IPL 2023: ಡೆಲ್ಲಿಗೆ ಮೂರನೇ ಪಂದ್ಯದಲ್ಲೂ ಸೋಲು ; ರಾಜಸ್ಥಾನ್ ಜಯಭೇರಿ

ಐಪಿಎಲ್‌ನಲ್ಲಿ 6000 ರನ್‌ಗಳನ್ನು ಪೂರ್ಣಗೊಳಿಸಿದ ಆಸೀಸ್ ದಿಗ್ಗಜ

Team Udayavani, Apr 8, 2023, 8:44 PM IST

1-w-qeqwe

ಗುವಾಹಟಿ: ಐಪಿಎಲ್ ನ ಶನಿವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್‌ಗಳಿಂದ ಸೋಲಿಸಿದೆ. ಡೆಲ್ಲಿ ಆಡಿದ ಮೂರೂ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ರಾಜಸ್ಥಾನ್ ಮೂರು ಪಂದ್ಯಗಳಲ್ಲಿ ಎರಡನೇ ಜಯ ತನ್ನದಾಗಿಸಿಕೊಂಡಿತು.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.
ಬ್ಯಾಟಿಂಗ್‌ಗೆ ಇಳಿದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 199 ರನ್ ಗಳಿಸಿತು. ಇನ್ನಿಂಗ್ಸ್ ಆರಂಭಿಸಿದ ಯುವ ಬ್ಯಾಟ್ಸ್ ಮ್ಯಾನ್ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಕೇವಲ 8.3 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 98 ರನ್‌ಗಳನ್ನು ಕಲೆ ಹಾಕುವ ಮೂಲಕ ಆರ್‌ಆರ್‌ ಅತ್ಯಮೋಘ ಆರಂಭವನ್ನು ನೀಡಿದರು.

ಜೈಸ್ವಾಲ್ 31 ಎಸೆತಗಳಲ್ಲಿ 60 ರನ್ ಗಳಿಸಿದರೆ, ಅನುಭವಿ ಬಟ್ಲರ್ 51 ಎಸೆತಗಳಲ್ಲಿ 79 ರನ್ ಗಳಿಸಿದರು. ನಂತರ ಶಿಮ್ರಾನ್ ಹೆಟ್ಮೆಯರ್ 21 ಎಸೆತಗಳಲ್ಲಿ 39 ರನ್ ಗಳಿಸಿ ಔಟಾಗದೆ ಉಳಿದರು. ಡೆಲ್ಲಿ ಪರ ಮುಖೇಶ್ ಕುಮಾರ್ 36 ರನ್‌ಗಳಿಗೆ ಎರಡು ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು.

ಟ್ರೆಂಟ್ ಬೌಲ್ಟ್ ಬೌಲ್ ಮಾಡಿದ ಮೊದಲ ಓವರ್‌ನಲ್ಲಿ ಡೆಲ್ಲಿ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತು, ನಾಲ್ಕು ಓವರ್‌ಗಳಲ್ಲಿ ಬೌಲ್ಟ್ 3/29 ರ ಅತ್ಯುತ್ತಮ ಪ್ರದರ್ಶನ ತೋರಿದರು.

ಪ್ರತ್ಯುತ್ತರವಾಗಿ ಡೆಲ್ಲಿ ಒಂಬತ್ತು ವಿಕೆಟ್‌ಗೆ 142 ರನ್‌ಗಳಿಗೆ ಸೀಮಿತವಾಗಿ ಸೋಲು ಅನುಭವಿಸಿತು. ಡೆಲ್ಲಿ ಪರ ನಾಯಕ ವಾರ್ನರ್ 49 ಎಸೆತಗಳಲ್ಲಿ 61 ರನ್ ಗಳಿಸಿದರು. ಐಪಿಎಲ್‌ನಲ್ಲಿ ಆಸೀಸ್ ದಿಗ್ಗಜ 6000 ರನ್‌ಗಳನ್ನು ಪೂರ್ಣಗೊಳಿಸಿದರು.  ಲಲಿತ್ ಯಾದವ್ 38 ರನ್, ರಿಲೀ ರೋಸೌ 14 ರನ್ ಹೊರತು ಪಡಿಸಿದರೆ ಉಳಿದ ಆಟಗಾರರು ಒಂದಂಕಿ ದಾಟಲಿಲ್ಲ.

ಸಂಕ್ಷಿಪ್ತ ಸ್ಕೋರ್

ರಾಜಸ್ಥಾನ್ ರಾಯಲ್ಸ್: 20 ಓವರ್‌ಗಳಲ್ಲಿ 4 ವಿಕೆಟ್‌ಗೆ 199 (ಯಶಸ್ವಿ ಜೈಸ್ವಾಲ್ 60, ಜೋಸ್ ಬಟ್ಲರ್ 79, ಶಿಮ್ರಾನ್ ಹೆಟಿಮರ್ ಔಟಾಗದೆ 39; ಮುಖೇಶ್ ಕುಮಾರ್ 2/36).

ಡೆಲ್ಲಿ ಕ್ಯಾಪಿಟಲ್ಸ್: 20 ಓವರ್‌ಗಳಲ್ಲಿ 9 ವಿಕೆಟ್‌ಗೆ 142 (ಡೇವಿಡ್ ವಾರ್ನರ್ 65, ಟ್ರೆಂಟ್ ಬೌಲ್ಟ್ 3/29).

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.