IPL Auction: ಈ ಆಟಗಾರರ ಮೇಲೆ ಕಣ್ಣಿಟ್ಟಿವೆ ಹಲವು ಫ್ರಾಂಚೈಸಿಗಳು


Team Udayavani, Dec 5, 2023, 3:25 PM IST

IPL Auction: ಈ ಆಟಗಾರರ ಮೇಲೆ ಕಣ್ಣಿಟ್ಟಿವೆ ಹಲವು ಫ್ರಾಂಚೈಸಿಗಳು

ಮುಂಬೈ: ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ 2024ರ ಮಿನಿ ಹರಾಜು ನಡೆಯಲಿದೆ. ಡಿಸೆಂಬರ್ 19ರಂದು ದುಬೈನಲ್ಲಿ ಹರಾಜು ಕಾರ್ಯ ನಡೆಯಲಿದೆ. ಎಲ್ಲಾ ಹತ್ತು ಫ್ರಾಂಚೈಸಿಗಳು ಬಿಡುಗಡೆಯಾದ ಮತ್ತು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಈಗಾಗಲೇ ರಿಲೀಸ್ ಮಾಡಿವೆ.

ಪ್ರತಿ ತಂಡಕ್ಕೆ ಅಂತಿಮ ಪರ್ಸ್ ಅನ್ನು ಬಿಡುಗಡೆ ಮಾಡಿದ ಆಟಗಾರರಿಂದ ಉತ್ಪತ್ತಿಯಾಗುವ ಹಣ ಮತ್ತು 2023 ರ ಹರಾಜಿನ ಖರ್ಚು ಮಾಡದ ಪರ್ಸ್‌ನಿಂದ ಉಳಿದ ಮೊತ್ತವನ್ನು ನಿರ್ಧರಿಸಲಾಗುತ್ತದೆ.

ಕೆಲವು ಆಟಗಾರರು ಈ ಬಾರಿಯ ಮಿನಿ ಹರಾಜಿನಲ್ಲಿ ಪ್ರಮುಖ ಪಾತ್ರ ವಹಿಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಕೆಲವು ಆಟಗಾರರು ಈ ಬಾರಿಯ ಹರಾಜಿನಲ್ಲಿ ಉತ್ತಮ ಬೆಲೆ ಪಡೆಯುವ ಸಾಧ್ಯತೆಯಿದೆ. ಈ ಆಟಗಾರರ ಪಟ್ಟಿ ಇಲ್ಲಿದೆ.

ಟ್ರಾವಿಸ್ ಹೆಡ್

ಆಸ್ಟ್ರೇಲಿಯಾದ ವಿಶ್ವಕಪ್ ಹೀರೋ ಟ್ರಾವಿಸ್ ಹೆಡ್ ಅವರು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳ ಹಾಟ್ ಫೇವರೇಟ್ ಆಗುವ ಸಾಧ್ಯತೆಯಿದೆ. ಸ್ಫೋಟಕ ಆರಂಭಿಕ ಆಟಗಾರನನ್ನು ಹುಡುಕುತ್ತಿರುವ ತಂಡಗಳು ಅವರನ್ನು ಪಡೆಯಲು ಹೆಚ್ಚು ಬಿಡ್ ಮಾಡಬಹುದು. ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ಗಾಗಿ ಹೋರಾಡುವ ತಂಡಗಳಾಗಿರಬಹುದು.

ರಚಿನ್ ರವೀಂದ್ರ

ನ್ಯೂಜಿಲ್ಯಾಂಡ್ ತಂಡದ ಹೊಸ ಬ್ಯಾಟಿಂಗ್ ಸೆನ್ಸೇಶನ್ ರಚಿನ್ ರವೀಂದ್ರ ಅವರು ಈ ಬಾರಿ ಹಲವು ತಂಡಗಳ ಲಿಸ್ಟ್ ನಲ್ಲಿದ್ದಾರೆ. ಸ್ಪಿನ್ ಬೌಲಿಂಗ್ ಮಾಡುವ ರಚಿನ್ ಗಾಗಿ ಹಲವು ಫ್ರಾಂಚೈಸಿಗಳು ಮುಗಿಬೀಳಲಿದ್ದಾರೆ.

ಮಿಚೆಲ್ ಸ್ಟಾರ್ಕ್

ಬಹಳ ಕಾಲದ ಬಳಿಕ ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಈ ಬಾರಿ ಐಪಿಎಲ್ ಆಡಲು ಸಿದ್ದರಾಗಿದ್ದಾರೆ. ಈ ಹಿಂದೆ ಆರ್ ಸಿಬಿ ಪರವಾಗಿ ಆಡಿದ್ದ ಸ್ಟಾರ್ಕ್ ಈ ಬಾರಿಯ ಹರಾಜಿನಲ್ಲಿ ಅತಿ ಹೆಚ್ಚು ಹಣ ಪಡೆಯುವ ಆಟಗಾರರಲ್ಲಿ ಒಬ್ಬರು. ಹಲವು ತಂಡಗಳಿಗೆ ಬೌಲರ್ ನ ಅಗತ್ಯವಿದೆ. ಹೀಗಾಗಿ ಹಲವರು ಸ್ಟಾರ್ಕ್ ಹಿಂದೆ ಬೀಳಲಿದ್ದಾರೆ. ಆರ್ ಸಿಬಿ ಸಿರಾಜ್ ಹೊರತುಪಡಿಸಿ ತನ್ನ ಎಲ್ಲಾ ವೇಗಿಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ ಸ್ಟಾರ್ಕ್ ರನ್ನು ಮತ್ತೆ ಪಡೆಯಲು ಪ್ರಯತ್ನ ಮಾಡಬಹುದು. ಮುಂಬೈ ಇಂಡಿಯನ್ಸ್ ಅವರು ಜೋಫ್ರಾ ಆರ್ಚರ್ ಅವರನ್ನು ಬಿಡುಗಡೆ ಮಾಡಿರುವುದರಿಂದ ಸ್ಟಾರ್ಕ್ ರತ್ತ ಒಲವು ಹೊಂದಬಹುದು.

ಡ್ಯಾರೆಲ್ ಮಿಚೆಲ್

ನ್ಯೂಜಿಲ್ಯಾಂಡ್ ನ ಬಿಗ್ ಮ್ಯಾಚ್ ಆಟಗಾರ ಡ್ಯಾರೆಲ್ ಮಿಚೆಲ್ ಅವರು ಈ ಬಾರಿಯ ಹರಾಜಿನಲ್ಲಿ ಗಮನ ಸೆಳೆಯುವ ಮತ್ತೋರ್ವ ಆಟಗಾರ. ಟಿ20 ಆಟಕ್ಕೆ ಬೇಕಾದ ಕ್ವಾಲಿಟಿ ಹೊಂದಿರುವ ಮಿಚೆಲ್ ಅವರು ಪಂಜಾಬ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸಸ್ ಹೈದರಾಬಾದ್‌ ನಂತಹ ತಂಡಗಳಿಗೆ ಉತ್ತಮ ಆಯ್ಕೆಯಾಗಿದ್ದಾರೆ. ಮಿಚೆಲ್ ಅವರು ಉತ್ತಮ ಕ್ರಿಕೆಟಿಂಗ್ ಬ್ರೈನ್ ಹೊಂದಿರುವುದರಿಂದ ನಾಯಕತ್ವದ ಆಯ್ಕೆಯೂ ಹೌದು.

ಜೆರಾಲ್ಡ್ ಕೋಟ್ಜಿ

ದಕ್ಷಿಣ ಆಫ್ರಿಕಾದ ವೇಗಿ ಜೆರಾಲ್ಡ್ ಕೋಟ್ಜಿ ಈ ಬಾರಿಯ ಏಕದಿನ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಉತ್ತಮ ವೇಗಿಯಾಗಿರುವ ಜೆರಾಲ್ಡ್ ಕೋಟ್ಜಿ ಅವರು ಯಾವುದೇ ತಂಡಕ್ಕೆ ಉತ್ತಮ ಆಟಗಾರನಾಗಬಲ್ಲರು.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.