ಅವಕಾಶಕ್ಕಿಂತ ತಂಡದ ಗೆಲುವು ಮುಖ್ಯ: ತಾಹಿರ್
Team Udayavani, Oct 15, 2020, 7:05 PM IST
ಶಾರ್ಜಾ: ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಳೆದ ಆವೃತ್ತಿಯಲ್ಲಿ ಯಶಸ್ವಿಯಾಗಿದ್ದ ಇಮ್ರಾನ್ ತಾಹಿರ್ ಪ್ರಸಕ್ತ ಆವೃತ್ತಿಯಲ್ಲಿ ಇನ್ನೂ ಆಡುವ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಆದರೆ ಪಂದ್ಯದ ವೇಳೆ ನೀರಿನ ಬಾಟಲ್ಗಳೊಂದಿಗೆ ಅಂಗಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ದ. ಆಫ್ರಿಕಾದ ಹಿರಿಯ ಲೆಗ್ ಸ್ಪಿನ್ನರ್ 2019ರ ಐಪಿಎಲ್ ಕೂಟದಲ್ಲಿ 26 ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ಗೆದ್ದಿದ್ದರು. ಆದರೆ ಈ ಬಾರಿಯ ಟೂರ್ನಿಯಲ್ಲಿ ಅವರು ಇನ್ನೂ ಒಂದೂ ಪಂದ್ಯವಾಡಿಲ್ಲ. ಬದಲಿಗೆ ಸಹ ಆಟಗಾರರಿಗೆ ನೀರನ್ನು ನೀಡುವ ಕಾಯಕದಲ್ಲಿ ತೊಡಗಿದ್ದಾರೆ. ಇದರಿಂದ ನನಗೆ ಯಾವುದೇ ಮುಜುಗರ ಅಥವಾ ಅವಮಾನವಿಲ್ಲ ಎಂಬುದನ್ನು ತಾಹಿರ್ ಹೇಳಿಕೊಂಡಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತು ಬರೆದಿರುವ ಅವರು “ಈ ಹಿಂದೆ ನಾನು ಅಂಗಳದಲ್ಲಿ ಆಡುವಾಗ ನನಗೆ ಅದೆಷ್ಟೋ ಆಟಗಾರರು ನೀರನ್ನು ತಂದುಕೊಟ್ಟಿದ್ದಾರೆ. ಇದೀಗ ಅರ್ಹ ಆಟಗಾರರು ಅಂಗಳದಲ್ಲಿದ್ದಾರೆ. ಅವರಿಗೆ ನೀರು ನೀಡಿ ಬೆಂಬಲಿಸುವುದು ನನ್ನ ಕರ್ತವ್ಯ. ನಾನು ಆಡುವುದು ಅಥವಾ ಆಡದೇ ಇರುವುದು ಮುಖ್ಯವಲ್ಲ, ಪಂದ್ಯ ಗೆಲ್ಲುವುದು ಮುಖ್ಯ. ಆಡುವ ಅವಕಾಶ ಪಡೆದರೆ ಖಂಡಿತಾ ನನ್ನ ಕಡೆಯಿಂದ ಉತ್ತಮ ಪ್ರದರ್ಶನ ತಂಡಕ್ಕೆ ನೀಡುತ್ತೇನೆ ನನಗೆ ತಂಡ ಮುಖ್ಯ’ ಎಂದು ತಾಹಿರ್ ಹೇಳಿದ್ದಾರೆ.
ತಾಹಿರ್ ಅವರ ಈ ಟ್ವೀಟ್ಗೆ ಪ್ರತಿಕ್ರಿಯಿಸಿದ ಕ್ರಿಕೆಟ್ ಅಭಿಮಾನಿಗಳು ಸಿಎಸ್ಕೆ ಹಿರಿಯ ಸ್ಪಿನ್ನರ್ ನಿಜವಾದ ಕ್ರೀಡಾಪಟು ಎಂದು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ