ಮುಂಬೈ ಕೈಯಲ್ಲಿ ಚೆನ್ನೈ ಭವಿಷ್ಯ; ಸೋತರೆ ಅಧಿಕೃತವಾಗಿ ಹೊರಬೀಳಲಿದೆ ಧೋನಿ ಟೀಮ್‌


Team Udayavani, May 12, 2022, 6:45 AM IST

thumb 3

ಮುಂಬಯಿ: ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ 9 ಸೋಲುಂಡು 2022ರ ಐಪಿಎಲ್‌ನಿಂದ ಹೊರಬಿದ್ದಾಗಿದೆ.

ಐಪಿಎಲ್‌ನ ದ್ವಿತೀಯ ಯಶಸ್ವಿ ತಂಡವಾದ ಚೆನ್ನೈ ಸೂಪರ್‌ ಕಿಂಗ್ಸ್‌ ಹಗ್ಗದ ಮೇಲಲ್ಲ, ನೂಲಿನ ಮೇಲೆ ಸರ್ಕಸ್‌ ಮಾಡುತ್ತಿದೆ. ಒಂದು ಪಂದ್ಯದಲ್ಲಿ ಎಡವಿದರೂ ಅಧಿಕೃತವಾಗಿ ನಿರ್ಗಮಿಸಲಿದೆ. ಸದ್ಯ ಧೋನಿ ಪಡೆಯ ಭವಿಷ್ಯ ಮುಂಬೈ ಕೈಯಲ್ಲಿದೆ. ಇತ್ತಂಡಗಳು ಗುರುವಾರ ದ್ವಿತೀಯ ಸುತ್ತಿನ ಸೆಣಸಾಟಕ್ಕೆ ಇಳಿಯಲಿವೆ.

ಮುಂಬೈಗೆ ಹೋಲಿಸಿದರೆ ಚೆನ್ನೈ ಸಾಧನೆ ಸ್ವಲ್ಪವೇ ಮೇಲ್ಮಟ್ಟದಲ್ಲಿದೆ. 11ರಲ್ಲಿ 4 ಪಂದ್ಯಗಳನ್ನು ಗೆದ್ದಿದೆ. ಆದರೆ ಚೆನ್ನೈ ಗೆಲುವಿನ ಆಟ ಬಹಳ ವಿಳಂಬವಾಗಿ ಮೊದಲ್ಗೊಂಡಿತು. ನಂಬುಗೆಯ ಆಟಗಾರರೆಲ್ಲ ತಡವಾಗಿ ಫಾರ್ಮ್ ಕಂಡುಕೊಂಡರು. ಇನ್ನು ಕೆಲವರು ಲೆಕ್ಕದ ಭರ್ತಿಯ ಆಟಗಾರರಾಗಿಯೇ ಉಳಿದುಕೊಂಡರು. ಈ ನಡುವೆ ನಾಯಕತ್ವ ಹಸ್ತಾಂತರಗೊಂಡಿತು. ಧೋನಿ ಮಿಶ್ರ ಫಲ ಅನುಭವಿಸಿದರು.

ಯಾವತ್ತೋ ಹೊರಬೀಳಬೇಕಾಗಿದ್ದ ಚೆನ್ನೈ ಇನ್ನೂ ಉಸಿರಾಡುತ್ತಿರುವುದೇ ಒಂದು ಅಚ್ಚರಿ.

ಮುಂಬೈಗೆ ಸೇಡಿನ ಪಂದ್ಯ
ಮುಂಬೈ ಎದುರಿನ ಮೊದಲ ಸುತ್ತಿನ ಪಂದ್ಯದಲ್ಲಿ ಧೋನಿ ಬೆಸ್ಟ್‌ ಫಿನಿಶರ್‌ ಪಾತ್ರ ವಹಿಸಿ ಚೆನ್ನೈಗೆ 3 ವಿಕೆಟ್‌ಗಳ ರೋಮಾಂಚಕಾರಿ ಗೆಲುವನ್ನು ತಂದಿತ್ತಿದ್ದರು. ಮನಸ್ಸು ಮಾಡಿದರೆ ಮುಂಬೈ ಇದಕ್ಕೆ ಸೇಡು ತೀರಿಸಿಕೊಂಡು ಧೋನಿ ಪಡೆಯನ್ನು ತನ್ನ ಕೈಯಿಂದಲೇ ಕೂಟದಿಂದ ಹೊರದಬ್ಬಬಹುದು. ಆದರೆ ಮುಂಬೈ ಅವಸ್ಥೆ ಹೇಳತೀರದು. ಹೇಗೋ ಮಾಡಿ ಉಳಿದ 3 ಪಂದ್ಯಗಳನ್ನು ಆಡಿ ಮುಗಿಸಿದರೆ ಸಾಕು ಎಂಬಂತಿದೆ ರೋಹಿತ್‌ ಬಳಗದ ಸ್ಥಿತಿ!

ಗಂಭೀರವಾಗಿ ಆಡಿದ್ದೇ ಆದಲ್ಲಿ ಕಳೆದ ಪಂದ್ಯದಲ್ಲಿ ಕೋಲ್ಕತಾವನ್ನು ಹೊರದಬ್ಬುವ ಅವಕಾಶ ಮುಂಬೈ ಮುಂದಿತ್ತು. ತಾನು ಬೇಗ ನಿರ್ಗಮಿಸಿದ್ದಕ್ಕೆ ಪ್ರತಿಫಲವಾಗಿ ಉಳಿದ ತಂಡಗಳ ಪಾಲಿಗೆ ಕಂಟಕವಾಗಿ ಕಾಡುವ ಮೂಲಕ ಸುದ್ದಿಯಲ್ಲಿರಬಹುದಿತ್ತು. ಆದರೆ ಮುಂಬೈ 113ಕ್ಕೆ ಆಲೌಟಾಗಿ ತಾನೇ ಹಳ್ಳಕ್ಕೆ ಬಿತ್ತು. ಕೋಲ್ಕತಾಕ್ಕೆ ಲೈಫ್‌ ಕೊಟ್ಟಿತು. ವಿಳಂಬವಾಗಿ ಫಾರ್ಮ್ ಗೆ ಮರಳಿ 5 ವಿಕೆಟ್‌ ಉಡಾಯಿಸಿದ ಬುಮ್ರಾ ಸಾಧನೆ ವ್ಯರ್ಥಗೊಂಡಿತು. ಇನ್ನೀಗ ಚೆನ್ನೈಯನ್ನು ಹೊರದಬ್ಬಲು ಮುಂಬೈಯಿಂದ ಸಾಧ್ಯವೇ ಎಂಬ ಪ್ರಶ್ನೆ ಕಾಡದೇ ಇರದು.

ಜೋಶ್‌ ತೋರೀತೇ ಚೆನ್ನೈ?
ಚೆನ್ನೈ ಕೊನೆಯ ಪಂದ್ಯದಲ್ಲಿ ಡೆಲ್ಲಿಯನ್ನು 91 ರನ್ನುಗಳ ಭಾರೀ ಅಂತರದಿಂದ ಪರಾಭವಗೊಳಿಸಿ ಪರಾಕ್ರಮವೊಂದನ್ನು ತೋರ್ಪಡಿಸಿದೆ. ಧೋನಿ ವರ್ಸಸ್‌ ಪಂತ್‌ ಮುಖಾಮುಖಿ ಇದಾಗಿತ್ತು. ಚೆನ್ನೈ 6ಕ್ಕೆ 208 ರನ್‌ ಪೇರಿಸಿದರೆ, ಡೆಲ್ಲಿ 117ಕ್ಕೆ ಗಂಟುಮೂಟೆ ಕಟ್ಟಿತ್ತು. ಚೆನ್ನೈ ಇದೇ ಜೋಶ್‌ನಲ್ಲಿದ್ದರೆ ಮುಂಬೈಗೆ ಅಪಾಯ ತಪ್ಪಿದ್ದಲ್ಲ. ಆಗ ಧೋನಿ ಪಡೆ ಇನ್ನೂ ಕೆಲವು ದಿನ ರೇಸ್‌ನಲ್ಲಿರಬಹುದು.

ಆಲ್‌ರೌಂಡರ್‌ ರವೀಂದ್ರ ಜಡೇಜ ಗಾಯಾಳಾಗಿ ಕೂಟದಿಂದ ಹೊರಬಿದ್ದಿರುವುದರಿಂದ ಚೆನ್ನೈಗೆ ನಷ್ಟವೇನೂ ಇಲ್ಲ. ಅವರು ಈ ಕೂಟದಲ್ಲಿ ಸಾಧಿಸಿದ್ದು ಅಷ್ಟರಲ್ಲೇ ಇದೆ. ಸದ್ಯ ಚಾಲ್ತಿಯಲ್ಲಿರುವ ಆಟಗಾರನೆಂದರೆ ಕಿವೀಸ್‌ ಆರಂಭಕಾರ ಡೇವನ್‌ ಕಾನ್ವೆ. ಅವರು ಸತತ 3 ಅರ್ಧ ಶತಕ ಬಾರಿಸಿ ತಂಡಕ್ಕೆ ಹೊಸ ದಾರಿಯೊಂದನ್ನು ಕಲ್ಪಿಸಿದ್ದಾರೆ.

ಮೊಯಿನ್‌ ಅಲಿ ಕೂಡ ಫಾರ್ಮ್ ಗೆ ಮರಳಿದ್ದಾರೆ. ಯುವ ಬೌಲರ್‌ಗಳಾದ ಮುಕೇಶ್‌ ಚೌಧರಿ, ಸಿಮ್ರನ್‌ಜಿತ್‌ ಸಿಂಗ್‌, ಲಂಕೆಯ ಮಹೀಶ್‌ ತೀಕ್ಷಣ ಮತ್ತೆ ಹರಿತವಾದ ದಾಳಿ ಸಂಘಟಿಸಿದರೆ ಚೆನ್ನೈ ಮೇಲುಗೈಯನ್ನು ನಿರೀಕ್ಷಿಸಬಹುದು.

ಧೋನಿ ಸಾಹಸದಲ್ಲಿ ಗೆದ್ದ ಚೆನ್ನೈ
ಇತ್ತಂಡಗಳ ಮೊದಲ ಸುತ್ತಿನ ಪಂದ್ಯ ಅತ್ಯಂತ ರೋಚಕವಾಗಿ ಸಾಗಿತ್ತು. ಜೈದೇವ್‌ ಉನಾದ್ಕತ್‌ ಅವರ ಅಂತಿಮ ಓವರ್‌ನಲ್ಲಿ 17 ರನ್‌ ತೆಗೆಯುವ ಸವಾಲನ್ನು ಧೋನಿ ದಿಟ್ಟ ರೀತಿಯಲ್ಲಿ ಸ್ವೀಕರಿಸಿ, ಲಾಸ್ಟ್‌ ಬಾಲ್‌ ಫೋರ್‌ ಮೂಲಕ ಚೆನ್ನೈಗೆ 3 ವಿಕೆಟ್‌ಗಳ ಅಮೋಘ ಗೆಲುವನ್ನು ತಂದಿತ್ತಿದ್ದರು. ಮುಂಬೈ ಸೋಲು ಸತತ 7 ಪಂದ್ಯಗಳಿಗೆ ವಿಸ್ತರಿಸಲ್ಪಟ್ಟಿತ್ತು.

ಡ್ವೇನ್‌ ಪ್ರಿಟೋರಿಯಸ್‌ ಮೊದಲ ಎಸೆತಕ್ಕೆ ಔಟಾಗಿದ್ದರು. ಬ್ರಾವೊಗೆ ಗಳಿಸಲು ಸಾಧ್ಯವಾದದ್ದು ಒಂದು ರನ್‌ ಮಾತ್ರ. ಉಳಿದ 4 ಎಸೆತಗಳಿಂದ 16 ರನ್‌ ಬಾರಿಸುವ ಸವಾಲು ಚೆನ್ನೈ ಮುಂದಿತ್ತು. ಧೋನಿ 6, 4, 2, 4 ರನ್‌ ಸಿಡಿಸುವ ಮೂಲಕ ಮುಂಬೈಗೆ ಮರ್ಮಾಘಾತವಿಕ್ಕಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದರೂ ತಾನಿನ್ನೂ ಬೆಸ್ಟ್‌ ಫಿನಿಶರ್‌ ಆಗಿಯೇ ಉಳಿದಿದ್ದೇನೆ ಎಂಬುದನ್ನು ಧೋನಿ ಸಾಧಿಸಿ ತೋರಿಸಿದ್ದರು!

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.