ಗುಜರಾತ್‌ಗೆ ಪಂಚ್‌ ಕೊಟ್ಟೀತೇ ಪಂಜಾಬ್‌? ; ಗೆದ್ದರೆ ಗುಜರಾತ್‌ ಪ್ಲೇ ಆಫ್ ಖಾತ್ರಿ

ಸೋತರೆ ಪಂಜಾಬ್‌ಗೆ ಕಂಟಕ

Team Udayavani, May 3, 2022, 8:00 AM IST

ಗುಜರಾತ್‌ಗೆ ಪಂಚ್‌ ಕೊಟ್ಟಿàತೇ; ಗೆದ್ದರೆ ಗುಜರಾತ್‌ ಪ್ಲೇ ಆಫ್ ಖಾತ್ರಿ

ನವೀ ಮುಂಬಯಿ: ಐಪಿಎಲ್‌ ಪದಾರ್ಪಣೆಯಲ್ಲೇ ಅಮೋಘ ಪ್ರದರ್ಶನ ಕಾಯ್ದುಕೊಂಡು ಬಂದಿರುವ ಗುಜರಾತ್‌ ಟೈಟಾನ್ಸ್‌ ಮಂಗಳವಾರ ಹೊಸ ಎತ್ತರಕ್ಕೆ ಏರುವ ಸಾಧ್ಯತೆಯೊಂದರ ನಿರೀಕ್ಷೆಯಲ್ಲಿದೆ.

ಪಂಜಾಬ್‌ ಕಿಂಗ್ಸ್‌ ವಿರುದ್ಧ ಆಡಲಾಗುವ ಈ ಪಂದ್ಯವನ್ನು ಗೆದ್ದರೆ ಹಾರ್ದಿಕ್‌ ಪಾಂಡ್ಯ ಬಳಗ ಪ್ಲೇ ಆಫ್ಗೆ ಇನ್ನಷ್ಟು ಹತ್ತಿರವಾಗಲಿದೆ.

ಇನ್ನೊಂದೆಡೆ ಪಂಜಾಬ್‌ ಹಾದಿ ಕಠಿನಗೊಳ್ಳಲಿದೆ. ಎಂಥದೇ ಕಠಿನ ಸನ್ನಿವೇಶದಲ್ಲೂ ಎದುರಾಳಿಗೆ ತಿರುಗೇಟು ನೀಡಿ ಗೆದ್ದು ಬರುವ ಅಥವಾ ಎದುರಾಳಿ ಗೆಲುವನ್ನು ಕಸಿಯುವ ಅದೃಷ್ಟಶಾಲಿ ತಂಡ ಈ ಗುಜರಾತ್‌ ಟೈಟಾನ್ಸ್‌. ಆಡಿದ 9 ಪಂದ್ಯಗಳಲ್ಲಿ ಸೋತದ್ದು ಒಂದರಲ್ಲಿ ಮಾತ್ರ. ಹೊಂದಿರುವ ಅಂಕ 16. ರನ್‌ರೇಟ್‌ +0.377. ಇನ್ನೂ 5 ಪಂದ್ಯಗಳನ್ನು ಆಡಲಿಕ್ಕಿದೆ. ಹೀಗಾಗಿ ಗುಜರಾತ್‌ ಒತ್ತಡ ಮುಕ್ತ ತಂಡ. ಇದೇ ಖುಷಿ ಹಾಗೂ ಜೋಶ್‌ನಲ್ಲಿ ಪಂಜಾಬ್‌ ಮೇಲೆ ಸವಾರಿ ಮಾಡುವ ಸಿದ್ಧತೆಯಲ್ಲಿದೆ.

ಪಂಜಾಬ್‌ಗ ಜಯ ಅನಿವಾರ್ಯ
ಇನ್ನೊಂದೆಡೆ ಪಂಜಾಬ್‌ ಕಿಂಗ್ಸ್‌ 9 ಪಂದ್ಯಗಳಲ್ಲಿ ನಾಲ್ಕನ್ನಷ್ಟೇ ಜಯಿಸಿದೆ. ಗುಜರಾತ್‌ ಎದುರಿನ ಮೊದಲ ಸುತ್ತಿನ ಪಂದ್ಯವನ್ನು ಅಂತಿಮ ಎಸೆತದಲ್ಲಿ ಕಳೆದುಕೊಂಡಿದೆ. ಮತ್ತೆ ಸೋತರೆ ಮಾಯಾಂಕ್‌ ಅಗರ್ವಾಲ್‌ ಪಡೆಯ ಪ್ಲೇ ಆಫ್ ಪ್ರವೇಶಕ್ಕೆ ಭಾರೀ ಹೊಡೆತ ಬೀಳಲಿದೆ. ಹೀಗಾಗಿ ಪಂಜಾಬ್‌ಗ ಇಲ್ಲಿ ಗೆಲುವು ಅನಿವಾರ್ಯ. ಅಷ್ಟೇ ಅಲ್ಲ, ಮುಂದಿನೆಲ್ಲ ಪಂದ್ಯಗಳಲ್ಲೂ ಜಯ ಸಾಧಿಸುತ್ತ ಹೋಗಬೇಕಿದೆ.

ನಾಯಕ ಮಾಯಾಂಕ್‌ ಅಗರ್ವಾಲ್‌, ಶಿಖರ್‌ ಧವನ್‌, ಜಾನಿ ಬೇರ್‌ಸ್ಟೊ, ಲಿಯಮ್‌ ಲಿವಿಂಗ್‌ಸ್ಟೋನ್‌ ಅವರಂಥ ಸ್ಟಾರ್‌ ಆಟಗಾರರನ್ನು ಹೊಂದಿಯೂ ಪಂಜಾಬ್‌ ಇನ್ನೂ ನಿರೀಕ್ಷಿತ ಎತ್ತರ ತಲುಪಿಲ್ಲ. ಕಳೆದ ಪಂದ್ಯದಲ್ಲಿ ಲಕ್ನೋವನ್ನು 153ಕ್ಕೆ ನಿಯಂತ್ರಿಸಿದರೂ ಇದನ್ನು ಬೆನ್ನಟ್ಟಿ ಗೆಲ್ಲಲಾಗದಿದ್ದುದು ಪಂಜಾಬ್‌ ಅವಸ್ಥೆಗೆ ಸಾಕ್ಷಿ.
ರಬಾಡ, ಆರ್ಷದೀಪ್‌, ಸಂದೀಪ್‌, ರಿಷಿ ಧವನ್‌, ರಾಹುಲ್‌ ಚಹರ್‌ ಅವರನ್ನೊಳಗೊಂಡ ಪಂಜಾಬ್‌ ಬೌಲಿಂಗ್‌ ಪರವಾಗಿಲ್ಲ ಎಂಬ ಮಟ್ಟದಲ್ಲಿದೆ. ಆದರೆ ಬಲಿಷ್ಠ ಬ್ಯಾಟಿಂಗ್‌ ಲೈನ್‌ಅಪ್‌ ಹೊಂದಿರುವ ಹಾಗೂ ಉತ್ತಮ ಲಯದಲ್ಲಿರುವ ಗುಜರಾತ್‌ಗೆ ನಿಯಂತ್ರಣ ಹೇರುವುದು ಸುಲಭವಲ್ಲ. ಆರ್‌ಸಿಬಿ ಎದುರಿನ ಕಳೆದ ಪಂದ್ಯದ 171 ರನ್‌ ಗುರಿಯನ್ನು ಗುಜರಾತ್‌ ನಾಲ್ಕೇ ವಿಕೆಟ್‌ ನಷ್ಟದಲ್ಲಿ ಸಾಧಿಸಿತ್ತು.

ಗುಜರಾತ್‌ ವೈಭವ: ಸಾಹಾ, ಗಿಲ್‌, ಪಾಂಡ್ಯ, ಮಿಲ್ಲರ್‌, ತೆವಾಟಿಯಾ, ರಶೀದ್‌ ಖಾನ್‌ ಅವರೆಲ್ಲ ಒತ್ತಡವನ್ನು ಮೀರಿ ನಿಂತ ಆಟಗಾರರೆಂಬುದನ್ನು ಸಾಬೀತುಪಡಿಸಿದ್ದಾರೆ. ಇವರಲ್ಲಿ ಮ್ಯಾಥ್ಯೂ ವೇಡ್‌ ಬದಲು ಬಂದ ಸಾಹಾ ಅವಕಾಶವನ್ನು ಬಾಚಿಕೊಳ್ಳುತ್ತಿದ್ದಾರೆ. ನಾಯಕ ಪಾಂಡ್ಯ ಯಾವ ಕ್ರಮಾಂಕದಲ್ಲೂ ಬ್ಯಾಟ್‌ ಬೀಸಲು ಸೈ ಎಂಬುದನ್ನು ಸಾಬೀತುಪಡಿಸಿದ್ದಾರೆ. ಕೂಟದ ಬೆಸ್ಟ್‌ ಫಿನಿಶರ್‌ಗಳಾದ ಮಿಲ್ಲರ್‌, ತೆವಾಟಿಯಾ, ರಶೀದ್‌ ಒಂದೇ ತಂಡದಲ್ಲಿರುವುದು ಗುಜರಾತ್‌ ವೈಭವವನ್ನು ತೆರೆದಿಟ್ಟಿದೆ.

ಗುಜರಾತ್‌ ಬೌಲಿಂಗ್‌ ತೀರಾ ಘಾತಕವೇನಲ್ಲ. ಶಮಿ, ಫ‌ರ್ಗ್ಯುಸನ್‌, ಸಂಗ್ವಾನ್‌, ಜೋಸೆಫ್, ಆರೋನ್‌ ಇಲ್ಲಿನ ಪ್ರಮುಖರು. ಇವರಲ್ಲಿ ರಶೀದ್‌ ಖಾನ್‌ ಮೊದಲಿನ ಚಾರ್ಮ್ ಹೊಂದಿಲ್ಲ. ಇದರ ಲಾಭವೆತ್ತಿದರೆ ಪಂಜಾಬ್‌ಗ ಮೇಲುಗೈ ಸಾಧ್ಯ ಎನ್ನಬಹುದೋ ಏನೋ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.