ವಾರ್ನರ್, ಬೈರ್‌ಸ್ಟೋವ್ ಭರ್ಜರಿ ಬ್ಯಾಟಿಂಗ್: ಪಂಜಾಬ್ ಗೆ 202 ಗೆಲುವಿನ ಗುರಿ


Team Udayavani, Oct 8, 2020, 9:47 PM IST

IPLವಾರ್ನರ್, ಬೈರ್‌ಸ್ಟೋವ್ ಭರ್ಜರಿ ಬ್ಯಾಟಿಂಗ್: ಪಂಜಾಬ್ ಗೆ 202 ಗೆಲುವಿನ ಗುರಿ

ದುಬೈ: ಐಪಿಎಲ್ ನ 13ನೇ ಆವೃತ್ತಿಯ 22ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಕಾದಾಟದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ 202 ರನ್ ಗೆಲುವಿನ ಗುರಿ ನೀಡಿದೆ.

ಇಂತಹದೊಂದು ಬೃಹತ್‌ ಆಟದಲ್ಲಿ ಹೈದರಾಬಾದ್‌ ಆರಂಭಿಕ ಜಾನಿ ಬೇರ್‌ಸ್ಟೊ, ನಾಯಕ ಡೇವಿಡ್‌ ವಾರ್ನರ್‌ ಪಾತ್ರ ಮಹತ್ವದ್ದು. ಅವರು ಮೊದಲ ವಿಕೆಟ್‌ಗೆ 160 ರನ್‌ ಜೊತೆಯಾಟವಾಡಿದರು. ಆ ಹಂತದಲ್ಲಿ ಅವರಿಬ್ಬರ ಅಬ್ಬರ ನೋಡಿದಾಗ ಹೈದರಾಬಾದ್‌ ಕನಿಷ್ಠ 230 ರನ್‌ ಗಳಿಸಲಿದೆ ಎಂದು ಎಲ್ಲರೂ ಊಹಿಸಿದ್ದರು. ಆದರೆ 160 ರನ್‌ಗೆ ಮೊದಲನೆಯವರಾಗಿ ವಾರ್ನರ್‌ ಔಟಾದರು. ಅಲ್ಲಿಂದ ಪಟಪಟನೆ ಕುಸಿದ ಅದು ಕೇವಲ 201 ರನ್‌ಗಳಿಗೆ ಸೀಮಿತವಾಯಿತು.

ಹೈದರಾಬಾದ್‌ ಪರ ಜಾನಿ ಬೇರ್‌ಸ್ಟೊ ಅದ್ಭುತ ಆಟವಾಡಿದರು. ಅವರು 55 ಎಸೆತಗಳಲ್ಲಿ 7 ಬೌಂಡರಿ, 6 ಸಿಕ್ಸರ್‌ ನೆರವಿನಿಂದ 97 ರನ್‌ ಚಚ್ಚಿದರು. 3 ರನ್‌ಗಳಿಂದ ಶತಕ ತಪ್ಪಿಸಿಕೊಂಡು ನಿರಾಶೆಗೊಳಗಾದರು. ಮತ್ತೂಂದು ಕಡೆ ನಾಯಕ ವಾರ್ನರ್‌ ಇವರಿಗೆ ನೆರವು ನೀಡುತ್ತ ಹೋದರು. ಅವರು 40 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್‌ ಸಮೇತ 52 ರನ್‌ ಗಳಿಸಿದರು. ಇವರ ನಂತರ ಯಾವುದೇ ಆಟಗಾರ ಈ ಮಟ್ಟಕ್ಕೆ ಸಿಡಿಯಲಿಲ್ಲ.

ತಿರುಗಿಬಿದ್ದ ಪಂಜಾಬ್‌ ಬೌಲರ್‌ಗಳು: 16ನೇ ಓವರ್‌ ಮೊದಲನೆ ಎಸೆತದಲ್ಲಿ ವಾರ್ನರ್‌ ವಿಕೆಟ್‌ ಕಿತ್ತ ಪಂಜಾಬ್‌ ಬೌಲರ್‌ಗಳು ಅನಂತರ ಹಿಂತಿರುಗಿ ನೋಡಲಿಲ್ಲ. ಬೆನ್ನಲ್ಲೇ ಬೇರ್‌ಸ್ಟೊರನ್ನು ಹೊರದಬ್ಬಿದರು. ಅದರ ಬೆನ್ನಲ್ಲೇ ಮನೀಷ್‌ ಪಾಂಡೆ ಔಟಾದರು. ಅಂದರೆ ಕೇವಲ 1 ರನ್‌ ಅಂತರದಲ್ಲಿ ಮೂರು ವಿಕೆಟ್‌ ಪತನ. ಇಲ್ಲಿ ಅದ್ಭುತ ಬೌಲಿಂಗ್‌ ಮಾಡಿದ್ದು ಸ್ಪಿನ್ನರ್‌ ರವಿ ಬಿಶ್ನೋಯಿ. ಅವರು 29 ರನ್‌ ನೀಡಿ 3 ವಿಕೆಟ್‌ ಪಡೆದರು. ಕಡೆಯಲ್ಲಿ ಇವರಿಗೆ ಅಷ್ಟೇ ಸೂಕ್ತ ಬೆಂಬಲ ನೀಡಿದ ವೇಗಿ ಅರ್ಶದೀಪ್‌ ಸಿಂಗ್‌ 33 ರನ್‌ ನೀಡಿ 2 ವಿಕೆಟ್‌ ಪಡೆದರು. ಶಮಿಗೆ 1 ವಿಕೆಟ್‌ ಸಿಕ್ಕಿತು.

 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.