ ತನಕ ಸಾಗಿತು. ಆಗ ದ್ವಿತೀಯ ಸ್ಪೆಲ್‌ ದಾಳಿಗಿಳಿದ ಆರ್ಚರ್‌, ಕೆಕೆಆರ್‌ ಆರಂಭಿಕನ ರಿಟರ್ನ್ ಕ್ಯಾಚ್‌ ಪಡೆಯುವಲ್ಲಿ ಯಶಸ್ವಿಯಾದರು. 34 ಎಸೆತ ಎದುರಿಸಿದ ಗಿಲ್‌ 5 ಬೌಂಡರಿ, ಒಂದು ಸಿಕ್ಸರ್‌ ನೆರವಿನಿಂದ 47 ರನ್‌ ಹೊಡೆದರು. ಪವರ್‌ ಪ್ಲೇಯಲ್ಲಿ ಒಂದಕ್ಕೆ 42 ರನ್‌ ಮಾಡಿದ ಕೋಲ್ಕತಾ, 13ನೇ ಓವರಿನಲ್ಲಿ ನೂರರ ಗಡಿ ಮುಟ್ಟಿತು.

ಇದನ್ನೂ ಓದಿ: ಕೈಕೊಟ್ಟ ಬ್ಯಾಟಿಂಗ್ : ನೈಟ್ ರೈಡರ್ಸ್ ವಿರುದ್ಧ 37 ರನ್ನಿನಿಂದ ಸೋತ ರಾಜಸ್ಥಾನ ರಾಯಲ್ಸ್

ಆರ್ಚರ್‌ ಆಕ್ರಮಣ
ಆರ್ಚರ್‌ 2 ಓವರ್‌ಗಳಲ್ಲಿ ಕೇವಲ 2 ರನ್‌ ನೀಡಿ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದರು. 3ನೇ ಓವರಿನಲ್ಲಿ ದಿನೇಶ್‌ ಕಾರ್ತಿಕ್‌ ವಿಕೆಟ್‌ ಹಾರಿಸುವ ಮೂಲಕ ಇದನ್ನು ನಿಜಗೊಳಿಸಿದರು. ಕೆಕೆಆರ್‌ ಕಪ್ತಾನನ ಗಳಿಕೆ ಕೇವಲ ಒಂದು ರನ್‌. ಈ ವರೆಗೆ ಸಿಡಿಯಲು ವಿಫ‌ಲರಾಗಿದ್ದ ಆ್ಯಂಡ್ರೆ ರಸೆಲ್‌ ಇಲ್ಲಿ ತಮ್ಮ ಮೊದಲ ಸಿಕ್ಸರ್‌ ಎತ್ತುವಲ್ಲಿ ಯಶಸ್ವಿಯಾದರು. ಆದರೆ ಕ್ರೀಸ್‌ ಆಕ್ರಮಿಸಿಕೊಳ್ಳಲು ಸಾಧ್ಯವಾಗಲಿಲ್ಲ. 4ನೇ ಸಿಕ್ಸರ್‌ ಬಾರಿಸುವ ಯತ್ನದಲ್ಲಿ ಬೌಂಡರಿ ಲೈನ್‌ನಲ್ಲಿದ್ದ ಉನಾದ್ಕತ್‌ಗೆ ಕ್ಯಾಚ್‌ ನೀಡಿ 24 ರನ್ನಿಗೆ ಆಟ ಮುಗಿಸಿದರು (14 ಎಸೆತ, 3 ಸಿಕ್ಸರ್‌). ಈ ವಿಕೆಟ್‌ ರಜಪೂತ್‌ ಬುಟ್ಟಿಗೆ ಬಿತ್ತು. 6ನೇ ಕ್ರಮಾಂಕದಲ್ಲಿ ಆಡಲು ಬಂದ ಮಾರ್ಗನ್‌ 23 ಎಸೆತಗಳಿಂದ 34 ರನ್‌ ಮಾಡಿ ಔಟಾಗದೆ ಉಳಿದರು (1 ಬೌಂಡರಿ, 2 ಸಿಕ್ಸರ್‌).

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.