ಐಪಿಎಲ್ ಮೆಗಾ ಹರಾಜು ಪಟ್ಟಿಯಲ್ಲಿ ಪಶ್ಚಿಮ ಬಂಗಾಳ ಸಚಿವನ ಹೆಸರು!
Team Udayavani, Feb 1, 2022, 5:00 PM IST
ಮುಂಬೈ: ಮುಂದಿನ ಸೀಸನ್ ನ ಐಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) ನ ತಯಾರಿ ನಡೆಯುತ್ತಿದೆ. ಈ ಬಾರಿ ಮೆಗಾ ಹರಾಜು ನಡೆಯಲಿದ್ದು, ಇಂದು ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. 15ನೇ ಆವೃತ್ತಿಯ ಕೂಟದಲ್ಲಿ ಹತ್ತು ತಂಡಗಳು ಪಾಲ್ಗೊಳ್ಳುತ್ತಿದ್ದು, ಫೆ.12 ಮತ್ತು 13ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.
ಈ ಬಾರಿ ಐಪಿಎಲ್ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳಲಿರುವ ಆಟಗಾರರ ಅಂತಿಮ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಒಟ್ಟು 590 ಮಂದಿ ಆಟಗಾರರ ಪಟ್ಟಿಯಲ್ಲಿ 370 ಭಾರತೀಯರು ಮತ್ತು 220 ವಿದೇಶಿ ಆಟಗಾರರ ಹೆಸರು ಅಂತಿಮವಾಗಿದೆ. ಎರಡು ಕೋಟಿ ಮೂಲ ಬೆಲೆ ಹೊಂದಿರುವ 48 ಆಟಗಾರರು, 1.5 ಕೋಟಿ ರೂ. ಮೂಲಬೆಲೆ ಹೊಂದಿರುವ 20 ಆಟಗಾರರು ಮತ್ತು ಒಂದು ಕೋಟಿ ಮೂಲಬೆಲೆ ಹೊಂದಿರುವ 34 ಮಂದಿ ಆಟಗಾರರ ಹೆಸರು ಅಂತಿಮವಾಗಿದೆ.
ವಿಶೇಷವೆಂದರೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಮನೋಜ್ ತಿವಾರಿ ಹೆಸರು ಕೂಡಾ ಅಂತಿಮ ಪಟ್ಟಿಯಲ್ಲಿದೆ. ಈ ಹಿಂದೆ ಭಾರತ ತಂಡದ ಪರವೂ ಆಡಿರುವ ಮನೋಜ್ ತಿವಾರಿ 2018ರಲ್ಲಿ ಕೊನೆಯದಾಗಿ ಐಪಿಎಲ್ ಪಂದ್ಯವಾಡಿದ್ದರು.
ಇದನ್ನೂ ಓದಿ:ಐಪಿಎಲ್ ಹರಾಜಿನ ಅಂತಿಮ ಪಟ್ಟಿ ರೆಡಿ: ಕಣದಲ್ಲಿದ್ದಾರೆ 590 ಆಟಗಾರರು
ಐಪಿಎಲ್ ನ ಡೆಲ್ಲಿ ಡೇರ್ ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರವಾಗಿ ಮನೋಜ್ ತಿವಾರಿ ಆಡಿದ್ದಾರೆ. ಒಟ್ಟು 98 ಐಪಿಎಲ್ ಪಂದ್ಯವಾಡಿರುವ ಮನೋಜ್ ತಿವಾರಿ 1695 ರನ್ ಗಳಿಸಿದ್ದಾರೆ. ಈ ಬಾರಿ ತಿವಾರಿ 50 ಲಕ್ಷ ರೂ ಮೂಲಬೆಲೆ ಹೊಂದಿದ್ದಾರೆ.
ಅರ್ಜುನ್ ಗೆ 20 ಲಕ್ಷ ರೂ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್ ಹರಾಜಿಗೆ ಮರಳಿದ್ದಾರೆ. 2021ರ ಹರಾಜಿನಲ್ಲಿ ಅರ್ಜುನ್ ರನ್ನು ಮೂಲಬೆಲೆಗೆ ಮುಂಬೈ ಇಂಡಿಯನ್ಸ್ ತಂಡ ಖರೀದಿ ಮಾಡಿತ್ತು. ಆದರೆ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿಲ್ಲ. ಅರ್ಜುನ್ ಮೂಲಬೆಲೆ 20 ಲಕ್ಷ ರೂ.
ಆಸ್ಟ್ರೇಲಿಯಾದ 47, ಅಫ್ಘಾನ್ 17, ಬಾಂಗ್ಲಾದೇಶದ 5, ಇಂಗ್ಲೆಂಡ್ ನ 24, ಐರ್ಲೆಂಡ್ ನ 5, ನ್ಯೂಜಿಲ್ಯಾಂಡ್ ನ 24, ದಕ್ಷಿಣ ಆಫ್ರಿಕಾದ 33, ಶ್ರೀಲಂಕಾದ 23, ವೆಸ್ಟ್ ಇಂಡೀಸ್ ನ 34, ನಮೀಬಿಯಾದ 3, ಸ್ಕಾಟ್ಲೆಂಡ್ ನ 2, ಜಿಂಬಾಬ್ವೆ, ನೇಪಾಳ ಮತ್ತು ಯುಎಸ್ಎ ನ ತಲಾ ಓರ್ವ ಆಟಗಾರರು ಅಂತಿಮ ಲಿಸ್ಟ್ ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್ ಫಿಂಚ್
ಸ್ಪಿನ್ ಎದುರಿಸುವುದೇ ಕಠಿನ ಸವಾಲು: ಉಸ್ಮಾನ್ ಖ್ವಾಜಾ
ಬ್ರಾತ್ವೇಟ್-ಟಿ. ಚಂದರ್ಪಾಲ್ ದಾಖಲೆ: ಮೊದಲ ವಿಕೆಟಿಗೆ 336 ರನ್ನುಗಳ ಜತೆಯಾಟ
ಸೌರಾಷ್ಟ್ರ ವಿರುದ್ಧ ರಣಜಿ ಸೆಮಿಫೈನಲ್ ಪಂದ್ಯಕ್ಕೆ ರಾಜ್ಯ ತಂಡ ಪ್ರಕಟ
ನ್ಯೂ ಬ್ಯಾಲೆನ್ಸ್ ಒಳಾಂಗಣ ಗ್ರ್ಯಾನ್ ಪ್ರಿ: ಚಿನ್ನ ಗೆದ್ದ ತೇಜಸ್ವಿನ್ ಶಂಕರ್
MUST WATCH
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್ ಫಿಂಚ್
ಬೆಳ್ತಂಗಡಿ: ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ
ಮಂಗಳವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು
ಜೋಶಿ ಅವರು ದೇಶಸ್ಥರಲ್ಲ ಅವರು ಮಾಧ್ವ ಸಂಪ್ರದಾಯಕ್ಕೆ ಸೇರಿದವರು: ಅಶೋಕ್ ಹಾರನಹಳ್ಳಿ
ಸ್ಪಿನ್ ಎದುರಿಸುವುದೇ ಕಠಿನ ಸವಾಲು: ಉಸ್ಮಾನ್ ಖ್ವಾಜಾ