IPL 2020 : ಇಂದು ಕಾಂಗರೂ ಕಪ್ತಾನರ ಫೈಟ್‌


Team Udayavani, Oct 22, 2020, 6:00 AM IST

IPL 2020 : ಇಂದು ಕಾಂಗರೂ ಕಪ್ತಾನರ ಫೈಟ್‌

ದುಬಾೖ: ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಮತ್ತು ಸನ್‌ರೈಸರ್ ಹೈದರಾಬಾದ್‌ ತಂಡಗಳು ಗುರುವಾರ ದುಬಾೖಯಲ್ಲಿ ಮಹತ್ವದ ಪಂದ್ಯದದಲ್ಲಿ ಪಾಲ್ಗೊಳ್ಳಲಿವೆ.

ಇತ್ತಂಡಗಳನ್ನು ಕಾಂಗರೂ ನಾಡಿನ ಆಟಗಾರರು ಮುನ್ನಡೆಸುತ್ತಿರುವುದು ಈ ಪಂದ್ಯದ ವಿಶೇಷ. ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಪಡೆಗಳಿಲ್ಲಿ ಮುಖಾಮುಖೀ ಆಗಲಿವೆ. ಅ. 11ರ ಮೊದಲ ಸುತ್ತಿನ ಪಂದ್ಯದಲ್ಲಿ ರಾಜಸ್ಥಾನ್‌ 5 ವಿಕೆಟ್‌ಗಳ ಜಯ ಸಾಧಿಸಿತ್ತು. ಇದಕ್ಕೆ ಸೇಡು ತೀರಿಸಿಕೊಂಡರೆ ಹೈದರಾಬಾದ್‌ ಒಂದು ಸ್ಥಾನ ಮೇಲೇರಿ ಆರಕ್ಕೆ ತಲಪುವ ಸಾಧ್ಯತೆ ಇದೆ.

ಆತ್ಮವಿಶ್ವಾದಲ್ಲಿ ರಾಜಸ್ಥಾನ್‌
ಕಳೆದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸಂಘಟಿತ ಪ್ರದರ್ಶನ ನೀಡಿ ಭರ್ಜರಿ ಗೆಲುವು ಸಾಧಿಸಿ ಸ್ಮಿತ್‌ ಪಡೆ ಸಹಜವಾಗಿಯೇ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. 10 ಪಂದ್ಯಗಳಿಂದ 8 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಆದರೆ ಇನ್ನುಳಿದ ನಾಲ್ಕೂ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆಲ್ಲಬೇಕಿದೆ.

ಆರಂಭದ ಕೆಲವು ಪಂದ್ಯಗಳಲ್ಲಿ ಸ್ಫೋಟಕ ಆಟವಾಡಿದ ಕೇರಳದ ಸ್ಟಂಪರ್‌ ಸಂಜು ಸ್ಯಾಮ್ಸನ್‌ ಅನಂತರ ವಿಫ‌ಲರಾಗಿರುವುದು ಹಾಗೂ ರಾಬಿನ್‌ ಉತ್ತಪ್ಪ ಅವರ ಬ್ಯಾಟಿಂಗ್‌ ಬರಗಾಲ ತೀವ್ರಗೊಂಡಿರುವುದು ರಾಜಸ್ಥಾನ್‌ ಪಾಲಿನ ಚಿಂತೆಯ ಸಂಗತಿಯಾಗಿದೆ. ಉತ್ತಪ್ಪ ಬದಲು ಮನನ್‌ ವೋಹ್ರ ಅವಕಾಶ ಪಡೆದರೂ ಅಚ್ಚರಿ ಇಲ್ಲ.

ರಾಜಸ್ಥಾನದ ಬೌಲಿಂಗ್‌ ವಿಭಾಗ ಯುವ ವೇಗಿ ಕಾರ್ತಿಕ್‌ ತ್ಯಾಗಿ, ಜೋಫ್ರ ಆರ್ಚರ್‌, ಬೆನ್‌ ಸ್ಟೋಕ್ಸ್‌, ಕನ್ನಡಿಗ ಶ್ರೇಯಸ್‌ ಗೋಪಾಲ್‌ ಅವರಿಂದ ಉತ್ತಮ ಲಯದಲ್ಲಿದೆ.

ಸಂಭಾವ್ಯ ತಂಡಗಳು
ರಾಜಸ್ಥಾನ್‌: ರಾಬಿನ್‌ ಉತ್ತಪ್ಪ, ಬೆನ್‌ ಸ್ಟೋಕ್ಸ್‌, ಸಂಜು ಸ್ಯಾಮ್ಸನ್‌, ಸ್ಟೀವನ್‌ ಸ್ಮಿತ್‌ (ನಾಯಕ), ಜಾಸ್‌ ಬಟ್ಲರ್‌, ರಿಯಾನ್‌ ಪರಾಗ್‌, ರಾಹುಲ್‌ ತೆವಾತಿಯಾ, ಜೋಫ್ರ ಆರ್ಚರ್‌, ಶ್ರೇಯಸ್‌ ಗೋಪಾಲ್‌, ಅಂಕಿತ್‌ ರಜಪೂತ್‌, ಕಾರ್ತಿಕ್‌ ತ್ಯಾಗಿ.

ಹೈದರಾಬಾದ್‌: ಡೇವಿಡ್‌ ವಾರ್ನರ್‌ (ನಾಯಕ), ಜಾನಿ ಬೇರ್‌ಸ್ಟೊ, ಮನೀಷ್‌ ಪಾಂಡೆ, ಕೇನ್‌ ವಿಲಿಯಮ್ಸನ್‌/ಜಾಸನ್‌ ಹೋಲ್ಡರ್‌, ಪ್ರಿಯಂ ಗರ್ಗ್‌, ವಿಜಯ್‌ ಶಂಕರ್‌, ಅಬ್ದುಲ್‌ ಸಮದ್‌, ರಶೀದ್‌ ಖಾನ್‌, ಸಂದೀಪ್‌ ಶರ್ಮ, ಟಿ. ನಟರಾಜನ್‌, ಬಾಸಿಲ್‌ ಥಂಪಿ.

ಪ್ರಯೋಗ ಸಲ್ಲದು
ಕಳೆದ ಪಂದ್ಯದಲ್ಲಿ ಹೈದರಾಬಾದ್‌ ನಾಯಕ ವಾರ್ನರ್‌ ಕೆಲವು ಪ್ರಯೋಗ ಮಾಡಿ ಕೈ ಸುಟ್ಟುಕೊಂಡಿದ್ದರು. ಸ್ವತಃ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಿ ತಂಡವನ್ನು ದಡ ಮುಟ್ಟಿಸುವಲ್ಲಿ ವಿಫ‌ಲರಾಗಿದ್ದರು. ವಾರ್ನರ್‌ ಮತ್ತೆ ಇಂಥ ಪ್ರಯೋಗ ನಡೆಸಿದರೆ ಅದರಿಂದ ತಂಡಕ್ಕೆ ಹಾನಿಯಾಗುವ ಸಂಭವವೇ ಹೆಚ್ಚು. ಪವರ್‌ ಪ್ಲೇಯಲ್ಲಿ ದಾಖಲಾಗುವ ಮೊತ್ತವೇ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುವ ಕಾರಣ ವಾರ್ನರ್‌-ಬೇರ್‌ಸ್ಟೊ ಆರಂಭಿಕರಾಗಿ ಕಣಕ್ಕಿಳಿಯುವುದೇ ಸೂಕ್ತವೆನಿಸುತ್ತದೆ. ಅಫ್ಘಾನ್‌ ಸ್ಪಿನ್ನರ್‌ ರಶೀದ್‌ ಖಾನ್‌ ಹೊರತುಪಡಿಸಿ ಘಾತಕ ಸ್ಪೆಲ್‌ ನಡೆಸುವಂಥ ಬೌಲರ್‌ ಹೈದರಾಬಾದ್‌ ತಂಡದಲ್ಲಿ ಕಾಣುತ್ತಿಲ್ಲ. ಹೀಗಾಗಿ ಅತ್ಯುತ್ತಮ ಮಟ್ಟದ ಬ್ಯಾಟಿಂಗ್‌ ಪ್ರದರ್ಶನವಷ್ಟೇ ತಂಡದ ಕೈ ಹಿಡಿಯಬೇಕಿದೆ.

 

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.