ಫಿಂಚ್, ಪಡಿಕ್ಕಲ್ ಫಿಪ್ಟೀ ; ABD ಮಸ್ತ್ ಬ್ಯಾಟಿಂಗ್ ಮುಂಬೈ ಗೆಲುವಿಗೆ 202 ರನ್ ಗಳ ಟಾರ್ಗೆಟ್


Team Udayavani, Sep 28, 2020, 8:59 PM IST

Padikkal-ABD

ದುಬಾಯಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಇಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ 10ನೇ ಲೀಗ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಬೆಂಗಳೂರು ತಂಡವು 20 ಓವರ್ ಗಳಲ್ಲಿ 3 ವಿಕೆಟ್ ಗಳನ್ನು ಕಳೆದುಕೊಂಡು 201 ರನ್ ಗಳಿಸಿದೆ.

ಈ ಮೂಲಕ ಮುಂಬೈ ಇಂಡಿಯನ್ಸ್ ಗೆಲುವಿಗೆ 202 ರನ್ ಗಳ ಗುರಿ ನಿಗದಿಯಾಗಿದೆ.

ಫಿಂಚ್ (52) ಮತ್ತು ಪಡಿಕ್ಕಲ್ (54) ಅವರ ಉತ್ತಮ ಓಪನಿಂಗ್ ಜೊತೆಯಾಟ ಮತ್ತು ಸ್ಟೈಲಿಷ್ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರ ಹೊಡಿಬಡಿ ಫಿಪ್ಟೀ ನೆರವಿನಿಂದ ರಾಯಲ್ ಚಾಲೆಂಜರ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಈ ಸ್ಪರ್ಧಾತ್ಮಕ ಮೊತ್ತ ದಾಖಲಿಸಿದೆ.

13ನೇ ಓವರಿನಲ್ಲಿ ಕ್ರೀಸಿಗಿಳಿದ ಎಬಿಡಿ ಮುಂಬೈ ಬೌಲರ್ ಗಳನ್ನು ಸಖತ್ತಾಗಿಯೇ ಕಾಡಿದರು. ಕೇವಲ 24 ಎಸೆತಗಳಿಂದ ಅಜೇಯ 55 ರನ್ ಗಳಿಸಿದ ಅವರ ಈ ಬ್ಯಾಟಿಂಗ್ ವೈಭವದಲ್ಲಿ 4 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ಸೇರಿತ್ತು.
ಇದನ್ನೂ ಓದಿ: ಕಿಶನ್ – ಪೊಲಾರ್ಡ್ ಬ್ಯಾಟಿಂಗ್ ಅಬ್ಬರಕ್ಕೆ ಮ್ಯಾಚ್ ‘ಟೈ’ ; ಸೂಪರ್ ಓವರ್ ನಲ್ಲಿ ಗೆದ್ದ RCB


ಟಾಸ್ ಗೆದ್ದ ಮುಂಬೈ ನಾಯಕ ರೋಹಿತ್ ಶರ್ಮಾ ಕೊಹ್ಲಿ ಪಡೆಗೆ ಬ್ಯಾಟಿಂಗ್ ಚಾಲೆಂಜ್ ನೀಡಿದರು. ಮುಂಬೈ ಬೌಲಿಂಗ್ ದಾಳಿಯನ್ನು ಎಚ್ಚರಿಕೆಯಿಂದ ಎದುರಿಸಿದ ರಾಯಲ್ ಚಾಲೆಂಜರ್ಸ್ ಓಪನಿಂಗ್ ಜೋಡಿ ದೇವದತ್ತ ಪಡಿಕ್ಕಲ್ (54) ಹಾಗೂ ಅರೋನ್ ಫಿಂಚ್ (52) ಇಬ್ಬರೂ ಅರ್ಧಶತಕ ದಾಖಲಿಸಿ ಉತ್ತಮ ಆರಂಭ ಒದಗಿಸಿದರು.

ಫಿಂಚ್ ಬಿರುಸಿನ ಆಟವಾಡಿದರೆ, ಪಡಿಕ್ಕಲ್ ಅವರಿಗೆ ಉತ್ತಮ ಬೆಂಬಲ ನೀಡಿದರು. ಈ ಜೋಡಿ ಮೊದಲ ವಿಕೆಟಿಗೆ 81 ರನ್ ಗಳನ್ನು ಕಲೆ ಹಾಕಿತು. 35 ಎಸೆತಗಳಲ್ಲಿ 52 ರನ್ ಗಳಿಸಿದ್ದ ಫಿಂಚ್ ಔಟಾಗುತ್ತಿದ್ದಂತೆ ಆಡಲು ಬಂದ ಒನ್ ಡೌನ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ 11 ಎಸೆತ ಎದುರಿಸಿ ಕೇವಲ 3 ರನ್ ಮಾಡಿ ಔಟಾದರು. ಈ ಪಂದ್ಯದಲ್ಲೂ ಕೊಹ್ಲಿ ಬ್ಯಾಟಿಂಗ್ ಅಬ್ಬರ ನೋಡುವ ಅವರ ಅಭಿಮಾನಿಗಳ ಕನಸು ನನಸಾಗದೇ ಉಳಿಯಿತು.


ಕೊಹ್ಲಿ ಔಟಾದ ಬಳಿಕ ಕ್ರೀಸಿಗೆ ಬಂದ ಎಬಿಡಿ ವಿಲಿಯರ್ಸ್ ಬಿರುಸಿನ ಆಟಕ್ಕೆ ಮನ ಮಾಡಿದರು. ಇತ್ತ ಎಬಿಡಿ ಬ್ಯಾಟ್ ಬೀಸುತ್ತಿದ್ದಂತೆ ಇನ್ನೊಂದು ಕಡೆ ಸೆಟಲ್ ಆಗಿದ್ದ ಪಡಿಕ್ಕಲ್ ಸಹ ಮುಂಬೈ ಬೌಲರ್ ಗಳಿಗೆ ಚುರುಕು ಮುಟ್ಟಿಸಲಾರಂಭಿಸಿದರು. ಈ ನಡುವೆ ಪಡಿಕ್ಕಲ್ ಈ ಕೂಟದಲ್ಲಿ ತಮ್ಮ ಎರಡನೇ ಅರ್ಧಶತಕವನ್ನು ಪೂರೈಸಿದರು.

ಫಿಂಚ್ (52) ಮತ್ತು ಪಡಿಕ್ಕಲ್ (54) ಅವರ ಉತ್ತಮ ಓಪನಿಂಗ್ ಜೊತೆಯಾಟ ಮತ್ತು ಸ್ಟೈಲಿಷ್ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರ ಅಜೇಯ ಹೊಡಿಬಡಿ ಫಿಪ್ಟೀ ನೆರವಿನಿಂದ ರಾಯಲ್ ಚಾಲೆಂಜರ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಸ್ಪರ್ಧಾತ್ಮಕ ಮೊತ್ತ ದಾಖಲಿಸಿದೆ. ಇನ್ನಿಂಗ್ಸ್ ಕೊನೆಯಲ್ಲಿ ಎಬಿಡಿಗೆ ಉತ್ತಮ ಸಾಥ್ ನೀಡಿದ ಶಿವಂ ದುಬೆ ಅವರು ಕೇವಲ 10 ಎಸೆತಗಳಿಂದ 27 ರನ್ ಗಳಿಸಿದರು ಇದರಲ್ಲಿ 3 ಸಿಕ್ಸರ್ ಸೇರಿತ್ತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.