IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

ಪಂಜಾಬ್‌ ವಿರುದ್ದ ಗೆದ್ದು ಹಾದಿ ಸಲೀಸು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಚೆನ್ನೈ

Team Udayavani, May 1, 2024, 7:46 AM IST

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

ಚೆನ್ನೈ: ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನ 3ನೇ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳುವ ಅಥವಾ ಇನ್ನೊಂದು ಮೆಟ್ಟಿಲು ಮೇಲೇರುವ ಯೋಜನೆಯೊಂದಿಗೆ ಬುಧವಾರ ತವರಲ್ಲಿ ಪಂಜಾಬ್‌ ಕಿಂಗ್ಸ್‌ಗೆ ಸವಾಲೊಡ್ಡಲಿದೆ.

ಪಂಜಾಬ್‌ ವಿಶ್ವದಾಖಲೆಯ ಚೇಸಿಂಗ್‌ ಮೂಲಕ ಒಮ್ಮೆಲೇ ಸುದ್ದಿಗೆ ಬಂದ ತಂಡ. ಕಳೆದ ಈಡನ್‌ ಗಾರ್ಡನ್‌ ಹಣಾಹಣಿಯಲ್ಲಿ ಆತಿಥೇಯ ಕೋಲ್ಕತ್ತಾ ವಿರುದ್ಧ ಚೇಸಿಂಗ್‌ ವೇಳೆ ಎರಡೇ ವಿಕೆಟಿಗೆ 262 ರನ್‌ ಬಾರಿಸಿ ಗೆದ್ದ ಅಸಾಮಾನ್ಯ ಸಾಹಸ ಪಂಜಾಬ್‌ನದ್ದಾಗಿದೆ. ಆದರೆ ಇದೂ ಸೇರಿದಂತೆ 9 ಪಂದ್ಯಗಳಲ್ಲಿ ಪಂಜಾಬ್‌ ಗೆದ್ದದ್ದು 3 ಮಾತ್ರ. ಸದ್ಯ ಪಂಜಾಬ್‌ 8ನೇ ಸ್ಥಾನದಲ್ಲಿದೆ. ಇಲ್ಲಿಂದ ಮೇಲೇರಬೇಕಾದರೆ ಚೆನ್ನೈ ವಿರುದ್ಧವೂ ಇಂಥದೇ ಪ್ರದರ್ಶವನ್ನು ಪುನರಾವರ್ತಿಸಬೇಕಾದುದು ಅನಿವಾರ್ಯ.

ಇತ್ತ ಚೆನ್ನೈ ಕೂಡ ತವರಿನಂಗಳದಲ್ಲಿ ಗೆಲುವಿನ ಹಳಿ ಏರಿದೆ. ಕಳೆದ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ ಹೈದರಾಬಾದ್‌ ವಿರುದ್ಧ 78 ರನ್ನುಗಳ ಅಧಿಕಾರಯುತ ಜಯ ಸಾಧಿಸಿದೆ. ನಾಯಕ ಋತುರಾಜ್‌ ಗಾಯಕ್ವಾಡ್‌ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಕಳೆದೆರಡು ಪಂದ್ಯಗಳಲ್ಲಿ 108 ಮತ್ತು 98 ರನ್‌ ಬಾರಿಸಿದ ಪರಾಕ್ರಮ ಇವರದು. ಆದರೆ ಇವರ ಜತೆಗಾರ ಅಜಿಂಕ್ಯ ರಹಾನೆ ಫಾರ್ಮ್ನಲ್ಲಿಲ್ಲ. ಹೀಗಾಗಿ ರಚಿನ್‌ ರವೀಂದ್ರ ಮರಳಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯೊಂದಿದೆ. ಡ್ಯಾರಿಲ್‌ ಮಿಚೆಲ್‌, ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಖುಷಿಯಲ್ಲಿರುವ ಶಿವಂ ದುಬೆ ಮೇಲೆ ನಂಬಿಕೆ ಇಡಬಹುದಾಗಿದೆ.

ಅಂಕಣಗುಟ್ಟು

ಚೆನ್ನೈನ ಎಂ.ಎ.ಚಿದಂಬರಂ ಮೈದಾನ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುವ ಪಿಚ್‌. ಆದರೆ ಬ್ಯಾಟರ್‌ಗಳೂ ಇಲ್ಲಿ ಅನುಕೂಲ ಪಡೆಯಬಹುದು. ಇಲ್ಲಿ ಮೊದಲ ಇನಿಂಗ್ಸ್‌ ಸರಾಸರಿ ಸ್ಕೋರ್‌ 174 ಇದ್ದರೆ, ದ್ವಿತೀಯ ಇನಿಂಗ್ಸ್‌ ಸರಾಸರಿ ರನ್‌ 149 ಇದೆ. ಟಾಸ್‌ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್‌ ಆಯ್ದುಕೊಳ್ಳುವುದು ಉತ್ತಮ ಎಂದು ವಿಶ್ಲೇಷಿಸಲಾಗಿದೆ. ಈ ಮೈದಾನದಲ್ಲಿನ ಹಿಂದಿನ ಪಂದ್ಯದಲ್ಲಿ 212 ರನ್‌ ಬಾರಿಸಿದ್ದ ಚೆನ್ನೈ, ಹೈದ್ರಾಬಾದ್‌ ವಿರುದ್ಧ 78 ರನ್‌ಗಳಿಂದ ಗೆದ್ದಿತ್ತು.

ಸಂಭಾವ್ಯ ತಂಡಗಳು

ಚೆನ್ನೈ: ರಹಾನೆ, ಋತುರಾಜ್‌, ಮಿಚೆಲ್‌, ದುಬೆ, ಜಡೇಜ, ಮೊಯೀನ್‌, ಧೋನಿ, ದೀಪಕ್‌, ತುಷಾರ್‌, ಮುಸ್ತಫಿಜುರ್‌, ಮತೀಶ.

ಪಂಜಾಬ್‌: ಬೇರ್‌ಸ್ಟೋ, ಪ್ರಭ್‌ಸಿಮ್ರನ್‌, ರಾಸ್ಸೋ, ಕರನ್‌, ಜಿತೇಶ್‌, ಶಶಾಂಕ್‌, ಆಶುತೋಷ್‌, ರಾಹುಲ್‌, ಹರಪ್ರೀತ್‌, ಹರ್ಷಲ್‌, ರಬಾಡ.

ಟಾಪ್ ನ್ಯೂಸ್

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.