ಚಹಾಲ್ ಬಿಗಿ ಬೌಲಿಂಗ್; 10 ರನ್ ಗಳ ಅಮೋಘ ಗೆಲುವು ಸಾಧಿಸಿದ ಆರ್ ಸಿ ಬಿ
Team Udayavani, Sep 21, 2020, 11:28 PM IST
ಆಬುಧಾಬಿ : ಐಪಿಎಲ್ ನ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿ ಬಿ 10ರನ್ ಗಳ ಅಂತರದಿಂದ ಜಯ ಗಳಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಸವಾಲಿಗೆ ಇಳಿದ ಆರ್ ಸಿ ಬಿ 5 ವಿಕೆಟ್ ನಷ್ಟಕ್ಕೆ 164 ರ ಗುರಿ ಬಿಟ್ಟು ಕೊಟ್ಟಿತ್ತು. ಆರ್ ಸಿ ಬಿ ನೀಡಿದ 164 ರನ್ ಗಳ ಗುರಿಯನ್ನು ಆತ್ಮವಿಶ್ವಾಸದಿಂದಲೇ ಬೆನ್ನಟ್ಟಲಾರಂಭಿಸಿದ ಸನ್ ರೈಸರ್ಸ್ ಹೈದರಾಬಾದ್ 153 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೋಲನ್ನನುಭವಿಸಿತು.
ಸನ್ ರೈಸರ್ಸ್ ಹೈದರಾಬಾದ್ ಪರ ಯುಜ್ವೇಂದ್ರ ಚಹಾಲ್ 4 ಓವರ್ ನಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದು ಗೆಲುವಿನನಲ್ಲಿ ಪ್ರಮುಖ ಪಾತ್ರ ವಹಿಸಿದರು. ನವದೀಪ್ ಸೈನಿ ಹಾಗೂ ಶಿವಂ ದುಬೆ ತಲಾ 2 ವಿಕೆಟ್ ಪಡೆದು ಚಾಹಲ್ ಅವರಿಗೆ ಸಾಥ್ ನೀಡಿದರು.
ಆತ್ಮವಿಶ್ವಾಸದಿಂದಲೇ ಗುರಿಯನ್ನು ಬೆನ್ನಟ್ಟಲಾರಂಭಿಸಿದ ಸನ್ ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಕೇವಲ 6 ರನ್ ಮಾಡಿ ಔಟಾದರು. ಜಾನಿ ಬೇರ್ಸ್ಟೋವ್ ಗೆ ಜೊತೆಯಾದ ಮನೀಶ್ ಭದ್ರ ಬುನಾದಿಯನ್ನೇ ಹಾಕಿದರು. 34 ರನ್ ಗಳಿಸಿ ಉತ್ತಮವಾಗಿ ಬ್ಯಾಟಿಂಗ್ ಮಾಡುತಿದ್ದ ಪಾಂಡೆ ಯುಜ್ವೇಂದ್ರ ಚಹಾಲ್ ಬೌಲಿಂಗ್ ನಲ್ಲಿ ರಭಸದ ಆಟಕ್ಕೆ ಮುನ್ನುಗಿ ನವದೀಪ್ ಸೈನಿ ಗೆ ಕ್ಯಾಚ್ ನೀಡಿ ಪೆವಿಲಿಯನ್ ಗೆ ಹೆಜ್ಜೆ ಹಾಕಿದರು. ಈ ಜೋಡಿ ಮೂರನೇ ವಿಕೆಟ್ 71 ರನ್ ಗಳ ಅಮೋಘ ಜೊತೆಯಾಟದಿಂದ ತಂಡಕ್ಕೆ ಆಸರೆಯಾದರು.
ಆದರೆ ಚಾಹಲ್, ನವದೀಪ್ ಸೈನಿ ಹಾಗೂ ಶಿವಂ ದುಬೆ ಅವರ ಮಾರಕ ಬೌಲಿಂಗ್ ಗೆ ಸನ್ ರೈಸರ್ಸ್ ಹೈದರಾಬಾದ್ 19.4 ಓವರ್ ನಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 154 ರನ್ಗಳಿಸಳಷ್ಟೇ ಶಕ್ತವಾಯಿತು.
ಇನ್ನೊಂದೆಡೆ ರಭಸದ ಬ್ಯಾಟಿಂಗ್ ಗೆ ಇಳಿದ ಜಾನಿ ಬೇರ್ಸ್ಟೋವ್ ಅರ್ಧ ಶತಕ ಗಳಿಸಿ ಮುನ್ನುಗುತ್ತಿದ್ದಾಗ ಚಾಹಲ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ತಮ್ಮ ಅಮೋಘ 61(43) ರನ್ ಸನ್ ರೈಸರ್ಸ್ ಹೈದರಾಬಾದ್ ರನ್ ಗಳಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಬೇರ್ಸ್ಟೋವ್ ನಿರ್ಗಮನದಿಂದ ಕ್ರಿಸ್ ಗೆ ಆಗಮಿಸಿದ್ದ ವಿಜಯ್ ಶಂಕರ್ ಚಾಹಲ್ ಅವರ ಮಾರಕ ದಾಳಿಗೆ ಖಾತೆ ತೆರೆಯದೆ ಶೂನ್ಯ ರನ್ ಗೆ ವಿಕೆಟ್ ಒಪ್ಪಿಸಿದರು. ಮತ್ತೆ ಬಂದ ಬ್ಯಾಟ್ಸ್ ಮ್ಯಾನ್ ಗಳು ಆರ್ ಸಿ ಬಿ ಬಿಗಿ ದಾಳಿಗೆ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ನಿಲ್ಲದೆ ಬೌಲರ್ ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು.
ಪಂದ್ಯ ಶ್ರೇಷ್ಠ : ಯುಜ್ವೇಂದ್ರ ಚಹಾಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!