IPL 2020 : ಪಂಜಾಬ್ VS ಕೋಲ್ಕತಾ; ರಾಹುಲ್ ಪಡೆಗೆ 150 ರನ್ ಗೆಲುವಿನ ಗುರಿ


Team Udayavani, Oct 26, 2020, 9:19 PM IST

IPL

ಶಾರ್ಜಾ: ಪಂಜಾಬ್‌ ವಿರುದ್ಧ ನಿರ್ಣಾಯಕ ಪಂದ್ಯವನ್ನಾಡುತ್ತಿರುವ ಕೋಲ್ಕತಾ ನೈಟ್‌ರೈಡರ್, ಆರಂಭಕಾರ ಶುಭಮನ್‌ ಗಿಲ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಸಾಹಸದಿಂದ ಹೀನಾಯ ಕುಸಿತದಿಂದ ಪಾರಾಗಿ 9 ವಿಕೆಟಿಗೆ 149 ರನ್‌ ಪೇರಿಸಿದೆ.

ಒಂದೆಡೆ ವಿಕೆಟ್‌ ಉರುಳುತ್ತಿದ್ದರೂ 19ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಗಿಲ್‌ ಬಹುಮೂಲ್ಯ 57 ರನ್‌ ಬಾರಿಸಿದರು. 45 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 4 ಸಿಕ್ಸರ್‌, 3 ಬೌಂಡರಿ ಸೇರಿತ್ತು. ಅವರಿಗೆ ನಾಯಕ ಇಯಾನ್‌ ಮಾರ್ಗನ್‌ ಉತ್ತಮ ಬೆಂಬಲ ನೀಡಿದರು.

ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಳ್ಳುವ ಪಂಜಾಬ್‌ ಕಪ್ತಾನ ಕೆ.ಎಲ್‌. ರಾಹುಲ್‌ ಅವರ ನಿರ್ಧಾರ ಮೊದಲ ಓವರಿನಿಂದಲೇ ಯಶಸ್ಸು ಪಡೆಯುತ್ತ ಹೋಯಿತು. ಗ್ಲೆನ್‌ ಮ್ಯಾಕ್ಸ್‌ವೆಲ್‌ 2ನೇ ಎಸೆತದಲ್ಲೇ ನಿತೀಶ್‌ ರಾಣಾ ವಿಕೆಟ್‌ ಹಾರಿಸಿದರು. ರಾಣಾ ಖಾತೆಯನ್ನೇ ತೆರೆದಿರಲಿಲ್ಲ.

ಮೊಹಮ್ಮದ್‌ ಶಮಿ ಪಂದ್ಯದ ದ್ವಿತೀಯ ಓವರಿನಲ್ಲಿ ಅವಳಿ ಆಘಾತವಿಕ್ಕಿದರು. 3 ಎಸೆತಗಳ ಅಂತರದಲ್ಲಿ ರಾಹುಲ್‌ ತ್ರಿಪಾಠಿ (7) ಮತ್ತು ದಿನೇಶ್‌ ಕಾರ್ತಿಕ್‌ (0) ಅವರಿಗೆ ಪೆವಿಲಿಯನ್‌ ಹಾದಿ ತೋರಿಸಿದರು. ಕೆಕೆಆರ್‌ 10 ರನ್ನಿಗೆ 3 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಟಕ್ಕೆ ಸಿಲುಕಿತು.

ಈ ಹಂತದಲ್ಲಿ ಆರಂಭಕಾರ ಶುಭಮನ್‌ ಗಿಲ್‌ ಮತ್ತು ನಾಯಕ ಇಯಾನ್‌ ಮಾರ್ಗನ್‌ 81 ರನ್ನುಗಳ ಬಿರುಸಿನ ಜತೆಯಾಟವೊಂದನ್ನು ನಡೆಸಿದರು. ತಂಡ ಚೇತರಿಸಿಕೊಳ್ಳುವ ಸೂಚನೆ ಲಭಿಸಿತು. ಆದರೆ 10ನೇ ಓವರಿನಲ್ಲಿ ರವಿ ಬಿಶ್ನೋಯಿ ಕೆಕೆಆರ್‌ ಕಪ್ತಾನನ ವಿಕೆಟ್‌ ಕಿತ್ತು ಮತ್ತೂಂದು ಸುತ್ತಿನ ಕುಸಿತಕ್ಕೆ ಮುಹೂರ್ತವಿರಿಸಿದರು. ಮಾರ್ಗನ್‌ ಗಳಿಕೆ 25 ಎಸೆತಗಳಿಂದ 40 ರನ್‌ (5 ಬೌಂಡರಿ, 2 ಸಿಕ್ಸರ್‌). 3ಕ್ಕೆ 91ರಲ್ಲಿದ್ದ ಕೋಲ್ಕತಾ 114ಕ್ಕೆ ತಲಪುವಷ್ಟರಲ್ಲಿ 7 ವಿಕೆಟ್‌ ಉದುರಿಸಿಕೊಂಡಿತು. ಬಳಿಕ ಲಾಕಿ ಫ‌ರ್ಗ್ಯುಸನ್‌ ಮಿಂಚಿನ ಗತಿಯಲ್ಲಿ 24 ರನ್‌ ಹೊಡೆದು 150ರ ಟಾರ್ಗೆಟ್‌ ನಿಗದಿಪಡಿಸುವಲ್ಲಿ ಯಶಸ್ವಿಯಾದರು.

ಸ್ಕೋರ್‌ಪಟ್ಟಿ
ಕೋಲ್ಕತಾ ನೈಟ್‌ರೈಡರ್
ಶುಭಮನ್‌ ಗಿಲ್‌ ಸಿ ಪೂರಣ್‌ ಬಿ ಶಮಿ 57
ನಿತೀಶ್‌ ರಾಣಾ ಸಿ ಗೇಲ್‌ ಬಿ ಮ್ಯಾಕ್ಸ್‌ವೆಲ್‌ 0
ರಾಹುಲ್‌ ತ್ರಿಪಾಠಿ ಸಿ ರಾಹುಲ್‌ ಬಿ ಶಮಿ 7
ದಿನೇಶ್‌ ಕಾರ್ತಿಕ್‌ ಸಿ ರಾಹುಲ್‌ ಬಿ ಶಮಿ 0
ಇಯಾನ್‌ ಮಾರ್ಗನ್‌ ಸಿ ಅಶ್ವಿ‌ನ್‌ ಬಿ ಬಿಶ್ನೋಯಿ 40
ಸುನೀಲ್‌ ನಾರಾಯಣ್‌ ಬಿ ಜೋರ್ಡನ್‌ 6
ಕಮಲೇಶ್‌ ನಾಗರಕೋಟಿ ಬಿ ಅಶ್ವಿ‌ನ್‌ 6
ಪ್ಯಾಟ್‌ ಕಮಿನ್ಸ್‌ ಎಲ್‌ಬಿಡಬ್ಲ್ಯುಬಿಶ್ನೋಯಿ 1
ಲಾಕಿ ಫ‌ರ್ಗ್ಯುಸನ್‌ ಔಟಾಗದೆ 24
ವರುಣ್‌ ಚಕ್ರವರ್ತಿ ಬಿ ಜೋರ್ಡನ್‌ 2
ಪ್ರಸಿದ್ಧ್ ಕೃಷ್ಣ ಔಟಾಗದೆ 0

ಇತರ 6
ಒಟ್ಟು (20 ಓವರ್‌ಗಳಲ್ಲಿ 9 ವಿಕೆಟಿಗೆ) 149
ವಿಕೆಟ್‌ ಪತನ: 1-1, 2-10, 3-10, 4-91, 5-101, 6-113, 7-114, 8-136, 9-149.

ಬೌಲಿಂಗ್‌:
ಗ್ಲೆನ್‌ ಮ್ಯಾಕ್ಸ್‌ವೆಲ್‌ 2-0-21-1
ಮೊಹಮ್ಮದ್‌ ಶಮಿ 4-0-35-3
ಆರ್ಶ್‌ದೀಪ್‌ ಸಿಂಗ್‌ 2-0-18-0
ಮುರುಗನ್‌ ಅಶ್ವಿ‌ನ್‌ 4-0-27-1
ಕ್ರಿಸ್‌ ಜೋರ್ಡನ್‌ 4-0-25-2
ರವಿ ಬಿಶ್ನೋಯಿ 4-1-20-2

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.