ಐಪಿಎಲ್ ಕಮೆಂಟ್ರಿ ತಂಡದಲ್ಲಿ ಮಾಂಜ್ರೇಕರ್ ಇಲ್ಲ
Team Udayavani, Sep 4, 2020, 9:40 PM IST
ಸಂಜಯ್ ಮಾಂಜ್ರೇಕರ್
ಹೊಸದಿಲ್ಲಿ: ಈ ಬಾರಿಯ ಐಪಿಎಲ್ ಪಂದ್ಯಾವಳಿಗಾಗಿ ಬಿಸಿಸಿಐ 7 ಮಂದಿ ಭಾರತೀಯ ವೀಕ್ಷಕ ವಿವರಣಕಾರರ ಯಾದಿಯನ್ನು ಪ್ರಕಟಿಸಿದೆ. ಆದರೆ ಇದರಲ್ಲಿ ಸಂಜಯ್ ಮಾಂಜ್ರೇಕರ್ ಹೆಸರು ಕಾಣೆಯಾಗಿದೆ!
7 ಮಂದಿ ವೀಕ್ಷಕ ವಿವರಣಕಾರರೆಂದರೆ ಸುನೀಲ್ ಗಾವಸ್ಕರ್, ಎಲ್. ಶಿವರಾಮಕೃಷ್ಣನ್, ಮುರಳಿ ಕಾರ್ತಿಕ್, ದೀಪ್ ದಾಸ್ಗುಪ್ತ, ರೋಹನ್ ಗಾವಸ್ಕರ್, ಹರ್ಷ ಬೋಗ್ಲೆ ಮತ್ತು ಅಂಜುಮ್ ಚೋಪ್ರಾ. ಇವರನ್ನು 3 ತಂಡಗಳಾಗಿ ವಿಭಜಿಸಲಾಗಿದೆ. ಇವರು ಅಬುಧಾಬಿ, ಶಾರ್ಜಾ ಮತ್ತು ದುಬಾೖ ಪಂದ್ಯಗಳಲ್ಲಿ ಪ್ರತ್ಯೇಕವಾಗಿ ಕರ್ತವ್ಯ ನಿಭಾಯಿಸಲಿದ್ದಾರೆ.
ಸಂಜಯ್ ಮಾಂಜ್ರೇಕರ್ 2008ರ ಮೊದಲ ಐಪಿಎಲ್ನಿಂದಲೇ ಕಮೆಂಟ್ರಿ ತಂಡದ ಖಾಯಂ ಸದಸ್ಯರಾಗಿದ್ದರು. ಕಳೆದ ಮಾರ್ಚ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ವೇಳೆ ಮಾಂಜ್ರೆàಕರ್ ಅವರನ್ನು ಬಿಸಿಸಿಐ ಕಮೆಂಟ್ರಿ ಟೀಮ್ನಿಂದ ಕೈಬಿಟ್ಟಿತ್ತು. ಸಾಮಾಜಿಕ ಜಾಲತಾಣದಲ್ಲಿ ರವೀಂದ್ರ ಜಡೇಜ ಅವರನ್ನು ನಿಂದಿಸಿ ಪೋಸ್ಟ್ ಮಾಡಿದ್ದೇ ಇದಕ್ಕೆ ಕಾರಣ.
ಮನವಿ ತಿರಸ್ಕೃತ
ಒಂದು ತಿಂಗಳ ಹಿಂದೆ ಬಿಸಿಸಿಐಗೆ ಪತ್ರ ಬರೆದಿದ್ದ ಸಂಜಯ್ ಮಾಂಜ್ರೇಕರ್, ತನ್ನನ್ನು ಐಪಿಎಲ್ ಕಮೆಂಟ್ರಿ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದರು. ಆದರೆ ಬಿಸಿಸಿಐ ಇದನ್ನು ತಳ್ಳಿಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ