ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!


Team Udayavani, Sep 24, 2020, 11:02 PM IST

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

ದುಬಾಯಿ: ಇಂದಿನ IPL ಲೀಗ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ RCB ತಂಡವನ್ನು ಧೂಳೀಪಠ ಮಾಡಿದ್ದಾರೆ.

ಅಜೇಯ ಶತಕದಾಟದ ಮೂಲಕ ಮಿಂಚಿದ್ದ ರಾಹುಲ್ ತಮ್ಮ ತಂಡ 206 ರನ್ ಗಳ ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.

ಆದರೆ ಈ ಬೃಹತ್ ಮೊತ್ತವನ್ನು ಬೆನ್ನಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾದ RCB ದಾಂಢಿಗರು ಯಾವುದೇ ಹಂತದಲ್ಲಿ ಪ್ರತಿರೋಧ ತೋರದೆ ಕಿಂಗ್ಸ್ ಪಂಜಾಬ್ ಎದುರು 97 ರನ್ ಗಳ ಘೋರ ಪರಾಜಯ ಅನುಭವಿಸಿದರು.

ಪಂಜಾಬ್ ಬೌಲರ್ ಗಳ ಶಿಸ್ತಿನ ಬೌಲಿಂಗ್ ಗೆ ಮಕಾಡೆ ಮಲಗಿದ RCB ಬ್ಯಾಟಿಂಗ್ ಪಡೆ 17 ಓವರ್ ಗಳಲ್ಲಿ 109 ರನ್ ಗಳಿಗೆ ಆಲೌಟ್ ಆಗುವ ಮೂಲಕ 97 ರನ್ ಗಳ ಸೋಲು ಅನುಭವಿಸಿತು.

ಇದನ್ನೂ ಓದಿ: ಕನ್ನಡಿಗ ರಾಹುಲ್ ಅಜೇಯ ಸ್ಪೋಟಕ ಸೆಂಚುರಿ ; RCB ಗೆಲುವಿಗೆ 207 ಟಾರ್ಗೆಟ್

ರಾಹುಲ್ ಒಬ್ಬರೇ ಬಾರಿಸಿದಷ್ಟು ರನ್ RCB ತಂಡ ಬಾರಿಸಲಾಗದ್ದು ಚಾಲೆಂಜರ್ಸ್ ಬ್ಯಾಟಿಂಗ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿತ್ತು.

ಬೃಹತ್ ಮೊತ್ತವನ್ನು ಬೆನ್ನಟ್ಟಲಾರಂಭಿಸಿದ RCB ಬ್ಯಾಟ್ಸ್ ಮನ್ ಗಳು ಯಾವುದೇ ಹಂತದಲ್ಲೂ ಪ್ರತಿರೋಧವನ್ನು ತೋರಲೇ ಇಲ್ಲ. ಕಳೆದ ಪಂದ್ಯದ ಹೀರೋ ದೇವದತ್ತ ಪಡಿಕ್ಕಲ್ ಇಂದು ಎರಡೇ ಎಸೆತ ಎದುರಿಸಿ ಔಟಾದರು. ಅವರ ಕೊಡುಗೆ 01 ರನ್. ಬಳಿಕ ಜೋಸ್ ಫಿಲಿಪ್ (0), ವಿರಾಟ್ ಕೊಹ್ಲಿ (01) ಬೆನ್ನು ಬೆನ್ನಿಗೇ ಔಟಾದಾಗ RCB ಮೊತ್ತ 4 ರನ್!

ಈ ಹಂತದಲ್ಲಿ ಜೊತೆಯಾದ ಅರೋನ್ ಫಿಂಚ್ (20) ಹಾಗೂ ಸ್ಪೆಷಲಿಸ್ಟ್ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ (28) ತಂಡಕ್ಕೆ ಬಲ ತುಂಬುವ ಪ್ರಯತ್ನ ಮಾಡಿದರು. ಇವರಿಬ್ಬರ ಜೊತೆಯಾಟದಲ್ಲಿ 50 ರನ್ ಹರಿದು ಬಂತು.


ಆದರೆ, 8ನೇ ಓವರ್ ನಲ್ಲಿ ಫಿಂಚ್ ಔಟಾಗುವುದರೊಂದಿಗೆ RCB ರನ್ ಚೇಸಿಂಗ್ ಗೆ ಮತ್ತೆ ಗ್ರಹಣ ಹಿಡಿಯಿತು. ನಾಲ್ಕು ರನ್ ಗಳ ಅಂತರದಲ್ಲಿ ಎಬಿಡಿ ಸಹ ಔಟಾದರು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ (30) ಹಾಗೂ ಶಿವಂ ದುಬೆ (12) ಸ್ವಲ್ಪ ಪ್ರತಿರೋ‍ಧ ತೋರಿದರಾದರೂ ಬೆಟ್ಟದಷ್ಟಿದ್ದ ಗುರಿಯ ಮುಂದೆ ಇದು ಸಾಲದಾಯಿತು.

ಅಂತಿಮವಾಗಿ RCB 17 ಓವರ್ ಗಳಲ್ಲಿ 109 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಗಿ 97 ರನ್ ಗಳಿಂದ ಸೋಲೊಪ್ಪಿಕೊಂಡಿತು.

ಕಿಂಗ್ಸ್ ಪಂಜಾಬ್ ಪರ ರವಿ ಬಿಷ್ಣೊಯ್ ಮತ್ತು ಮುರುಗನ್ ಅಶ್ವಿನ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಸೆಲ್ಯೂಟ್ ಬೌಲರ್ ಶೆಲ್ಡನ್ ಕಾಟ್ರೆಲ್ 2 ವಿಕೆಟ್ ಪಡೆದರು. ಮಹಮ್ಮದ್ ಶಮಿ ಮತ್ತು ಮ್ಯಾಕ್ಸ್ ವೆಲ್ ತಲಾ 1 ವಿಕೆಟ್ ಉರುಳಿಸಿದರು.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.