ಇಂದಿನಿಂದ IPL ಎರಡನೇ ಇನ್ನಿಂಗ್ಸ್ ಆರಂಭ : ಮುಂಬೈ-ಚೆನ್ನೈ ಜಟಾಪಟಿ


Team Udayavani, Sep 19, 2021, 8:02 AM IST

fgfgjhgjkhgf

ದುಬೈ: ಮೇ ಆರಂಭದಲ್ಲಿ ಕೋವಿಡ್‌ ಕಾರಣದಿಂದ ಭಾರತದಲ್ಲಿ ಅರ್ಧಕ್ಕೆ ನಿಂತಿದ್ದ 2021ರ ಐಪಿಎಲ್‌ಗೆ ಬರೋಬ್ಬರಿ ನಾಲ್ಕೂವರೆ ತಿಂಗಳ ಬಳಿಕ ಯುಎಇಯಲ್ಲಿ ಮುಂದುವರಿಯುವ ಮುಹೂರ್ತ ಕೂಡಿಬಂದಿದೆ.

ಭಾನುವಾರದಿಂದ ಅ.15ರ ತನಕ ದುಬೈ, ಶಾರ್ಜಾ, ಅಬುಧಾಬಿಯಲ್ಲಿ ಉಳಿದ 31 ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್‌ ಪ್ರೇಮಿಗಳು ಮತ್ತೂಂದು ಕಂತಿನ ರೋಮಾಂಚನವನ್ನು ಅನುಭವಿಸುವ ಸಂಭ್ರಮದಲ್ಲಿದ್ದಾರೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖೀ ಬಳಿಕ ಜೈವಿಕ ಸುರಕ್ಷಾ ವಲಯದಲ್ಲೂ ಕೊರೊನಾ ಕೇಸ್‌ ಕಂಡುಬಂದುದರಿಂದ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. ಮರುದಿನ ಆರ್‌ಸಿಬಿ-ಕೆಕೆಆರ್‌ ಮುಖಾಮುಖೀ ಆಗಬೇಕಿತ್ತು. ಆದರೀಗ ಯುಎಇಯ ಮುಂದುವರಿದ ಆವೃತ್ತಿಗಾಗಿ ವೇಳಾಪಟ್ಟಿಯನ್ನು ತುಸು ಬದಲಿಸಲಾಗಿದೆ. ಇಲ್ಲಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಪ್ರಸಕ್ತ ಋತುವಿನಲ್ಲಿ ಗಮನಾರ್ಹ ಸಾಧನೆಗೈದಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಟಿ20 ವಿಶ್ವಕಪ್‌ಗೆ ಅಭ್ಯಾಸ:

ಅಂದಿನ ಪರಿಸ್ಥಿತಿ ಕಂಡಾಗ 2021ರ ಐಪಿಎಲ್‌ ಪೂರ್ತಿಗೊಳ್ಳುವುದು ಅನುಮಾನವಿತ್ತು. ಆದರೆ ನಿಬಿಡ ಅಂತಾರಾಷ್ಟ್ರೀಯ ಸರಣಿಗಳ ನಡುವೆಯೂ ಬಿಸಿಸಿಐ ಈ ಕ್ಯಾಶ್‌ ರಿಚ್‌ ಲೀಗ್‌ಗೆ ಸಮಯ ಹೊಂದಿಸಿಕೊಂಡದ್ದೊಂದು ಅಚ್ಚರಿ. ಅಷ್ಟೇ ಅಲ್ಲ, ಅತ್ಯಂತ ಸೂಕ್ತ ಸಮಯದಲ್ಲಿ ಐಪಿಎಲ್‌ ಮುಂದುವರಿ ಯುತ್ತಿದೆ. ಇದು ಮುಗಿದ ಎರಡೇ ದಿನದಲ್ಲಿ ಯುಎಇಯಲ್ಲೇ ಪ್ರತಿಷ್ಠಿತ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಆರಂಭವಾಗಲಿದ್ದು, ಇದಕ್ಕೆ ಅಭ್ಯಾಸ ನಡೆಸಲು ಬಹುಶಃ ಐಪಿಎಲ್‌ಗಿಂತ ಉತ್ತಮ ವೇದಿಕೆ ಇನ್ನೊಂದಿಲ್ಲ. ವಿಶ್ವಕಪ್‌ ತಂಡಗಳಲ್ಲಿರುವ ಬಹುತೇಕ ಆಟಗಾರರು ಈ ಕೂಟದಲ್ಲಿ ಆಡುತ್ತಿದ್ದಾರೆ. ಹೀಗಾಗಿ ಐಪಿಎಲ್‌ ಭಾಗ-2ರ ಮಹತ್ವವೂ ಹೆಚ್ಚಿದೆ.

ಕೆಲವು ಸ್ಟಾರ್‌ ವಿದೇಶಿ ಆಟಗಾರರು ಹಿಂದೆ ಸರಿದರೂ ಕೂಟದ ಆಕರ್ಷಣೆಯೇನೂ ಕಡಿಮೆ ಆಗದೆಂಬುದೊಂದು ಲೆಕ್ಕಾಚಾರ. ಡೇವಿಡ್‌ ಮಲಾನ್‌, ಕ್ರಿಸ್‌ ವೋಕ್ಸ್‌, ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಜೋಫ್ರ ಆರ್ಚರ್‌, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌, ಪ್ಯಾಟ್‌ ಕಮಿನ್ಸ್‌ ಮೊದಲಾದ ವಿದೇಶಿ ಆಟಗಾರರು ಯುಎಇಗೆ ಆಗಮಿಸುತ್ತಿಲ್ಲ.

ಪ್ರೇಕ್ಷಕರಿಗೆ ಅವಕಾಶ:

2019ರ ಬಳಿಕ ಪ್ರೇಕ್ಷಕರಿಗೆ ಬಾಗಿಲು ತೆರೆಯುವ ಕಾರಣಕ್ಕಾಗಿಯೂ ಯುಎಇ ಆವೃತ್ತಿಯ ಐಪಿಎಲ್‌ ಆಕರ್ಷಣೆ ಹೆಚ್ಚಿದೆ. ಸ್ಟೇಡಿಯಂ ಸಾಮರ್ಥ್ಯದ ಶೇ. 50 ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗುವುದು. ಇವರು ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರಬೇಕು. ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲೇ ಖರೀದಿಸಬೇಕೆಂದು ಸೂಚಿಸಲಾಗಿದೆ.

ವಿಭಿನ್ನ ಪಿಚ್‌ಗಳ ಸವಾಲು:

ಭಾರತದಲ್ಲಿ ನಡೆದ ಮೊದಲಾರ್ಧದ ಪಂದ್ಯಗಳ ವೇಳೆ ರನ್‌ ಪ್ರವಾಹ ಹರಿದು ಬಂದಿತ್ತಾದರೂ ಯುಎಇಯಲ್ಲಿ ದೊಡ್ಡ ಮೊತ್ತವನ್ನು ನಿರೀಕ್ಷಿಸುವಂತಿಲ್ಲ. ಇಲ್ಲಿನ ಪಿಚ್‌ಗಳು ತುಸು ನಿಧಾನವಾಗಿ ವರ್ತಿಸುವುದೇ ಇದಕ್ಕೆ ಕಾರಣ. ಆದರೆ ಶಾರ್ಜಾ ಸ್ಟೇಡಿಯಂ ಅಪವಾದವಾಗಬಹುದು. 2020ರ ಆವೃತ್ತಿಯ ವೇಳೆ ಇಲ್ಲಿ 200 ರನ್ನಿಗೇನೂ ಕೊರತೆ ಎದುರಾಗಿರಲಿಲ್ಲ. ಉಳಿದೆಡೆ ಬೌಲರ್‌ಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ.

ಅಗ್ರಸ್ಥಾನಲ್ಲಿ ಡೆಲ್ಲಿ ಕ್ಯಾಪಿಟಲ್‌ :

ಭಾರತದಲ್ಲಿ ಆಡಲಾದ 29 ಪಂದ್ಯಗಳಲ್ಲಿ 2020ರ ರನ್ನರ್ ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 12 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 8 ಪಂದ್ಯಗಳಲ್ಲಿ ಆರನ್ನು ಗೆದ್ದಿದೆ.

ಚೆನ್ನೈ ಮತ್ತು ಆರ್‌ಸಿಬಿ ತಲಾ 10 ಅಂಕ ಗಳಿಸಿವೆ. ಆದರೆ ರನ್‌ರೇಟ್‌ನಲ್ಲಿ ಮುಂದಿರುವ ಧೋನಿ ಪಡೆ ದ್ವಿತೀಯ ಸ್ಥಾನದಲ್ಲಿದೆ. ಕೊಹ್ಲಿ ಟೀಮ್‌ಗೆ 3ನೇ ಸ್ಥಾನ. ಭಾನುವಾರದ ಮೊದಲ ಪಂದ್ಯವನ್ನು ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ನೆಗೆಯಲಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.