IPL 2020: ಪ್ಲೇಯಿಂಗ್ 11 ತಂಡದ ಆಟಗಾರನಿಗೆ ಸೋಂಕು ಇದ್ದರೆ ಬದಲಿ ಆಟಗಾರನಿಗೆ ಅವಕಾಶ

ನವಂಬರ್ 8ರ ಬದಲು 10ಕ್ಕೆ ಫೈನಲ್‌ ; ಒಂದು ತಂಡದಲ್ಲಿ 24 ಮಂದಿಗೆ ಮಾತ್ರ ಅವಕಾಶ ; ವಿವೋ ಸ್ಪಾನ್ಸರ್‌ ಮುಂದುವರಿಕೆ

Team Udayavani, Aug 2, 2020, 9:39 PM IST

IPL 2020: ಪ್ಲೇಯಿಂಗ್ 11 ತಂಡದ ಆಟಗಾರನಿಗೆ ಸೋಂಕು ಇದ್ದರೆ ಬದಲಿ ಆಟಗಾರನಿಗೆ ಅವಕಾಶ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಯುಎಇಯಲ್ಲಿ ನಡೆಯಲಿರುವ 2020ನೇ ಐಪಿಎಲ್‌ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಮಹತ್ವದ ಆಡಳಿತ ಮಂಡಳಿ ಸಭೆ ರವಿವಾರ ಏರ್ಪಟ್ಟಿತು.

ಕೆಲವು ಮಹತ್ವದ ಸಂಗತಿಗಳ ಕುರಿತು ಸಭೆಯಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ಇದರಲ್ಲಿ ಮುಖ್ಯವಾದುದು ಬದಲಿ ಆಟಗಾರನ ಸೇರ್ಪಡೆ. ಕೋವಿಡ್ 19 ಸೊಂಕಿನಿಂದಾಗಿ ಈ ಪಂದ್ಯಾವಳಿ ಭಾರತದಾಚೆ ಸಾಗುತ್ತಿದೆ.

ಅಕಸ್ಮಾತ್‌ ಪಂದ್ಯದ ವೇಳೆ ಆ ದಿನದ ಪ್ಲೇಯಿಂಗ್ 11 ತಂಡದಲ್ಲಿರುವ ಆಟಗಾರನಲ್ಲಿ ಕೋವಿಡ್ 19 ಪಾಸಿಟಿವ್‌ ದೃಢಪಟ್ಟಲ್ಲಿ ಬದಲಿ ಆಟಗಾರನನ್ನು ಆಡಿಸುವ ನಿರ್ಧಾರಕ್ಕೆ ಬರಲಾಯಿತು.

ಚೀನ ಮೊಬೈಲ್‌ ಕಂಪೆನಿ ‘ವಿವೋ’ ಟೈಟಲ್‌ ಸ್ಪಾನ್ಸರ್‌ಶಿಪ್‌ ಬಗ್ಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾದರೂ ಇದನ್ನು ಮುಂದುವರಿಸಲು ನಿರ್ಧರಿಸಿದ್ದು ಸಭೆಯ ದಿಟ್ಟ ನಿರ್ಧಾರಗಳಲ್ಲಿ ಒಂದಾಗಿದೆ. ಜತೆಗೆ ಉಳಿದ ಪ್ರಾಯೋಜಕರನ್ನೂ ಉಳಿಸಿಕೊಳ್ಳಲಾಗಿದೆ.

ಇದೇ ವೇಳೆ ಕೂಟದ ಫೈನಲ್‌ ಪಂದ್ಯವನ್ನು ಎರಡು ದಿನ ಮುಂದೂಡಲು ನಿರ್ಧರಿಸಲಾಯಿತು. ಮೊದಲು ಪ್ರಕಟಿಸಿದಂತೆ ಸೆ. 19ರಿಂದ ಆರಂಭಗೊಳ್ಳಲಿರುವ ಐಪಿಎಲ್‌, ನ. 8ರಂದು ಮುಗಿಯುವುದೆಂದಿತ್ತು. ಈಗ ಫೈನಲ್‌ ಪಂದ್ಯವನ್ನು ನ. 10ರಂದು ನಡೆಸಲು ತೀರ್ಮಾನಿಸಲಾಗಿದೆ. ಐಪಿಎಲ್‌ ಇತಿಹಾಸದಲ್ಲಿ ರವಿವಾರದಂದು ಫೈನಲ್‌ ತಪ್ಪಿದ ಅಪರೂಪದ ನಿದರ್ಶನ ಇದಾಗಿದೆ.

ತಂಡವೊಂದರ ಆಟಗಾರರ ಸಂಖ್ಯೆಯನ್ನು 24ಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಆಟಗಾರರೆಲ್ಲ ಪ್ರತ್ಯೇಕ ಖಾಸಗಿ ವಿಮಾನಗಳಲ್ಲಿ ಆ. 26ರ ಒಳಗೆ ಯುಎಇ ತಲುಪಬೇಕಿದೆ.

ವೀಕ್ಷಕರಿಗೆ ಅವಕಾಶ?
ಪಂದ್ಯಗಳಿಗೆ ವೀಕ್ಷಕರಿಗೆ ಅವಕಾಶ ಕಲ್ಪಿಸುವುದು ಯುಎಇ ಕ್ರಿಕೆಟ್‌ ಮಂಡಳಿಗೆ ಬಿಟ್ಟ ವಿಚಾರವಾದರೂ, ಕೂಟದ ಆರಂಭದಲ್ಲಿ ಪ್ರೇಕ್ಷಕರಿಗೆ ನಿರ್ಬಂಧ ಮುಂದುವರಿಯುವ ಸಾಧ್ಯತೆಯಿದ್ದು, ಒಂದು ಹಂತದ ಬಳಿಕ ಸೀಮಿತ ವೀಕ್ಷಕರಿಗೆ ಅವಕಾಶವನ್ನು ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.