ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು


Team Udayavani, May 17, 2022, 12:12 AM IST

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ನವಿ ಮುಂಬಯಿ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಸೋಮವಾರದ ಐಪಿಎಲ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು 17 ರನ್ನುಗಳಿಂದ ಸೋಲಿಸಿದೆ.

ಈ ಗೆಲುವಿನಿಂದ ಡೆಲ್ಲಿ ತಂಡವು ಆಡಿದ 13 ಪಂದ್ಯಗಳಿಂದ 7ರಲ್ಲಿ ಗೆಲುವು ದಾಖಲಿಸಿ 14 ಅಂಕ ಗಳಿಸಿದೆ. ಡೆಲ್ಲಿ ತಂಡವು ತನ್ನ ಅಂತಿಮ ಲೀಗ್‌ ಪಂದ್ಯದಲ್ಲಿ ಮುಂಬೈ ತಂಡವನ್ನು ಎದುರಿಸಲಿದ್ದು ಗೆದ್ದರೆ ಪ್ಲೇ ಆಫ್ ಗೆ ತೇರ್ಗಡೆಯಾಗುವ ಸಾಧ್ಯತೆಯಿದೆ. ಈ ಸೋಲಿನಿಂದ ಪಂಜಾಬ್‌ ಪ್ಲೇ ಆಫ್ ಗೆ ತೇರ್ಗಡೆಯಾಗುವುದು ಅನುಮಾನವಾಗಿದೆ.

ಅಕ್ಷರ್‌ ಪಟೇಲ್‌, ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್‌ ಯಾದವ್‌ ಅವರ ಬಿಗು ದಾಳಿಗೆ ತತ್ತರಿಸಿದ ಪಂಜಾಬ್‌ ತಂಡವು ಆರಂಭದಲ್ಲಿಯೇ ಕುಸಿಯಿತು. ಈ ಕುಸಿತದಿಂದ ಚೇತರಿಸಿಕೊಳ್ಳಲು ವಿಫ‌ಲವಾದ ಪಂಜಾಬ್‌ ತಂಡವು ಅಂತಿಮವಾಗಿ 9 ವಿಕೆಟಿಗೆ 142 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು. ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 7 ವಿಕೆಟಿಗೆ 159 ರನ್‌ ಗಳಿಸಿತ್ತು.

ಬಿಗು ದಾಳಿ ಸಂಘಟಿಸಿದ ಶಾರ್ದೂಲ್ ಠಾಕೂರ್ 36 ರನ್ನಿಗೆ 4 ವಿಕೆಟ್‌ ಉರುಳಿಸಿದರು. ಅಕ್ಷರ್‌ ಪಟೇಲ್‌ ತನ್ನ 4 ಓವರ್‌ಗಳ ದಾಳಿಯಲ್ಲಿ ಕೇವಲ 14 ರನ್‌ ನೀಡಿ 2 ವಿಕೆಟ್‌ ಹಾರಿಸಿದರೆ ಕುಲದೀಪ್‌ ಯಾದವ್‌ 14 ರನ್ನಿಗೆ 2 ವಿಕೆಟ್‌ ಕಿತ್ತರು.

ಅಗ್ರಸ್ಥಾನದಲ್ಲಿ ಗುಜರಾತ್‌
ಆಡಿದ 13 ಪಂದ್ಯಗಳಲ್ಲಿ 10ರಲ್ಲಿ ಗೆದ್ದು 20 ಅಂಕ ಗಳಿಸಿರುವ ಗುಜರಾತ್‌ ಟೈಟಾನ್ಸ್‌ ಅಗ್ರಸ್ಥಾನದಲ್ಲಿದೆ. ಮಾತ್ರವಲ್ಲದೇ ಈಗಾಗಲೇ ಪ್ಲೇ ಆಫ್ಗೆ ತೇರ್ಗಡೆಯಾಗಿದೆ. ರಾಜಸ್ಥಾನ್‌ ಮತ್ತು ಲಕ್ನೋ ತಲಾ 16 ಅಂಕ ಗಳಿಸಿದ್ದು ಪ್ಲೇ ಆಫ್ ಗೆ ಬಹುತೇಕ ತೇರ್ಗಡೆಯಾಗುವ ಸಾಧ್ಯತೆಯಿದೆ. ಪ್ಲೇ ಆಫ್ನ ಇನ್ನೊಂದು ತಂಡಕ್ಕಾಗಿ ಬೆಂಗಳೂರು, ಡೆಲ್ಲಿ ಕೋಲ್ಕತಾ, ಪಂಜಾಬ್‌ ನಡುವೆ ಸ್ಪರ್ಧೆಯಿದೆ.

ನಿರ್ಣಾಯಕ ಪಂದ್ಯದ ಆರಂಭದಲ್ಲಿಯೇ ಡೆಲ್ಲಿ ಎಡವಿತು. ರನ್‌ ಖಾತೆ ತೆರೆಯುವ ಮೊದಲೇ ತಂಡ ಸ್ಫೋಟಕ ಖ್ಯಾತಿಯ ಡೇವಿಡ್‌ ವಾರ್ನರ್‌ ಅವರ ವಿಕೆಟನ್ನು ಕಳೆದುಕೊಂಡಿತು.

ಲಿವಿಂಗ್‌ಸ್ಟೋನ್‌ ಈ ವಿಕೆಟನ್ನು ಹಾರಿಸಿದ್ದರು. ಈ ಪಂದ್ಯದಲ್ಲಿ ಆಡಲು ಅವಕಾಶ ಪಡೆದ ಸರ್ಫರಾಜ್ ಖಾನ್‌ ಮತ್ತು ಮಿಚೆಲ್‌ ಮಾರ್ಷ್‌ ಪಂಜಾಬ್‌ ದಾಳಿಯನ್ನು ಸಮರ್ಥವಾಗಿ ಎದುರಿಸಿ ದ್ವಿತೀಯ ವಿಕೆಟಿಗೆ 51 ರನ್‌ ಪೇರಿಸಿ ತಂಡವನ್ನು ಆರಂಭದ ಕುಸಿತದಿಂದ ಪಾರು ಮಾಡಿದರು. ಉತ್ತಮವಾಗಿ ಆಡುತ್ತಿದ್ದ ಸರ್ಫರಾಜ್ 32 ರನ್‌ ಗಳಿಸಿ ಅರ್ಷದೀಪ್‌ ಅವರ ಬೌಲಿಂಗ್‌ನಲ್ಲಿ ಔಟಾದರು.

ಪಂಜಾಬ್‌ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಮಿಚೆಲ್‌ ಮಾರ್ಷ್‌ ಆಕರ್ಷಕ ಅರ್ಧಶತಕ ದಾಖಲಿಸಿ ತಂಡವನ್ನು ಆಧರಿಸಿದರು. 48 ಎಸೆತ ಎದುರಿಸಿ 4 ಬೌಂಡರಿ ಮತ್ತು 3 ಸಿಕ್ಸರ್‌ ನೆರವಿನಿಂದ 63 ರನ್‌ ಗಳಿಸಿ ಔಟಾದರು. ಕೊನೆ ಹಂತದಲ್ಲಿ ಕೆಲವು ವಿಕೆಟ್‌ ಉರುಳಿದ ಕಾರಣ ತಂಡದ ರನ್‌ವೇಗಕ್ಕೆ ಕಡಿವಾಣ ಬಿತ್ತು. ಬಿಗು ದಾಳಿ ಸಂಘಟಿಸಿದ ಲಿವಿಂಗ್‌ಸ್ಟೋನ್‌ ಮತ್ತು ಅರ್ಷದೀಪ್‌ ತಲಾ ಮೂರು ವಿಕೆಟ್‌ ಕಿತ್ತರು. ರಾಹುಲ್‌ ಚಹರ್‌ ವಿಕೆಟ್‌ ಪಡೆಯದಿದ್ದರೂ ತನ್ನ 4 ಓವರ್‌ಗಳ ದಾಳಿಯಲ್ಲಿ ಕೇವಲ 19 ರನ್‌ ಬಿಟ್ಟುಕೊಟ್ಟು ಗಮನ ಸೆಳೆದರು.

ಡೆಲ್ಲಿ: ಎರಡು ಬದಲಾವಣೆ
ಈ ಪಂದ್ಯಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ ಎರಡು ಬದಲಾವಣೆ ಮಾಡಿಕೊಂಡಿದೆ. ಖಲೀಲ್‌ ಅಹ್ಮದ್‌ ಮತ್ತು ಸರ್ಫರಾಜ್ ಖಾನ್‌ ಅವರು ಚೇತನ್‌ ಸಕಾರಿಯ ಮತ್ತು ಕೆಎಸ್‌ ಭರತ್‌ ಅವರ ಬದಲಿಗೆ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಪಂಜಾಬ್‌ ಕಿಂಗ್ಸ್‌ ತನ್ನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸ್ಕೋರ್‌ ಪಟ್ಟಿ
ಡೆಲ್ಲಿ ಕ್ಯಾಪಿಟಲ್ಸ್‌
ಡೇವಿಡ್‌ ವಾರ್ನರ್‌ ಸಿ ಚಹರ್‌ ಬಿ ಲಿವಿಂಗ್‌ಸ್ಟೋನ್‌ 0
ಸರ್ಫರಾಜ್ ಖಾನ್‌ ಸಿ ಚಹರ್‌ ಬಿ ಅರ್ಷದೀಪ್‌ 32
ಮಿಚೆಲ್‌ ಮಾರ್ಷ್‌ ಸಿ ರಿಶಿ ಬಿ ರಬಾಡ 63 ಲಲಿತ್‌ ಯಾದವ್‌ ಸಿ ರಾಜಪಕ್ಷ ಬಿ ಅರ್ಷದೀಪ್‌ 24
ರಿಷಬ್‌ ಪಂತ್‌ ಸ್ಟಂಪ್ಡ್ ಶರ್ಮ ಬಿ ಲಿವಿಂಗ್‌ಸ್ಟೋನ್‌ 7
ಪೊವೆಲ್‌ ಸಿ ಶಿಖರ್‌ ಬಿ ಲಿವಿಂಗ್‌ಸ್ಟೋನ್‌ 2
ಅಕ್ಷರ್‌ ಪಟೇಲ್‌ ಔಟಾಗದೆ 17
ಶಾರ್ದೂಲ್ ಠಾಕೂರ್ ಸಿ ಬ್ರಾರ್‌ ಬಿ ಅರ್ಷದೀಪ್‌ 3
ಕುಲದೀಪ್‌ ಯಾದವ್‌ ಔಟಾಗದೆ 2
ಇತರ: 9
ಒಟ್ಟು (20 ಓವರ್‌ಗಳಲ್ಲಿ 7 ವಿಕೆಟಿಗೆ) 159
ವಿಕೆಟ್‌ ಪತನ: 1-0, 2-51, 3-98, 4-107, 5-112, 6-149, 7-154
ಬೌಲಿಂಗ್‌: ಲಿಯಮ್‌ ಲಿವಿಂಗ್‌ಸ್ಟೋನ್‌ 4-0-27-3
ಕಾಗಿಸೊ ರಬಾಡ 3-0-24-1
ಹರ್‌ಪ್ರೀತ್‌ ಬ್ರಾರ್‌ 3-0-29-0
ರಿಶಿ ಧವನ್‌ 2-0-17-0
ಅರ್ಷದೀಪ್‌ ಸಿಂಗ್‌ 4-0-37-3
ರಾಹುಲ್‌ ಚಹರ್‌ 4-0-19-0

ಪಂಜಾಬ್‌ ಕಿಂಗ್ಸ್‌
ಜಾನಿ ಬೇರ್‌ಸ್ಟೋ ಸಿ ಪಟೇಲ್‌ ಬಿ ನೋರ್ಜೆ 28
ಶಿಖರ್‌ ಧವನ್‌ ಸಿ ಪಂತ್‌ ಬಿ ಠಾಕೂರ್ 19
ಭನುಕ ರಾಜಪಕ್ಷ ಸಿ ನೋರ್ಜೆ ಬಿ ಠಾಕೂರ್ 4
ಲಿವಿಂಗ್‌ಸ್ಟೋನ್‌ ಸ್ಟಂಪ್ಡ್ ಪಂತ್‌ ಬಿ ಕುಲದೀಪ್‌ 3
ಎಂ. ಅಗರ್ವಾಲ್‌ ಬಿ ಪಟೇಲ್‌ 0
ಜಿತೇಶ್‌ ಶರ್ಮ ಸಿ ವಾರ್ನರ್‌ ಬಿ ಠಾಕೂರ್ 44
ಹರ್‌ಪ್ರೀತ್‌ ಬ್ರಾರ್‌ ಬಿ ಕುಲದೀಪ್‌ 1
ರಿಶಿ ಧವನ್‌ ಬಿ ಪಟೇಲ್‌ 4
ರಾಹುಲ್‌ ಚಹರ್‌ ಔಟಾಗದೆ 25
ಕಾಗಿಸೊ ರಬಾಡ ಸಿ ಪೊವೆಲ್‌ ಬಿ ಠಾಕೂರ್ 6
ಅರ್ಷದೀಪ್‌ ಸಿಂಗ್‌ ಔಟಾಗದೆ 2 ಇತರ: 6
ಒಟ್ಟು (20 ಓವರ್‌ಗಳಲ್ಲಿ 9 ವಿಕೆಟಿಗೆ) 142
ವಿಕೆಟ್‌ ಪತನ: 1-38, 2-53, 3-54, 4-55, 5-61, 6-67, 7-82, 8-123, 9-131
ಬೌಲಿಂಗ್‌: ಖಲೀಲ್‌ ಅಹ್ಮದ್‌ 4-0-43-0
ಆ್ಯನ್ರಿಚ್‌ ನೋರ್ಜೆ 4-0-29-1
ಲಲಿತ್‌ ಯಾದವ್‌ 1-0-6-0
ಶಾರ್ದೂಲ್ ಠಾಕೂರ್ 4-0-36-4
ಅಕ್ಷರ್‌ ಪಟೇಲ್‌ 4-0-14-2
ಕುಲದೀಪ್‌ ಯಾದವ್‌ 3-0-14-2
ಪಂದ್ಯಶ್ರೇಷ್ಠ: ಶಾರ್ದೂಲ್ ಠಾಕೂರ್

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.