ಪಂತ್‌-ಅಯ್ಯರ್‌ ಅರ್ಧ ಶತಕದ ಆಟ: ಮುಂಬೈಗೆ 157 ರನ್‌ ಟಾರ್ಗೆಟ್‌

ಡೆಲ್ಲಿಗೆ ಮತ್ತೆ ಮೊದಲ ಓವರ್‌ ಆಘಾತ

Team Udayavani, Nov 10, 2020, 9:29 PM IST

IPL

ದುಬಾೖ: ಐಪಿಎಲ್‌ ಇತಿಹಾಸದಲ್ಲಿ ಇದೇ ಮೊದಲ ಸಲ ಫೈನಲ್‌ ಆಡಲಿಳಿದ ಡೆಲ್ಲಿ ಕ್ಯಾಪಿಟಲ್ಸ್‌ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡದ ಘಾತಕ ಬೌಲಿಂಗ್‌ ಆಕ್ರಮಣವನ್ನು ತಡೆದು ನಿಂತು 7 ವಿಕೆಟಿಗೆ 156 ರನ್‌ ಗಳಿಸುವಲ್ಲಿ ಯಶಸ್ವಿಯಾಗಿದೆ.

ಟ್ರೆಂಟ್‌ ಬೌಲ್ಟ್ ಅವರ ಘಾತಕ ಬೌಲಿಂಗ್‌, ಮೊದಲ ಎಸೆತದಲ್ಲೇ ಉರುಳಿದ ಸ್ಟೋಯಿನಿಸ್‌, 3 ವಿಕೆಟ್‌ಗಳ ಕ್ಷಿಪ್ರ ಪತನ, ಅಯ್ಯರ್‌-ಪಂತ್‌ ಜೋಡಿಯ ಹೋರಾಟ ಹಾಗೂ ಅರ್ಧ ಶತಕದ ಆಟ ಮೊದಲರ್ಧದ ಹೈಲೈಟ್‌ ಆಗಿತ್ತು. ಪಂತ್‌ 56 ರನ್‌ ಹೊಡೆದರೆ, ಭರ್ತಿ 50 ಎಸೆತ ನಿಭಾಯಿಸಿದ ಶ್ರೇಯಸ್‌ ಅಯ್ಯರ್‌ 65 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಅವರ ಈ ಕಪ್ತಾನನ ಆಟದಲ್ಲಿ 6 ಬೌಂಡರಿ, 2 ಸಿಕ್ಸರ್‌ ಸೇರಿತ್ತು.

ಬೌಲ್ಟ್ ಭಯಾನಕ ದಾಳಿ
ಟ್ರೆಂಟ್‌ ಬೌಲ್ಟ್ ಪಂದ್ಯದ ಮೊದಲ ಎಸೆತದಲ್ಲೇ ಮಾರ್ಕಸ್‌ ಸ್ಟೋಯಿನಿಸ್‌ ವಿಕೆಟ್‌ ಕಿತ್ತು ಡೆಲ್ಲಿಗೆ ಶಾಕ್‌ ಕೊಟ್ಟರು. ಡೆಲ್ಲಿಗೆ ಅರ್ಧ ಬ್ಯಾಟಿಂಗ್‌ ಶಕ್ತಿ ಉಡುಗಿ ಹೋದ ಅನುಭವವಾಯಿತು. ಈ ಆಘಾತದೊಂದಿಗೆ ಡೆಲ್ಲಿ ಪ್ರಸಕ್ತ ಐಪಿಎಲ್‌ನ ಮೊದಲ ಓವರಿನಲ್ಲಿ ಸರ್ವಾಧಿಕ 10 ವಿಕೆಟ್‌ ಉದುರಿಸಿಕೊಂಡ ಸಂಕಟಕ್ಕೆ ಸಿಲುಕಿತು. ಇದರಲ್ಲಿ 5 ವಿಕೆಟ್‌ ಮುಂಬೈ ವಿರುದ್ಧವೇ ಉರುಳಿತ್ತು.

ಈ ಪರಾಕ್ರಮದೊಂದಿಗೆ 2020ರ ಐಪಿಎಲ್‌ನ ಮೊದಲ ಓವರಿನಲ್ಲೇ ಟ್ರೆಂಟ್‌ ಬೌಲ್ಟ್ ಕಿತ್ತ ವಿಕೆಟ್‌ಗಳ ಸಂಖ್ಯೆ 8ಕ್ಕೆ ಏರಿತು. ಇದು ಐಪಿಎಲ್‌ ದಾಖಲೆಯಾಗಿದೆ. 2016ರಲ್ಲಿ ಭುವನೇಶ್ವರ್‌ ಕುಮಾರ್‌ 6 ವಿಕೆಟ್‌ ಉರುಳಿಸಿದ್ದು ಹಿಂದಿನ ದಾಖಲೆ. ಬೌಲ್ಟ್ 15 ಸಲ ಪಂದ್ಯದ ಮೊದಲ ಓವರ್‌ ಎಸೆದಿದ್ದರು.

ಮೊದಲ ಕ್ವಾಲಿಫೈಯರ್‌ ಪಂದ್ಯದ ಮೊದಲ ಓವರಿನಲ್ಲೇ ಡೆಲ್ಲಿಗೆ ಅವಳಿ ಆಘಾತ ನೀಡಿದ್ದ ಬೌಲ್ಟ್ ಅದೇ ಆವೇಶದಲ್ಲಿದ್ದರು. ದ್ವಿತೀಯ ಓವರಿನಲ್ಲಿ ಅವರು ಅಜಿಂಕ್ಯ ರಹಾನೆ ವಿಕೆಟ್‌ ಕಿತ್ತು ಇದನ್ನು ಸಾಬೀತುಪಡಿಸಿದರು. ರಹಾನೆ ಹೊಡೆದದ್ದು ಎರಡೇ ರನ್‌. 16 ರನ್ನಿಗೆ ಡೆಲ್ಲಿಯ 2 ವಿಕೆಟ್‌ ಬಿತ್ತು. ಇದರೊಂದಿಗೆ ಬೌಲ್ಟ್ ಈ ಕೂಟದ ಪವರ್‌ ಪ್ಲೇ ಅವಧಿಯಲ್ಲಿ 36 ಓವರ್‌ಗಳಿಂದ ಸರ್ವಾಧಿಕ 16 ವಿಕೆಟ್‌ ಕಿತ್ತು ಮಿಚೆಲ್‌ ಜಾನ್ಸನ್‌ ಅವರ 2013ರ ದಾಖಲೆಯನ್ನು ಸರಿದೂಗಿಸಿದರು.

4ನೇ ಓವರ್‌ ಮೂಲಕ ದಾಳಿಗಿಳಿದ ಜಯಂತ್‌ ಯಾದವ್‌ ಕೂಡ ಡೆಲ್ಲಿಗೆ ಕಂಟಕವಾಗಿ ಕಾಡಿದರು. ಶಿಖರ್‌ ಧವನ್‌ ಅವರ ಬಿಗ್‌ ವಿಕೆಟನ್ನು ಬುಟ್ಟಿಗೆ ಹಾಕಿಕೊಂಡರು. ಸ್ವೀಪ್‌ ಹೊಡೆತಕ್ಕೆ ಮುಂದಾದ ಧವನ್‌ (15) ಕ್ಲೀನ್‌ಬೌಲ್ಡ್‌ ಆಗಿ ನಿರ್ಗಮಿಸಿದರು. ಪವರ್‌ ಪ್ಲೇ ಅವಧಿಯಲ್ಲಿ ಡೆಲ್ಲಿ ಸ್ಕೋರ್‌ 3ಕ್ಕೆ 43 ರನ್‌ ಆಗಿತ್ತು. ಆಗಲೇ ಮುಂಬೈ ಫೀಲ್ಡರ್ 3 ಕ್ಯಾಚ್‌ಗಳನ್ನು ನೆಲಕ್ಕೆ ಚೆಲ್ಲಿಯಾಗಿತ್ತು.

ಅಯ್ಯರ್‌-ಪಂತ್‌ ಆಸರೆ
ಕುಸಿದ ಡೆಲ್ಲಿ ಸರದಿಗೆ ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ಕೀಪರ್‌ ರಿಷಭ್‌ ಪಂತ್‌ ಸೇರಿ ಆಸರೆ ಒದಗಿಸಿದರು. ನಿಧಾನವಾಗಿ ಸ್ಕೋರ್‌ ಗತಿ ಏರುತ್ತ ಹೋಯಿತು. 10 ಓವರ್‌ ಮುಕ್ತಾಯಕ್ಕೆ ಡೆಲ್ಲಿ 75 ರನ್‌ ಪೇರಿಸಿ ಹೋರಾಟದ ಸೂಚನೆ ನೀಡಿತು. ಅಯ್ಯರ್‌ ಜವಾಬ್ದಾರಿಯುತ ಆಟವಾಡಿದರೆ, ಪಂತ್‌ ನೈಜ ಸ್ಫೋಟಕ ರೂಪ ತೋರತೊಡಗಿದರು.

ಸರಿಯಾದ ಹೊತ್ತಿನಲ್ಲಿ ಕ್ರೀಸ್‌ ಆಕ್ರಮಿಸಿಕೊಂಡ ಪಂತ್‌ 12ನೇ ಅರ್ಧ ಶತಕೊಂದಿಗೆ ಮೆರೆದರು. 38 ಎಸೆತಗಳಿಂದ 56 ರನ್‌ ಸಿಡಿಸಿದರು (4 ಬೌಂಡರಿ, 2 ಸಿಕ್ಸರ್‌). ಅಯ್ಯರ್‌ ಜತೆ 4ನೇ ವಿಕೆಟಿಗೆ 69 ಎಸೆತಗಳಿಂದ 96 ರನ್‌ ಒಟ್ಟುಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. ಕೋಲ್ಟರ್‌ ನೈಲ್‌ ಈ ಜತೆಯಾಟವನ್ನು ಬೇರ್ಪಡಿಸಿದರು. ಅನಂತರ ಬಂದ ಹೆಟ್‌ಮೈರ್‌ ಬರೀ 5 ರನ್ನಿಗೆ ಆಟ ಮುಗಿಸಿದರು. ಬೌಲ್ಟ್ ಬುಟ್ಟಿಗೆ 3ನೇ ವಿಕೆಟ್‌ ಬಿತ್ತು. ಅಕ್ಷರ್‌ ಪಟೇಲ್‌ 9 ರನ್‌ ಮಾಡಿ ವಾಪಸಾದರು. ಮುಂಬೈ ಪರ ಬೌಲ್ಟ್ 3, ಕೋಲ್ಟರ್‌ ನೈಲ್‌ 2 ವಿಕೆಟ್‌ ಕಿತ್ತರು. ಆದರೆ ಬುಮ್ರಾ ವಿಫ‌ಲರಾದರು.

ಒಂದೇ ಬದಲಾವಣೆ
ಫೈನಲ್‌ ಪಂದ್ಯಕ್ಕಾಗಿ ಮುಂಬೈ ತಂಡದಲ್ಲಿ ಒಂದು ಬದಲಾವಣೆ ಕಂಡು ಬಂತು. ರಾಹುಲ್‌ ಚಹರ್‌ ಬದಲು ಜಯಂತ್‌ ಯಾದವ್‌ ಆಡಲಿಳಿದರು. ಆದರೆ ಡೆಲ್ಲಿ ತನ್ನ ತಂಡದಲ್ಲಿ ಯಾವುದೇ ಪರಿವರ್ತನೆ ಮಾಡಿಕೊಳ್ಳಲಿಲ್ಲ. ಹೈದರಾಬಾದ್‌ ವಿರುದ್ಧ ದ್ವಿತೀಯ ಕ್ವಾಲಿಫೈಯರ್‌ ಪಂದ್ಯದಲ್ಲಿ ಜಯಿಸಿದ ತಂಡವನ್ನೇ ನೆಚ್ಚಿಕೊಂಡಿತು.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.