IPL 2024; ಈ ಬಾರಿಯ ಕೂಟಕ್ಕೆ ಹೊಸ ನಿಯಮಗಳನ್ನು ಪರಿಚಯಿಸಿದ ಬಿಸಿಸಿಐ


Team Udayavani, Mar 22, 2024, 5:58 PM IST

new rules of ipl 2024

ಚೆನ್ನೈ: 17ನೇ ಸೀಸನ್ ನ ಐಪಿಎಲ್ ಕೂಟವು ಇನ್ನು ಕೆಲವೇ ಕ್ಷಣಗಳಲ್ಲಿ ಚೆನ್ನೈನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಪ್ರತಿಬಾರಿ ನವೀನತೆಯನ್ನು ಪರಿಚಯಿಸುವ ಬಿಸಿಸಿಐ ಈ ಬಾರಿಯೂ ಹೊಸತನಕ್ಕೆ ಮುಂದಾಗಿದೆ.

ಈ ಬಾರಿಯ ಕೂಟಕ್ಕೆ ಬಿಸಿಸಿಐ ಕೆಲವು ನಿಯಮ ಬದಲಾವಣೆ ಮಾಡಿದೆ. ಅದರಲ್ಲಿ ಪ್ರಮುಖವಾಗಿರುವುದು ಪ್ರತಿ ಓವರ್ ಗೆ ಎರಡು ಬೌನ್ಸರ್ ಎಸೆಯುವ ಅವಕಾಶ.

ಹೌದು, ಈ ಬಾರಿ ಐಪಿಎಲ್ ನಲ್ಲಿ ಎರಡು ಬೌನ್ಸರ್ ನಿಯಮ ಅಳವಡಿಸಲಾಗಿದೆ. ಇದುವರೆಗೆ ಟಿ20ಯಲ್ಲಿ ಪ್ರತಿ ಓವರ್ ಗೆ ಒಂದು ಬೌನ್ಸರ್ ಎಸೆಯಲು ಮಾತ್ರ ಅವಕಾಶವಿತ್ತು. ಎರಡನೇ ಬೌನ್ಸರ್ ಎಸೆದರೆ ಅದನ್ನು ನೋ ಬಾಲ್ ಎಂದು ಪರಿಗಣಿಸಲಾಗುತ್ತಿತ್ತು. ಈ ನಿಯಮವನ್ನು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಯಶಸ್ವಿ ಪ್ರಯೋಗ ಮಾಡಲಾಗಿದೆ.

ಎರಡನೇ ಬೌನ್ಸರ್ ನಿಯಮದ ಜೊತೆಗೆ, ಐಪಿಎಲ್ 2024 ಸ್ಮಾರ್ಟ್ ರಿಪ್ಲೇ ಸಿಸ್ಟಮ್ ಪರಿಚಯ ಮಾಡಲಾಗುತ್ತಿದೆ. ಇದು ಅಂಪೈರಿಂಗ್ ನಿರ್ಧಾರಗಳನ್ನು ಉತ್ತಮಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿಸುತ್ತದೆ. ಮೈದಾನದ ಸುತ್ತಲೂ ಇರುವ ಎಂಟು ಹೈ-ಸ್ಪೀಡ್ ಹಾಕ್-ಐ ಕ್ಯಾಮೆರಾಗಳಿಂದ ನಡೆಸಲ್ಪಡುವ ಈ ವ್ಯವಸ್ಥೆಯು ಟಿವಿ ಅಂಪೈರ್‌ಗೆ ಸಹಾಯ ಮಾಡಲು ನೈಜ-ಸಮಯದ ಚಿತ್ರಗಳನ್ನು ಒದಗಿಸುತ್ತದೆ. ತ್ವರಿತ ಮತ್ತು ಹೆಚ್ಚು ನಿಖರವಾದ ತೀರ್ಪುಗಳನ್ನು ಇದರಿಂದ ನೀಡಲಾಗುತ್ತಿದೆ.

ಕಳೆದ ಬಾರಿ ಐಪಿಎಲ್ ನಲ್ಲಿ ಪರಿಚಯಿಸಲಾಗಿದ್ದ ಇಂಪಾಕ್ಟ್ ಪ್ಲೇಯರ್ ನಿಯಮವನ್ನು ಈ ಬಾರಿಯೂ ಮುಂದುವರಿಸಲಾಗುತ್ತಿದೆ.

ಐಪಿಎಲ್ 2024ರ ಪಂದ್ಯಗಳಲ್ಲಿ ಸ್ಟಂಪಿಂಗ್‌ ಗೆ ಥರ್ಡ್ ಅಂಪೈರ್ ರೆಫರಲ್ ಕೋರಿದಾಗ ಕ್ಯಾಚ್ ಕೂಡಾ ಪರಿಶೀಲಿಸುವ ನಿಬಂಧನೆಯನ್ನು ಇರಿಸಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಈ ತೀರ್ಪು ಐಸಿಸಿ ನಿಯಮಗಳಿಂದ ವಿರುದ್ದವಾಗಿದೆ. ಇತ್ತೀಚೆಗೆ ಬದಲಾದ ಐಸಿಸಿ ನಿಯಮದ ಪ್ರಕಾರ ಸ್ಟಂಪಿಂಗ್ ರೆಫರಲ್ ವೇಳೆ ಸ್ಟಂಪಿಂಗ್ ಮಾತ್ರ ಪರಿಶೀಲನೆ ಮಾಡಲಾಗುತ್ತದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೆಲವೇ ದಿನಗಳ ಹಿಂದೆ ಜಾರಿಯಾದ ಸ್ಟಾಪ್ ಕ್ಲಾಕ್ ನಿಯಮವನ್ನು ಐಪಿಎಲ್ ನಲ್ಲಿ ಅಳವಡಿಸದೇ ಇರಲು ಬಿಸಿಸಿಐ ತೀರ್ಮಾನಿಸಿದೆ. ಈ ನಿಯಮದ ಪ್ರಕಾರ ಪ್ರತಿ ಓವರ್ ಮುಗಿದ ಬಳಿಕ ಒಂದು ನಿಮಿಷದೊಳಗೆ ಮತ್ತೊಂದು ಓವರ್ ಆರಂಭಿಸಬೇಕು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.